ಕ್ರೀಡೆ

ಕಳಪೆ ಪ್ರದರ್ಶನ: ಜಸ್ಪ್ರಿತ್ ಬುಮ್ರಾಗೆ ಮೈದಾನದಲ್ಲೇ ಸುನಿಲ್ ಗವಾಸ್ಕರ್ ಬುದ್ದಿ ಮಾತು; ಹೇಳಿದ್ದೇನು ಗೊತ್ತಾ?

Reading…
Follow Us

ವರದಿಗಾರ-ಮೇ.05: ವಿಶ್ವದ ನಂಬರ್ ಒನ್ ಬೌಲರ್ ಎನಿಸಿಕೊಂಡಿರುವ ಜಸ್ಪ್ರಿತ್ ಬೂಮ್ರಾ ಅವರು 2026ರ ಐಪಿಎಲ್‌ನಲ್ಲಿ ಸತತವಾಗಿ ಕಳಪೆ ಪ್ರದರ್ಶನ ತೋರುತ್ತಿದ್ದಾರೆ. ಅದರಲ್ಲೂ ಸೋಮವಾರ (ಮೇ 4) ನಡೆದ ಲಕ್ನೋ ಸೂಪರ್ ಜೈಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಮೂರು ನೋಬಾಲ್‌ ಎಸೆದಿದ್ದು, ಈ ಬಗ್ಗೆ ಭಾರತೀಯ ಕ್ರಿಕೆಟ್‌ನ ದಂತಕಥೆ ಸುನಿಲ್ ಗವಾಸ್ಕರ್ ತೀವ್ರ ಅಸಮಾಧನ ವ್ಯಕ್ತಪಡಿಸಿದ್ದು ತರಾಟೆಗೆತ್ತಿಕೊಂಡಿದ್ದಾರೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಮೇ 4ರ ಸೋಮವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಲ್‌ಎಸ್‌ಜಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಬೌಲಿಂಗ್ ಮಾಡಿದ ವಿಶ್ವದ ನಂಬರ್ 1 ಬೌಲರ್ ಜಸ್ಪ್ರಿತ್ ಬುಮ್ರಾ ಅವರು ಒಂದು ವಿಕೆಟ್‌ ಪಡೆಯದೇ ಮೂರು ನೋ ಬಾಲ್‌ ಎಸೆಯುವುದರ ಜೊತೆಗೆ ಹೆಚ್ಚು ರನ್‌ ನೀಡಿ ಮತ್ತೆ ದುಬಾರಿಯಾದರು. ಇದರ ಬೆನ್ನಲ್ಲೇ ಬುಮ್ರಾ ನೋ-ಬಾಲ್ ತಪ್ಪುಗಳ ಬಗ್ಗೆ ಸುನಿಲ್ ಗವಾಸ್ಕರ್ ಮಾತನಾಡಿದ್ದಾರೆ. ಪಂದ್ಯದ ವೇಳೆ ಕಾಮೆಂಟರಿ ಮಾಡುತ್ತಿದ್ದ ಸುನಿಲ್ ಗವಾಸ್ಕರ್, “ಇದು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ನೀವು ಒಬ್ಬ ವೃತ್ತಿಪರ ಕ್ರಿಕೆಟಿಗ. ವೈಡ್ ಎಸೆದರೆ ತಪ್ಪೇನಿಲ್ಲ. ಆದರೆ ಪದೇ ಪದೇ ನೋ-ಬಾಲ್ ಹಾಕುವುದು ಸರಿಯಲ್ಲ,” ಎಂದು ನೇರವಾಗಿಯೇ ಬುಮ್ರಾ ಬುದ್ದಿಮಾತು ಹೇಳಿದ್ದಾರೆ.  ಒಂದೇ ಪಂದ್ಯದಲ್ಲಿ ಮೂರು ನೋಬಾಲ್ ಎಸೆದ ಬುಮ್ರಾ ಬುಮ್ರಾ ಎಸೆತದ 14ನೇ ಓವರ್‌ನಲ್ಲಿ ಎಲ್‌ಎಸ್‌ಜಿ ತಂಡದ ಹಿಮ್ಮತ್ ಸಿಂಗ್ ಔಟಾಗಿದ್ದರು. ಆದರೆ ಅದು ನೋ-ಬಾಲ್ ಆಗಿದ್ದರಿಂದ ಹಿಮ್ಮತ್ ಸಿಂಗ್‌ಗೆ ದೊಡ್ಡ ಜೀವದಾನ ಸಿಕ್ಕಂತಾಯಿತು. ಬಳಿಕ ಅವರು ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಮೊತ್ತವನ್ನು 228ಕ್ಕೆ ಏರಿಸಲು ಪ್ರಮುಖ ಪಾತ್ರವಹಿಸಿದರು. ಬುಮ್ರಾ ಆ ಒಂದೇ ಓವರ್‌ನಲ್ಲಿ ಎರಡು ನೋ-ಬಾಲ್ ಮತ್ತು ಒಂದು ವೈಡ್ ಎಸೆದಿದ್ದರು.

ಈ ಪಂದ್ಯದಲ್ಲಿ ಬುಮ್ರಾ 4 ಓವರ್‌ಗಳಲ್ಲಿ 45 ರನ್ ನೀಡಿ ಯಾವುದೇ ವಿಕೆಟ್ ಪಡೆಯದೆ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. 2026ರ ಐಪಿಎಲ್ ಬುಮ್ರಾ ಪಾಲಿಗೆ ಅತ್ಯಂತ ಕಳಪೆ ಸೀಸನ್ ಆಗಿ ಪರಿಣಮಿಸಿದ್ದು, ಅವರು ಈವರೆಗೆ 10 ಪಂದ್ಯಗಳಲ್ಲಿ ಕೇವಲ 3 ವಿಕೆಟ್ ಪಡೆದಿದ್ದು, ಒಟ್ಟು 8 ನೋ ಬಾಲ್‌ಗಳನ್ನು ಎಸೆದು ಗಮನ ಸೆಳೆದಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

‘ಲವ್ ಜಿಹಾದ್’ ಆರೋಪ: ಭೋಪಾಲ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ದಾಳಿ, ಮುಖಕ್ಕೆ ಮಸಿ, ಸೆಗಣಿ ಬಳಿದು ಅವಮಾನ

ರಾಜ್ಯ ಸುದ್ದಿ

“TVK – Try Vijay As King”; ನಟ ವಿಜಯ್‌ ಅದ್ವಿತೀಯ ಗೆಲುವಿಗೆ ಶಿವರಾಜ್‌ ಕುಮಾರ್‌ ಅಭಿನಂದನೆ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

From Across Varadigara

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!