ರಾಷ್ಟ್ರೀಯ ಸುದ್ದಿ

ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಕೋಮು ಶಕ್ತಿಗಳನ್ನು ಹೊರಗಿಡಬೇಕು: TVK ಗೆ ಸರಕಾರ ರಚಿಸಲು ಕಾಂಗ್ರೆಸ್‌ ಷರತ್ತು

Reading…
Follow Us

ವರದಿಗಾರ-ಮೇ.06: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (2026) ಅಭೂತಪೂರ್ವ ಮತ್ತು ದಾಖಲೆಯ ಗೆಲುವು ಸಾಧಿಸಿರುವ ನಟ ದಳಪತಿ ವಿಜಯ್‌ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸರ್ಕಾರ ರಚಿಸಲು ಕಾಂಗ್ರೆಸ್ ಬೆಂಬಲ ಘೋಷಿಸಿದೆ. ವಿಜಯ್ ಮನವಿ ಮೇರೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಷರತ್ತುಬದ್ದ ಬೆಂಬಲ ನೀಡಿರುವುದಾಗಿ ಪಕ್ಷ ತಿಳಿಸಿದೆ.

ನಟ ವಿಜಯ್ ಸ್ಥಾಪಿಸಿದ ಟಿವಿಕೆ ಪಕ್ಷವು ಮೊದಲ ಚುನಾವಣೆಯಲ್ಲಿ ತಮಿಳುನಾಡಿನ ಯುವಕರು ಸೇರಿದಂತೆ ಎಲ್ಲ ವರ್ಗದ ಮತದಾರರ ಆರ್ಶೀವಾದ ಪಡೆದು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಆದರೆ ತಮಿಳುನಾಡಿನ ಒಟ್ಟು 234 ಸೀಟುಗಳ ಪೈಕಿ ಟಿವಿಕೆಗೆ 107 ಸೀಟುಗಳನ್ನು ಪಡೆದಿದೆ. ರಾಜ್ಯದಲ್ಲಿ ಆದರೆ ಸರ್ಕಾರ ರಚನೆಗೆ 118 ಸೀಟುಗಳ ಅಗತ್ಯವಿದೆ. ಹೀಗಾಗಿ ಬೆಂಬಲ ಕೋರಿದ ವಿಜಯ್ ಅವರಿಗೆ ಕಾಂಗ್ರೆಸ್ ಸಹಕಾರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖಂಡರು ಚರ್ಚಿಸಿ ನಿರ್ಧರಿಸಿದ್ದಾರೆ.

ಕಾಂಗ್ರೆಸ್‌ ನೀಡಿದ ಷರತ್ತುಗಳೇನು?

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಟಿವಿಕೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ. ಆದರೆ ಸಂವಿಧಾನ ತತ್ವಾದರ್ಶಗಳ ಮೇಲೆ ನಂಬಿಕೆ ಇಡದ ಕೋಮು ಶಕ್ತಿಗಳನ್ನು ಹೊರಗಿಡಬೇಕೆಂದು ಷರತ್ತು ವಿಧಿಸಿದೆ. ಥಂಥೈ ಪೆರಿಯಾರ್ ಅವರ ಸಾಮಾಜಿಕ ನ್ಯಾಯ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆದರ್ಶಗಳ ಮೇಲೆ ಕಾಂಗ್ರೆಸ್‌ ದಶಕಗಳಿಂದ ನಂಬಿಕೆ ಇಟ್ಟುಕೊಂಡು ಬಂದಿದೆ. ಹೀಗಾಗಿ ಇವುಗಳನ್ನು ವಿರೋಧಿಸುವ ಶಕ್ತಿಯನ್ನು ಟಿವಿಕೆ ಹೊರಗಿಡಬೇಕು ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಮತ್ತು ಟಿವಿಕೆ ಜೊತೆಗೆ ಇದು ಕೇವಲ ಸರ್ಕಾರ ರಚನೆಗಾಗಿ ಮೈತ್ರಿ ಒಂದೇ ಅಲ್ಲ. ಪರಸ್ಪರ ಸಿದ್ಧಾಂತ, ತತ್ವಾದರ್ಶಗಳ ಗೌರವಿಸುವ ಸಹಕಾರವಾಗಿದೆ. ಮುಖ್ಯವಾಗಿ ತಮಿಳುನಾಡು ಸರ್ಕಾರ ರಚನೆಗೆ ಒಟ್ಟಾಗುವ ಜೊತೆಗೆ ಲೋಕಸಭಾ, ವಿಧಾನಸಭಾ ಸೇರಿ ಭವಿಷ್ಯದ ಚುನಾವಣೆಗಳಿಗೂ ಇದೇ ಸಹಕಾರ ಮುಂದುವರಿಯಬೇಕು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಟಿವಿಕೆ ವಿಜಯ್ ಅವರ ನೇತೃತ್ವದಲ್ಲಿ ಜಂಟಿಯಾಗಿ ತಮಿಳುನಾಡಿನಲ್ಲಿ ಜಾತ್ಯಾತೀತ, ಕಲ್ಯಾಣಪರ ಸರ್ಕಾರ ರಚಿಸಲು ರಾಜ್ಯದ ಯುವಕರು, ನಾಗರಿಕರು ಆಶೀರ್ವಾದ ಮಾಡಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

From Across Varadigara

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ