ದೆಹಲಿ ಸರ್ಕಾರದ ‘ವಿದ್ಯಾ ವಾಹಿನಿ ಯೋಜನೆ’ಯಡಿ 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ನೀಡಲಾದ ಉಚಿತ ಸೈಕಲ್ಗಳ ಖರೀದಿಯಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ಗಂಭೀರ ಆರೋಪ ಮಾಡಿದೆ. ಎಎಪಿ ನಾಯಕರು ಸೋಮವಾರ ಸೈಕಲ್ ತುಳಿದುಕೊಂಡು ದೆಹಲಿ ವಿಧಾನಸೌಧಕ್ಕೆ ಆಗಮಿಸುವ ಮೂಲಕ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು.
ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್ ಅವರ ಪ್ರಕಾರ, ಮಾರುಕಟ್ಟೆಯಲ್ಲಿ ಸುಮಾರು 4,200 ರೂಪಾಯಿಗೆ ಲಭ್ಯವಿರುವ ಸಾಮಾನ್ಯ ಮಾದರಿಯ ಸೈಕಲ್ಗೆ ಸರ್ಕಾರ ಪ್ರತಿ ಯೂನಿಟ್ಗೆ 6,957 ರೂಪಾಯಿ ಪಾವತಿಸಿದೆ. ‘ಹೀರೋ ಬೋನ್ ಫೈರ್’ ಮಾದರಿಯ ಸೈಕಲ್ಗಳಿಗೆ ‘ಸ್ಕೈಲರ್’ ಎಂಬ ಲೇಬಲ್ ಅಂಟಿಸಿ, ಪ್ರತಿ ಸೈಕಲ್ ಮೇಲೆಯೂ ಸುಮಾರು 3,000 ರೂಪಾಯಿ ಹೆಚ್ಚುವರಿ ಹಣ ಪಾವತಿಸಿ ಹಗರಣ ನಡೆಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಒಟ್ಟು 1.3 ಲಕ್ಷ ಸೈಕಲ್ಗಳ ಪೂರೈಕೆಯಲ್ಲಿ ಹತ್ತಾರು ಕೋಟಿ ರೂಪಾಯಿ ಕಮಿಷನ್ ಪಡೆದಿರುವ ಸಾಧ್ಯತೆಯಿದೆ ಎಂದು ಶಾಸಕರು ವಿಧಾನಸಭೆಯಲ್ಲಿ ಸೈಕಲ್ಗಳನ್ನು ಪ್ರದರ್ಶಿಸಿ ತೋರಿಸಿದರು. ಅಲ್ಲದೆ, ಟೆಂಡರ್ ಪ್ರಕ್ರಿಯೆಯಲ್ಲಿ ಸಣ್ಣ ಪೂರೈಕೆದಾರರನ್ನು ಹೊರಗಿಡಲು ಕಠಿಣ ನಿಯಮಗಳನ್ನು ಹೇರಲಾಗಿದೆ ಎಂದು ಆರೋಪಿಸಿ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.
ಈ ಆರೋಪಗಳನ್ನು ದೆಹಲಿ ಸರ್ಕಾರ ಸಂಪೂರ್ಣವಾಗಿ ನಿರಾಕರಿಸಿದ್ದು, ಇವು ರಾಜಕೀಯ ಪ್ರೇರಿತ ಹೇಳಿಕೆಗಳು ಎಂದು ಹೇಳಿದೆ. ಸೈಕಲ್ಗಳನ್ನು ಸರ್ಕಾರದ ಇ-ಮಾರ್ಕೆಟ್ಪ್ಲೇಸ್ (GeM) ಪೋರ್ಟಲ್ ಮೂಲಕವೇ ಅತ್ಯಂತ ಪಾರದರ್ಶಕವಾಗಿ ಮತ್ತು ಸಿವಿಸಿ ನಿಯಮಾವಳಿಗಳಿಗೆ ಅನುಗುಣವಾಗಿಯೇ ಖರೀದಿ ಮಾಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮಾರುಕಟ್ಟೆ ಬೆಲೆಗಳು ಗುಣಮಟ್ಟ ಮತ್ತು ಸೌಲಭ್ಯಗಳ ಆಧಾರದ ಮೇಲೆ ವ್ಯತ್ಯಾಸವಾಗುತ್ತವೆ ಹಾಗೂ ಖಾಸಗಿ ಸಂಸ್ಥೆಯೊಂದರ ಆಧಾರರಹಿತ ದೂರಿನ ಮೇಲೆ ಈ ರೀತಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಆಡಳಿತ ಪಕ್ಷ ಸಮರ್ಥಿಸಿಕೊಂಡಿದೆ.
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?
‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ
ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!
ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಜುಲೈ 31ರಂದು ‘ವಿದ್ಯಾ ವಾಹಿನಿ’ ಯೋಜನೆಗೆ ಚಾಲನೆ ನೀಡಿದ್ದು, ಸುಮಾರು 90 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರ್ಷ 1.4 ಲಕ್ಷ ಹೆಣ್ಣುಮಕ್ಕಳಿಗೆ ಉಚಿತ ಸೈಕಲ್ ತಲುಪಿಸುವ ಗುರಿ ಹೊಂದಲಾಗಿದೆ. ಸದ್ಯ ಈ ವಿಚಾರದಲ್ಲಿ ಯಾವುದೇ ಸ್ವತಂತ್ರ ತನಿಖೆಗೆ ಆದೇಶ ಹೊರಬಿದ್ದಿಲ್ಲವಾದರೂ, ರಾಜಕೀಯ ಕೆಸರೆರಚಾಟದ ನಡುವೆಯೇ ಸೈಕಲ್ ವಿತರಣೆ ಪ್ರಕ್ರಿಯೆ ಮುಂದುವರಿದಿದೆ.
