ರಾಷ್ಟ್ರೀಯ ಸುದ್ದಿ

ನಟ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಶನಿವಾರ ಅಧಿಕಾರ ಸ್ವೀಕಾರ

Reading…
Follow Us

ವರದಿಗಾರ-ಮೇ.08: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದಲೂ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಶನಿವಾರ 11ಗಂಟೆಗೆ ಮುಖ್ಯಮಂತ್ರಿಯಾಗಿ ತಮಿಳುನಾಡಿನ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷಕ್ಕೆ ವಿವಿಧ ಪಕ್ಷಗಳ ನಾಯಕರು ಬೆಂಬಲ ಕೊಟ್ಟಿದ್ದಾರೆ. ವಿಜಯ್ ಅವರು ಅಧಿಕಾರಕ್ಕೆ ಬರುವುದಕ್ಕೆ ಮುಖ್ಯವಾಗಿ ಹಾಗೂ ಪರೋಕ್ಷವಾಗಿ ಡಿಎಂಕೆ ಪಕ್ಷವೇ ಕಾರಣವಾಗಿದೆ.

ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಯಶಸ್ವಿಯಾಗಿದ್ದಾರೆ. ಬಹುಮತ ಸಾಬೀತುಪಡಿಸಲು ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ 118 ಶಾಸಕರ ಬೆಂಬಲ ಬೇಕಾಗಿತ್ತು. ಆದರೆ 108 ಸ್ಥಾನಗಳಲ್ಲಿ ಟಿವಿಕೆ ಗೆಲುವು ಸಾಧಿಸಿದ್ದು, ಬಹುಮತಕ್ಕೆ 10 ಶಾಸಕರ ಕೊರತೆ ಇತ್ತು. ಟಿವಿಕೆಗೆ ಇದೀಗ 121 ಶಾಸಕರ ಬೆಂಬಲ ಸಿಕ್ಕಂತಾಗಿದೆ.

121 ಶಾಸಕರ ಬೆಂಬಲ ಪತ್ರಗಳೊಂದಿಗೆ ವಿಜಯ್ ಅವರು ಶುಕ್ರವಾರ ಸಂಜೆ ತಮಿಳುನಾಡು ರಾಜ್ಯಪಾಲರಾದ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಬಲ ಪತ್ರಗಳನ್ನು ಹಸ್ತಾಂತರಿಸಿದ ಮೇಲೆ ರಾಜ್ಯಪಾಲರು ನೂತನ ಸರ್ಕಾರ ರಚನೆಗೆ ಸಮ್ಮತಿ ಕೊಟ್ಟಿದ್ದಾರೆ. ಅಂತಿಮವಾಗಿ ಶನಿವಾರ ಬೆಳಿಗ್ಗೆ 11 ಗಂಟೆಗೆ ನಟ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿವಿಧ ಪಕ್ಷಗಳಿಂದ ಬೆಂಬಲಿಸಿದ ಶಾಸಕರ ಸಂಖ್ಯೆ
ಟಿವಿಕೆ (TVK) 108
ಕಾಂಗ್ರೆಸ್ 5
ವಿಸಿಕೆ (VCK) 2
ಸಿಪಿಐ (CPI) 2
ಸಿಪಿಐ (ಎಂ) [CPM] 2
ಐಯುಎಂಎಲ್ (IUML) 2
ಒಟ್ಟು ಬೆಂಬಲ 121

ಡಿಎಂಕೆ ಪಕ್ಷ ಪರೋಕ್ಷ ಬೆಂಬಲವೇ ಕಾರಣ ಇನ್ನು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಪರೋಕ್ಷವಾಡಿ ಡಿಎಂಕೆ ಪಕ್ಷದ ಸಹಕಾರವೇ ಕಾರಣವಾಗಿದೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದವು. ಟಿವಿಕೆಗೆ ಬಹುಮತ ಕೊರತೆ ಎದುರಾದ ಸಂದರ್ಭದಲ್ಲಿ ಡಿಎಂಕೆ ಪಕ್ಷದ ಮುಖ್ಯಸ್ಥ ಹಾಗೂ ತಮಿಳುನಾಡಿನ ಮಾಜಿ ಸಿಎಂ ಎಂ.ಕೆ ಸ್ಟಾಲಿನ್ ಅವರು ನಮ್ಮ ಮಿತ್ರ ಪಕ್ಷಗಳು ಟಿವಿಕೆಗೆ ಬೆಂಬಲ ಕೊಟ್ಟರೆ ಆಕ್ಷೇಪವಿಲ್ಲ ಎಂದು ಹೇಳಿದ್ದರು. ಇದಾದ ನಂತರ ನಡೆದ ಬೆಳವಣಿಗೆಯಲ್ಲಿ ಎಡಪಕ್ಷಗಳು, ವಿಸಿಕೆ ಹಾಗೂ ಮುಸ್ಲಿಂ ಲೀಗ್ ಪಕ್ಷಗಳು ವಿಜಯ್‌ಗೆ ಬೆಂಬಲ ಸೂಚಿಸಿವೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ರಾಜಭವನದಲ್ಲಿ ವಿಜಯ್ ಶಿಷ್ಟಾಚಾರದ ನಡೆ: ರಾಜ್ಯಪಾಲರ ಭೇಟಿಯ ಹಿಂದಿನ ಕುತೂಹಲಕಾರಿ ಸಂಗತಿಗಳು ಬಹಿರಂಗ !

ರಾಷ್ಟ್ರೀಯ ಸುದ್ದಿ

ವಿಜಯ್ ಸಂಪುಟದ ‘ನವ ನಾಯಕರು’: ಯುವ ನಟಿ, ಮಾಜಿ IRS ಅಧಿಕಾರಿ ಸೇರಿ 9 ಮಂದಿ ಸಚಿವರಾಗಿ ಪದಗ್ರಹಣ

ರಾಷ್ಟ್ರೀಯ ಸುದ್ದಿ

ತಮಿಳುನಾಡು ರಾಜಕೀಯದಲ್ಲಿ ಹೊಸ ಯುಗ: ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ

ರಾಷ್ಟ್ರೀಯ ಸುದ್ದಿ

ಸಮಾಜದಲ್ಲಿ ಅಭಿಮಾನಿಗಳ ಪ್ರಾಬಲ್ಯ ಹೆಚ್ಚಾಗಿದೆ: ವಿಜಯ್ ಗೆಲುವಿಗೆ ಪ್ರಕಾಶ್ ರೈ ಪ್ರತಿಕ್ರಿಯೆ

ರಾಷ್ಟ್ರೀಯ ಸುದ್ದಿ

ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ; ವಿಜಯ್ ಅಧ್ಯಕ್ಷತೆಯಲ್ಲಿ ಟಿವಿಕೆ ಶಾಸಕರ ಸಭೆ

From Across Varadigara

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!