ರಾಜ್ಯ ಸುದ್ದಿ

ನಟ ವಿಜಯ್‌ ಕ್ರಾಂತಿಕಾರಿ ಗೆಲುವು; ಯೂಟರ್ನ್‌ ಹೊಡೆದ ಡಿಕೆ ಶಿವಕುಮಾರ್

Reading…
Follow Us

ವರದಿಗಾರ-ಮೇ.05: ತಮಿಳುನಾಡಿನ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಗೆ ಅಚ್ಚರಿ ತಂದಿದೆ. ತಮಿಳುನಾಡಿನಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಹೇಳಿ ಯೂಟರ್ನ್‌ ಹೊಡೆದಿದ್ದಾರೆ.

ಚುನಾವಣಾ ಪೂರ್ವ ʼವಿಜಯ್‌ ಒಬ್ಬ ಅಪ್ರಬುದ್ಧ ರಾಜಕಾರಣಿʼ ಎಂದು ಡಿಕೆ ಶಿವಕುಮಾರ್‌ ಹೇಳಿಕೆ ನೀಡಿದ್ದರು. ಸದ್ಯ ವಿಜಯ್‌ ಎಲ್ಲಾ ಅಡೆತಡೆಗಳನ್ನು ಮೀರಿ ಗೆದ್ದು ಬೀಗಿದ್ದಾರೆ. ವಿಜಯ್‌ ಅದ್ವಿತೀಯ ಗೆಲುವು ಡಿಕೆ ಶಿವಕುಮಾರ್‌ ಗೆ ಸಿಕ್ಕಿದ ಮಂಗಳಾರತಿ ಎಂಬುವುದಾಗಿ ರಾಜಕೀಯ ವಿಶ್ಲೇಷಕರು ಆಡಿಕೊಳ್ಳುತ್ತಿದ್ದಾರೆ.

 ಡಿಕೆ ಶಿವಕುಮಾರ್‌ ಮಾಧ್ಯಮದೊಂದಿಗೆ ಮಾತನಾಡುತ್ತಾ, ಅಲ್ಲಿನ ಜನರ ನಾಡಿಮಿಡಿತಕ್ಕೆ ಸ್ಪಂದಿಸಲು ನಮಗೆ ಸಾಧ್ಯವಾಗಲಿಲ್ಲ. ಈ ಚುನಾವಣೆಯಲ್ಲಿ ನಟ ವಿಜಯ್ ಅವರ ಮುಂದಾಳತ್ವದ ಪಕ್ಷ ಶೇಕಡಾ 30 ರಿಂದ 40 ರಷ್ಟು ಮತ ಪಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಇದಕ್ಕಿಂತಲೂ ಹೆಚ್ಚಿನ ಜನ ಬೆಂಬಲ ಅವರಿಗೆ ಸಿಕ್ಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ಸ್ಟಾಲಿನ್ ಅವರ ಜೊತೆ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ ಎನ್ನುವ ಬಗ್ಗೆ ಕೇಳಿದಾಗ, “ಆ ಬಗ್ಗೆ ಮಾತನಾಡಲು ನಾನು ಹೋಗುವುದಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದಂತೆ ನಾವೆಲ್ಲರೂ ಅಲ್ಲಿಗೆ ಹೋಗಿದ್ದೇವಲ್ಲ” ಎಂದರು. ಕೇರಳದಲ್ಲಿ ಯುಡಿಎಫ್ ಗೆಲುವು ನಿರೀಕ್ಷಿತವಾಗಿತ್ತು. ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದ ಎಲ್‌ಡಿಎಫ್ ವಿರುದ್ಧ ಜನ ಬದಲಾವಣೆ ಬಯಸಿದ್ದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೇ ನಮಗೆ ಇದರ ಸುಳಿವು ಸಿಕ್ಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಜ್ಯ ಸುದ್ದಿ

“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!

ರಾಜ್ಯ ಸುದ್ದಿ

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ

ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

From Across Varadigara

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ