ರಾಷ್ಟ್ರೀಯ ಸುದ್ದಿ

“ಗಂಗಾ ನದಿಗೆ ಮಾಂಸಾಹಾರದ ತ್ಯಾಜ್ಯ ಎಸೆಯುವುದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ”: ವಾರಣಾಸಿ ಇಫ್ತಾರ್ ಪ್ರಕರಣದ ಎಂಟು ಮಂದಿಗೆ ಅಲಹಾಬಾದ್ ಹೈಕೋರ್ಟ್‌ನಿಂದ ಜಾಮೀನು

Reading…
Follow Us

ಸಾರಾಂಶ

ವಾರಣಾಸಿಯ ಗಂಗಾನದಿಯ ದೋಣಿಯಲ್ಲಿ ಇಫ್ತಾರ್ ವೇಳೆ ಮಾಂಸಾಹಾರ ಸೇವಿಸಿ ಅದರ ತ್ಯಾಜ್ಯವನ್ನು ನದಿಗೆ ಎಸೆದ ಪ್ರಕರಣದ 8 ಮುಸ್ಲಿಂ ಯುವಕರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. ಈ ಕೃತ್ಯ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತದೆ ಎಂದು ಕೋರ್ಟ್ ಹೇಳಿದೆಯಾದರೂ, ಯುವಕರ ಪಶ್ಚಾತ್ತಾಪ ಮತ್ತು 2 ತಿಂಗಳ ಜೈಲು ವಾಸವನ್ನು ಪರಿಗಣಿಸಿ ಈ ಆದೇಶ ನೀಡಿದೆ.

ವಾರಣಾಸಿ: ರಂಜಾನ್ ತಿಂಗಳಲ್ಲಿ ವಾರಣಾಸಿಯ ಗಂಗಾನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಮಾಂಸಾಹಾರ ಸೇವನೆ ಮಾಡಿ ಅದರ ತ್ಯಾಜ್ಯವನ್ನು ನದಿಗೆ ಎಸೆದ ಆರೋಪದ ಮೇಲೆ ಬಂಧಿತರಾಗಿದ್ದ 14 ಮುಸ್ಲಿಂ ಯುವಕರ ಪೈಕಿ ಎಂಟು ಜನರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಗಂಗಾನದಿಗೆ ಇರುವ ಪವಿತ್ರ ಸ್ಥಾನಮಾನದ ಹಿನ್ನೆಲೆಯಲ್ಲಿ, ಅಲ್ಲಿ ಮಾಂಸಾಹಾರದ ತ್ಯಾಜ್ಯವನ್ನು ಎಸೆಯುವುದು ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದರೆ, ಆರೋಪಿಗಳು ತಮ್ಮ ಕೃತ್ಯಕ್ಕೆ ಲಿಖಿತವಾಗಿ ಕ್ಷಮೆಯಾಚಿಸಿರುವುದು ಮತ್ತು ಕಳೆದ ಎರಡು ತಿಂಗಳಿನಿಂದ ಕಸ್ಟಡಿಯಲ್ಲಿ ಇರುವುದನ್ನು ಪರಿಗಣಿಸಿ ಕೋರ್ಟ್ ಈ ಆದೇಶ ನೀಡಿದೆ.

ಮೇ 15 ರಂದು ಹೊರಡಿಸಲಾದ ಪ್ರತ್ಯೇಕ ಆದೇಶಗಳಲ್ಲಿ, ನ್ಯಾಯಮೂರ್ತಿ ರಾಜೀವ್ ಲೋಚನ್ ಶುಕ್ಲಾ ಅವರು ಐದು ಜನರಿಗೆ ಜಾಮೀನು ನೀಡಿದರೆ, ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರ ಪೀಠವು ಮೊಹಮ್ಮದ್ ಸಮೀರ್, ಮೊಹಮ್ಮದ್ ಅಹ್ಮದ್ ರಜಾ ಮತ್ತು ಮೊಹಮ್ಮದ್ ಫೈಜಾನ್ ಸೇರಿ ಮೂವರಿಗೆ ಜಾಮೀನು ಮಂಜೂರು ಮಾಡಿದೆ. ಉಳಿದ ಆರು ಮಂದಿ ಆರೋಪಿಗಳು ಇನ್ನೂ ನ್ಯಾಯಾಂಗ ಬಂಧನದಲ್ಲೇ ಇದ್ದು, ಅವರ ಅರ್ಜಿಗಳ ವಿಚಾರಣೆ ಬಾಕಿ ಇದೆ.

ಪ್ರಕರಣದ ಹಿನ್ನೆಲೆ ಮತ್ತು ಬಂಧನ
2026 ರ ಮಾರ್ಚ್ 15 ರಂದು ರಂಜಾನ್ ಉಪವಾಸದ ವೇಳೆ ಈ ಘಟನೆ ನಡೆದಿತ್ತು. ಯುವಕರ ಗುಂಪೊಂದು ಗಂಗಾನದಿಯ ಮೋಟಾರ್ ಬೋಟ್‌ನಲ್ಲಿ ಕುಳಿತು ಚಿಕನ್ ಬಿರಿಯಾನಿ ಸೇವಿಸುತ್ತಿರುವ ಮತ್ತು ಅದರ ತ್ಯಾಜ್ಯವನ್ನು ನದಿಗೆ ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿದ ಭಾರತೀಯ ಜನತಾ ಯುವ ಮೋರ್ಚಾ (BJYM) ವಾರಣಾಸಿ ಘಟಕದ ಅಧ್ಯಕ್ಷ ರಜತ್ ಜೈಸ್ವಾಲ್ ಅವರು ಮಾರ್ಚ್ 17 ರಂದು ಕೋತ್ವಾಲಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗಂಗಾನದಿಯನ್ನು ಹಿಂದೂಗಳು ದೇವತೆಯಾಗಿ ಪೂಜಿಸುವುದರಿಂದ ಈ ಕೃತ್ಯವು ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದರ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಯ ಸೆಕ್ಷನ್ 298 (ಆರಾಧನಾ ಸ್ಥಳ ಅಪವಿತ್ರಗೊಳಿಸುವುದು), 299 (ಧಾರ್ಮಿಕ ಭಾವನೆಗಳಿಗೆ ಧಕ್ಕೆ), 196 (ದ್ವೇಷ ಬಿತ್ತುವುದು), 270 (ಸಾರ್ವಜನಿಕ ಉಪಟಳ), 279 (ನೀರನ್ನು ಕಲುಷಿತಗೊಳಿಸುವುದು) ಮತ್ತು ಜಲ ಮಾಲಿನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ 20 ರ ಹರೆಯದ 14 ಯುವಕರನ್ನು ಬಂಧಿಸಿದ್ದರು. ನಂತರದ ದಿನಗಳಲ್ಲಿ, ದೋಣಿ ಮಾಲೀಕರಿಂದ ಒತ್ತಾಯಪೂರ್ವಕವಾಗಿ ದೋಣಿ ಕಸಿದುಕೊಳ್ಳಲಾಗಿದೆ ಎಂಬ ಹೇಳಿಕೆ ಆಧರಿಸಿ ಪೊಲೀಸರು ಇವರ ಮೇಲೆ ಬಿಎನ್‌ಎಸ್ ಸೆಕ್ಷನ್ 308(5) (ಸುಲಿಗೆ) ಅಡಿಯಲ್ಲಿಯೂ ಹೆಚ್ಚುವರಿ ಸೆಕ್ಷನ್ ಸೇರಿಸಿದ್ದರು. ವಾರಣಾಸಿಯ ಕೆಳ ನ್ಯಾಯಾಲಯಗಳು ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದವು.

ಹೈಕೋರ್ಟ್ ವೀಕ್ಷಣೆ ಮತ್ತು ಜಾಮೀನಿಗೆ ಕಾರಣಗಳು
ಐದು ಜನರಿಗೆ ಜಾಮೀನು ನೀಡುವಾಗ ಹೈಕೋರ್ಟ್‌ನ ನ್ಯಾಯಮೂರ್ತಿ ರಾಜೀವ್ ಲೋಚನ್ ಶುಕ್ಲಾ ಅವರು, “ಪ್ರಸ್ತುತ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ರೋಜಾ ಇಫ್ತಾರ್ ಕೂಟವನ್ನು ನಡೆಸಿದ್ದಾರೆ. ಈ ವೇಳೆ ಮಾಂಸಾಹಾರ ಸೇವಿಸಿ ಅದರ ತ್ಯಾಜ್ಯವನ್ನು ಗಂಗಾನದಿಗೆ ಎಸೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನ್ಯಾಯಾಲಯದ ನಿಷ್ಪಕ್ಷಪಾತ ಅಭಿಪ್ರಾಯದ ಪ್ರಕಾರ, ಈ ಕೃತ್ಯವು ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳನ್ನು ನೋಯಿಸುವಂತದ್ದು ಎಂಬ ಆರೋಪದಲ್ಲಿ ತಥ್ಯವಿದೆ” ಎಂದು ಹೇಳಿದರು.

ಆದಾಗ್ಯೂ, ಆರೋಪಿಗಳು ಮತ್ತು ಅವರ ಕುಟುಂಬದವರು ಸಮಾಜಕ್ಕೆ ಉಂಟಾದ ನೋವಿಗೆ ವಿಷಾದ ವ್ಯಕ್ತಪಡಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಕೆ ಮಾಡಿರುವುದನ್ನು ಕೋರ್ಟ್ ಗಮನಿಸಿತು. “ಆರೋಪಿಗಳು ಪ್ರಾಮಾಣಿಕವಾಗಿ ಪಶ್ಚಾತ್ತಾಪ ಪಟ್ಟಿದ್ದಾರೆ ಮತ್ತು ಇವರ ಮೇಲಿನ ಆರಂಭಿಕ ಸೆಕ್ಷನ್‌ಗಳ ಗರಿಷ್ಠ ಶಿಕ್ಷೆ 7 ವರ್ಷಗಳಿಗಿಂತ ಕಡಿಮೆ ಇದೆ” ಎಂದು ಜಡ್ಜ್ ತಿಳಿಸಿದರು. ಇನ್ನು ಪೊಲೀಸರು ನಂತರ ಸೇರಿಸಿದ ‘ಸುಲಿಗೆ’ (Extortion) ಆರೋಪದ ಬಗ್ಗೆ ಸಂಶಯ ವ್ಯಕ್ತಪಡಿಸಿದ ನ್ಯಾಯಾಲಯ, ಘಟನೆ ನಡೆದ ತಕ್ಷಣ ದೋಣಿ ಮಾಲೀಕರು ದೂರು ನೀಡದ ಕಾರಣ ಈ ಆರೋಪದ ಸಮಯದ ಬಗ್ಗೆ ಅನುಮಾನ ಮೂಡುತ್ತದೆ ಎಂದು ಹೇಳಿತು.

ಮತ್ತೊಂದು ಆದೇಶದಲ್ಲಿ ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರು, ಯುವಕರು ಇನ್ನು ಮುಂದೆ ಇಂತಹ ಕೃತ್ಯಗಳನ್ನು ಮರುಕಳಿಸುವುದಿಲ್ಲ ಎಂದು ಲಿಖಿತ ಭರವಸೆ ನೀಡಿರುವುದನ್ನು ಮತ್ತು ಮಾರ್ಚ್ 17 ರಿಂದ ಅವರು ಜೈಲಿನಲ್ಲಿ ಕಳೆದಿರುವ ಅವಧಿಯನ್ನು ಪರಿಗಣಿಸಿ ಜಾಮೀನು ನೀಡಿದ್ದಾರೆ.
ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ಇನ್ನು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿಲ್ಲ ಹಾಗೂ ವಿಡಿಯೋದ ವಿಧಿವಿಜ್ಞಾನ (Forensic) ವರದಿಗಾಗಿ ಕಾಯುತ್ತಿದ್ದಾರೆ. ಜಾಮೀನು ಪಡೆದ ಎಂಟು ಯುವಕರು ವೈಯಕ್ತಿಕ ಬಾಂಡ್ ಹಾಗೂ ಕೆಲವು ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಬಿಡುಗಡೆಯಾಗಲಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಾಣಿಸದ್ದು - ಕೇಳಿಸದ್ದು

‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಆರೋಪ!

ಕಾಣಿಸದ್ದು - ಕೇಳಿಸದ್ದು

ಉತ್ತರ ಪ್ರದೇಶ: ವಾರ್ಡ್ ಅಭಿವೃದ್ಧಿ ನಿರ್ಲಕ್ಷ್ಯದ ವಿರುದ್ಧ ತಲೆ ಬೋಳಿಸಿ ಪ್ರತಿಭಟಿಸಿದ ಬಿಜೆಪಿ ಕೌನ್ಸಿಲರ್

ರಾಷ್ಟ್ರೀಯ ಸುದ್ದಿ

ಯೋಗಿ ಆದಿತ್ಯನಾಥ್‌ಗೆ ಇಕ್ರಾ ಹಸನ್ ತಿರುಗೇಟು: “ಯಾವುದೇ ಸಮುದಾಯವನ್ನು ಗುರಿ ಮಾಡುವ ಹಕ್ಕು ಅವರಿಗಿಲ್ಲ”

ರಾಷ್ಟ್ರೀಯ ಸುದ್ದಿ

ರಸ್ತೆ ತಡೆದು ನಮಾಜ್‌ ಮಾಡಿದರೆ ಕಾನೂನು ಕ್ರಮ, ಮಸೀದಿಗಳಲ್ಲಿ ‘ಶಿಫ್ಟ್’ ಪದ್ಧತಿ ಬಳಸಿ: ಯೋಗಿ ಆದಿತ್ಯನಾಥ್ ಎಚ್ಚರಿಕೆ

From Across Varadigara

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ವಿಶೇಷ ಲೇಖನ

ದ್ವೇಷದ ಚಿತೆಗೆ ಮಾನವೀಯತೆಯ ಅಗ್ನಿಸ್ಪರ್ಶ: ಇರ್ಫಾನಾ ಇಕ್ಬಾಲ್ ಮಾನವೀಯ ಪಾಠ | ಕೇರಳದ ರಿಯಲ್ ಸ್ಟೋರಿ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ಸಾಮಾಜಿಕ ತಾಣ

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ ಜಾಹೀರಾತು; ಮೆಟಾ ಬೇಜವಾಬ್ದಾರಿತನ ಬಯಲಿಗೆಳೆದ ಬಿಬಿಸಿ ತನಿಖಾ ವರದಿ

ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಅಂತಾರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಹೊಸ ಆದೇಶ: ಸರ್ಕಾರಿ ನೌಕರರು ಮತ್ತು ಸೇನಾಧಿಕಾರಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ನಿಷೇಧ