ಶಾಲಾ ಸಮವಸ್ತ್ರದ ಜೊತೆಗೆ ಹಿಜಾಬ್ (ತಲೆವಸ್ತ್ರ) ಧರಿಸಲು ಅನುಮತಿ ನೀಡಬೇಕೆಂದು ಕೋರಿ ಮುಸ್ಲಿಂ ಬಾಲಕಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಕಡ್ಡಾಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ಸೂಕ್ತವಾದ ಧಾರ್ಮಿಕ ಆಧಾರ ಅಥವಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಒದಗಿಸಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಜೆ.ಜೆ. ಮುನಿರ್ ಹಾಗೂ ನ್ಯಾಯಮೂರ್ತಿ ಇಂದ್ರಜೀತ್ ಶುಕ್ಲಾ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಶಾಲಾ ಆಡಳಿತ ಮಂಡಳಿಯು ವಿಧಿಸಿರುವ ಸಮವಸ್ತ್ರ ನಿಯಮವು ಪಕ್ಷಪಾತವಿಲ್ಲದ, ಶಿಸ್ತು ಮತ್ತು ಸಂಸ್ಥೆಯ ಗುರುತನ್ನು ಕಾಯ್ದುಕೊಳ್ಳುವ ಉದ್ದೇಶ ಹೊಂದಿದ್ದಾಗ, ವಿದ್ಯಾರ್ಥಿಗಳು ಅದರಲ್ಲಿ ಬದಲಾವಣೆ ಕೋರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಖಾಸಗಿ ಅನುದಾನರಹಿತ ಶಾಲೆ ಠಾಗೋರ್ ಪಬ್ಲಿಕ್ ಸ್ಕೂಲ್ನಲ್ಲಿ 10ನೇ ತರಗತಿ ಪೂರ್ಣಗೊಳಿಸಿ 11ನೇ ತರಗತಿಗೆ ಪ್ರವೇಶ ಬಯಸಿದ್ದ ಸುಕೈನಾ ರಿಜ್ವಿ ಎಂಬ ಅಪ್ರಾಪ್ತ ಬಾಲಕಿ ತನ್ನ ತಾಯಿಯ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದರು. ತಾವು 6ನೇ ತರಗತಿಯಿಂದ 10ನೇ ತರಗತಿಯವರೆಗೆ ಸಮವಸ್ತ್ರದ ಜೊತೆಗೆ ಸ್ಕಾರ್ಫ್ ಧರಿಸಿಕೊಂಡೇ ಓದಿದ್ದು, ಆಗ ಶಾಲಾ ಆಡಳಿತ ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಆದರೆ ಈಗ 11ನೇ ತರಗತಿ ಪ್ರವೇಶಕ್ಕೆ ಹಿಜಾಬ್ ಧರಿಸಬಾರದು ಎಂದು ಆಡಳಿತ ಮಂಡಳಿ ಷರತ್ತು ವಿಧಿಸುತ್ತಿದೆ. ಇದು ಸಂವಿಧಾನದ ವಿಧಿ 14 ಮತ್ತು 19(1)(ಎ) ಅಡಿಯಲ್ಲಿ ಲಭ್ಯವಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.
ರಿಕ್ಷಾ ಚಾಲಕ ಗುರುಪ್ರಸಾದ್ ಹೃದಯಾಘಾತದಿಂದ ನಿಧನ: ಮೃತರಿಗೆ ಗೌರವಾರ್ಥ ಮಿಲಾದ್ ಕಾರ್ಯಕ್ರಮ ಮುಂದೂಡಿದ ಮಸೀದಿ ಆಡಳಿತ
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
“ಇಮ್ರಾನ್ ಖಾನ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್ನಲ್ಲಿ ವಿನೂತನ ಪ್ರತಿಭಟನೆ
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ಹಿಜಾಬ್ ಇಸ್ಲಾಂನ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ: ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ
ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ
ಮಂಗಳೂರು ರೈಲ್ವೆ ವ್ಯಾಪ್ತಿ ವರ್ಗಾವಣೆ: ತೀರ್ಮಾನ ತಡೆಹಿಡಿಯಲು ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ ವಿ. ಡಿ. ಸತೀಶನ್
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಘೋಷಿಸಿದ ಸಿಜೆಪಿ
ಇಸ್ರೇಲ್ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ
ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು
ಈ ವಾದವನ್ನು ತಳ್ಳಿಹಾಕಿದ ಹೈಕೋರ್ಟ್, ಹಿಂದೆ ಶಾಲಾ ಆಡಳಿತ ಮಂಡಳಿಯು ಆಕ್ಷೇಪಿಸದಿರುವುದು ಅಜಾಗರೂಕತೆ ಅಥವಾ ನಿಷ್ಕ್ರಿಯತೆಯಿಂದ ಆಗಿರಬಹುದು, ಆದರೆ ಅದನ್ನೇ ಹಕ್ಕು ಎಂದು ಪ್ರತಿಪಾದಿಸಲು ಬರುವುದಿಲ್ಲ ಎಂದು ಹೇಳಿದೆ. ಶಾಲಾ ಛಾಯಾಚಿತ್ರಗಳನ್ನು ಪರಿಶೀಲಿಸಿದ ಪೀಠ, ಅರ್ಜಿದಾರ ಬಾಲಕಿಯನ್ನು ಹೊರತುಪಡಿಸಿ ಅದೇ ಸಮುದಾಯಕ್ಕೆ ಸೇರಿದ ಇತರ ಯಾವ ವಿದ್ಯಾರ್ಥಿನಿಯೂ ಸ್ಕಾರ್ಫ್ ಧರಿಸಿಲ್ಲ ಎಂಬುದನ್ನು ಗಮನಿಸಿತು. ಸಮವಸ್ತ್ರದ ಮೂಲ ಉದ್ದೇಶವೇ ತರಗತಿಯಲ್ಲಿ ಧರ್ಮ-ನಿರಪೇಕ್ಷ ವಾತಾವರಣ ಮತ್ತು ಸಮಾನತೆಯನ್ನು ಕಾಯ್ದುಕೊಳ್ಳುವುದು. ವ್ಯಕ್ತಿಗತ ಕಾರಣಗಳಿಗಾಗಿ ಸಮವಸ್ತ್ರದ ನಿಯಮವನ್ನು ಸಡಿಲಗೊಳಿಸುತ್ತ ಹೋದರೆ ಶಾಲೆಯ ಶಿಸ್ತು ಮತ್ತು ಸಮವಸ್ತ್ರದ ಕಲ್ಪನೆಯೇ ಇಲ್ಲವಾಗುತ್ತದೆ ಎಂದು ಕೋರ್ಟ್ ಹೇಳಿದೆ.
2022ರಲ್ಲಿ ಕರ್ನಾಟಕ ಹೈಕೋರ್ಟ್ನ ಪೂರ್ಣ ಪೀಠವು ನೀಡಿದ್ದ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂಬ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಉಲ್ಲೇಖಿಸಿದೆ. ಈ ತೀರ್ಪಿನಿಂದ ಭಿನ್ನವಾದ ನಿಲುವು ತಳೆಯಲು ಯಾವುದೇ ಸೂಕ್ತ ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ಪ್ರಸ್ತುತ ಸುಪ್ರೀಂ ಕೋರ್ಟ್ನಲ್ಲಿ ಈ ವಿಷಯವಾಗಿ ಭಿನ್ನ ತೀರ್ಪು ಬಂದಿದ್ದು ಅಂತಿಮ ಸ್ಪಷ್ಟತೆ ದೊರೆತಿಲ್ಲವಾದರೂ, ಹೈಕೋರ್ಟ್ಗಳು ಈ ವಿಚಾರದಲ್ಲಿ ಒಂದೇ ರೀತಿಯ ತೀರ್ಮಾನಕ್ಕೆ ಬಂದಿವೆ ಎಂದು ತಿಳಿಸಿದೆ.
ಸಂವಿಧಾನದ 25ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಪ್ರತಿಪಾದಿಸಲು ಬಲವಾದ ಕಾನೂನಾತ್ಮಕ ಮತ್ತು ಸತ್ಯಾಧಾರಿತ ಬುನಾದಿ ಅಗತ್ಯ. ಬರಿ ಹೇಳಿಕೆಗಳ ಆಧಾರದ ಮೇಲೆ ಅದನ್ನು ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ಬಾಲಕಿಯ ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿದೆ.
