ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

Reading…
Follow Us

ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಮೆರವಣಿಗೆಯನ್ನು ತಡೆಯಲು ಅಶ್ರುವಾಯು, ಲಾಠಿಚಾರ್ಜ್‌ ಮತ್ತು ಇಂಟರ್ನೆಟ್ ಬಂದ್‌ ಬಳಸಿದ ಆರೋಪ; ತನಿಖೆಗೆ ಮಾನವ ಹಕ್ಕುಗಳ ಸಂಸ್ಥೆ ಒತ್ತಾಯ

ದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿಗೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ ಹಾಗೂ ಇಂಟರ್ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ಜಾಗತಿಕ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್ನ್ಯಾಷನಲ್ ಆರೋಪಿಸಿದೆ. ಈ ಕುರಿತು ತಕ್ಷಣವೇ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.

ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎನ್ನಲಾದ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ‌ ಪಾರ್ಟಿ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆದರೆ, ಪೊಲೀಸರು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದವರ ಮೇಲೆ ಬಲಪ್ರಯೋಗ ಮಾಡಿದ್ದಾರೆ ಎಂದು ಆಮ್ನೆಸ್ಟಿ ಹೇಳಿದೆ. ಪ್ರತಿಭಟನೆಯನ್ನು ತಡೆಯಲು ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸಿ, ಮೊಬೈಲ್ ಇಂಟರ್ನೆಟ್‌ ಸೇವೆಯನ್ನು ಬಂದ್‌ ಮಾಡಲಾಗಿತ್ತು ಎಂದು ಸಂಸ್ಥೆ ಉಲ್ಲೇಖಿಸಿದೆ.

ಪೊಲೀಸರ ನಡವಳಿಕೆಯನ್ನು ಖಂಡಿಸಿರುವ ಆಮ್ನೆಸ್ಟಿ, ಪ್ರತಿಭಟನಾಕಾರರ ವಿರುದ್ಧ ನಡೆದಿದೆ ಎನ್ನಲಾದ ಕಾನೂನುಬಾಹಿರ ನಡವಳಿಕೆಗಳ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಜವಾಬ್ದಾರರನ್ನು ಹೊಣೆಗಾರರನ್ನಾಗಿ ಮಾಡಬೇಕಾಗಿದೆ ಎಂದು ಭಾರತೀಯ ಅಧಿಕಾರಿಗಳನ್ನು ಆಗ್ರಹಿಸಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

From Across Varadigara

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ಸಾಮಾಜಿಕ ತಾಣ

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ ಜಾಹೀರಾತು; ಮೆಟಾ ಬೇಜವಾಬ್ದಾರಿತನ ಬಯಲಿಗೆಳೆದ ಬಿಬಿಸಿ ತನಿಖಾ ವರದಿ

ಅಂತಾರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಹೊಸ ಆದೇಶ: ಸರ್ಕಾರಿ ನೌಕರರು ಮತ್ತು ಸೇನಾಧಿಕಾರಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ನಿಷೇಧ

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ವಿಶೇಷ ಲೇಖನ

ದ್ವೇಷದ ಚಿತೆಗೆ ಮಾನವೀಯತೆಯ ಅಗ್ನಿಸ್ಪರ್ಶ: ಇರ್ಫಾನಾ ಇಕ್ಬಾಲ್ ಮಾನವೀಯ ಪಾಠ | ಕೇರಳದ ರಿಯಲ್ ಸ್ಟೋರಿ

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ