‘ಜನಸೇವೆಯನ್ನು ಮಾಡದ ಮೋದಿಯವರೇ, ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ, ರಫೇಲ್ ಒಪ್ಪಂದದ ಬಗ್ಗೆಯಾದರೂ ಮಾತನಾಡಿ’
ನಿಮ್ಮಂತಹ ಮಹಾನ್ ಭಾಷಣಕಾರರು ಹೀಗೆ ಮೌನವಾದರೆ ಹೇಗೆ?
ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? ಸಿದ್ದರಾಮಯ್ಯ ಪ್ರಶ್ನೆ
ವರದಿಗಾರ (ಅ.14): ‘ಹಿಂದೊಮ್ಮೆ ನಮ್ಮ ರಾಜ್ಯ ಸರ್ಕಾರವನ್ನು 10% ಕಮಿಷನ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ, ಈ ‘ರಫೇಲ್ ಒಪ್ಪಂದ’ದಲ್ಲಿ ತಮಗೆಷ್ಟು ಪ್ರತಿಶತ ಕಮಿಷನ್ ಸಿಕ್ಕಿದೆ ಎಂದು ನೀವು ದೇಶದ ಜನತೆಗೆ ಉತ್ತರಿಸುವ ಸಮಯ ಬಂದಿದೆ. ನಿಮ್ಮಂತಹ ಮಹಾನ್ ಭಾಷಣಕಾರರು ಹೀಗೆ ಮೌನವಾದರೆ ಹೇಗೆ?’ ಎಂದು ವ್ಯಂಗ್ಯವಾಡುತ್ತಾ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯರವರು ‘ರಫೇಲ್ ಒಪ್ಪಂದ’ ಬಗ್ಗೆ ತನ್ನ ಸರಣಿ ಟ್ವೀಟ್ ನಲ್ಲಿ ಮೋದಿಯವರನ್ನು ಉಲ್ಲೇಖಿಸಿ ದೇಶದಲ್ಲಿ ಪ್ರಸ್ತುತ ಚರ್ಚಾ ವಸ್ತುವಾಗಿರುವ ಮತ್ತು ಬೃಹತ್ ಮೊತ್ತದ ಹಗರಣವಾಗಿರುವ ‘ರಫೇಲ್ ಒಪ್ಪಂದ’ದ ಬಗ್ಗೆ ಮಾತನಾಡುವಂತೆ ಮತ್ತು ನಿಮ್ಮಂತಹ ಮಹಾನ್ ಭಾಷಣಕಾರರು ಹೀಗೆ ಮೌನವಾದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ.
‘ಮಾನ್ಯ ನರೇಂದ್ರ ಮೋದಿಯವರೇ ಪ್ರಧಾನ ಸೇವಕರಾಗಿ ತಾವು ಜನಸೇವೆಯನ್ನು ಮಾಡಲಿಲ್ಲ. ಚೌಕಿದಾರರಾಗಿ ನಿಮ್ಮ ಕಣ್ಣ ಮುಂದೆಯೇ ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ. ರಫೇಲ್ ಒಪ್ಪಂದದ ಬಗ್ಗೆಯಾದರೂ ಮಾತನಾಡಿ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೋದಿಯವರಿಗೆ ಸಲಹೆ ನೀಡಿದ್ದಾರೆ.
ತನ್ನ ಅದೇ ಟ್ವೀಟ್ ನಲ್ಲಿ, ‘ರಫೇಲ್ ಒಪ್ಪಂದದಲ್ಲಿ ತಾವು ಅಂಬಾನಿಯವರಿಗೆ ತೋರುತ್ತಿರುವ ನಿಷ್ಠೆಯನ್ನು ದೇಶದ ಬಗೆಗೆ ತೋರಿದ್ದರೆ ರೂಪಾಯಿ ಮೌಲ್ಯವಿಂದು ಡಾಲರ್ ಎದುರು 74 ರೂ.ಗಡಿ ದಾಟುತ್ತಿರಲಿಲ್ಲ’ ಎಂದೂ ಹೇಳಿದ್ದಾರೆ.
ಸರಣಿ ಟ್ವೀಟ್ ನ ಮತ್ತೊಂದು ಟ್ವೀಟ್ ನಲ್ಲಿ, ‘ದೇಶದ ಪ್ರಧಾನಿಯೊಬ್ಬರು ಬಂಡವಾಳಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹಿಂದೊಮ್ಮೆ ನಮ್ಮ ರಾಜ್ಯ ಸರ್ಕಾರವನ್ನು 10% ಕಮಿಷನ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದ ಪ್ರಧಾನಿ @narendramodi ಅವರೇ, ಈ #RafaleDeal ನಲ್ಲಿ ತಮಗೆಷ್ಟು ಪ್ರತಿಶತ ಕಮಿಷನ್ ಸಿಕ್ಕಿದೆ ಎಂದು ನೀವು ದೇಶದ ಜನತೆಗೆ ಉತ್ತರಿಸುವ ಸಮಯ ಬಂದಿದೆ. ನಿಮ್ಮಂತಹ ಮಹಾನ್ ಭಾಷಣಕಾರರು ಹೀಗೆ ಮೌನವಾದರೆ ಹೇಗೆ?#RahulGandhiWithHAL pic.twitter.com/kvYB9ELRhR
— Siddaramaiah (@siddaramaiah) October 13, 2018
ದೇಶದ ಪ್ರಧಾನಿಯೊಬ್ಬರು ಬಂಡವಾಳ ಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? #RahulGandhiWithHAL pic.twitter.com/18uzl29MoU
— Siddaramaiah (@siddaramaiah) October 13, 2018
ಮಾನ್ಯ @narendramodi ಅವರೇ, ಪ್ರಧಾನ ಸೇವಕರಾಗಿ ಜನ ಸೇವೆಯನ್ನು ಮಾಡಲಿಲ್ಲ, ಚೌಕಿದಾರರಾಗಿ ಕಣ್ಣ ಮುಂದೆಯೇ ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ, #RafaleDeal ಬಗ್ಗೆಯಾದರೂ ಮಾತನಾಡಿ.#RafaleDeal ನಲ್ಲಿ ತಾವು ಅಂಬಾನಿಯವರಿಗೆ ತೋರುತ್ತಿರುವ ನಿಷ್ಠೆಯನ್ನು ದೇಶದ ಬಗೆಗೆ ತೋರಿದ್ದರೆ ಡಾಲರ್ ಮೌಲ್ಯ ಇಂದು ರೂ.74ರ ಗಡಿ ದಾಟುತ್ತಿರಲಿಲ್ಲ.
— Siddaramaiah (@siddaramaiah) October 13, 2018
