ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ತರಗತಿ ನಡೆಯುತ್ತಿದ್ದ ವೇಳೆ ಸಿಮೆಂಟ್ ಛಾವಣಿ ಕುಸಿದುಬಿದ್ದಿದೆ. ಈ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯವಾಗಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಕಾಂಕ್ರೀಟ್ ಚೂರುಗಳು ಮಕ್ಕಳ ಬೆಂಚ್ಗಳ ಮೇಲೆ ಬಿದ್ದಿದ್ದು, ಕಬ್ಬಿಣದ ರಾಡ್ಗಳು ಹೊರಚಾಚಿಕೊಂಡಿರುವುದು ಕಂಡುಬಂದಿದೆ.
ಶಾಲಾ ಕಟ್ಟಡವು ಹಳೆಯದಾಗಿದ್ದು, ಶಿಥಿಲಾವಸ್ಥೆಯಲ್ಲಿದ್ದರೂ ತರಗತಿಗಳನ್ನು ನಡೆಸಲಾಗುತ್ತಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಕಟ್ಟಡದ ದುರಸ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬುದು ಗ್ರಾಮಸ್ಥರ ದೂರು.
ಶಾಲಾ ಕಟ್ಟಡವನ್ನು ಸಂಪೂರ್ಣವಾಗಿ ದುರಸ್ತಿಗೊಳಿಸಿ, ಸುರಕ್ಷಿತ ವಾತಾವರಣ ನಿರ್ಮಿಸುವವರೆಗೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಆಕ್ರೋಶಗೊಂಡ ಪೋಷಕರು ಪಟ್ಟು ಹಿಡಿದಿದ್ದಾರೆ.
ಬ್ಯಾಂಕಿಂಗ್ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್ಇನ್ಸ್ಪೆಕ್ಟರ್ ಸೇವೆಯಿಂದ ಅಮಾನತು
‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ
ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?
