ರಾಷ್ಟ್ರೀಯ ಸುದ್ದಿ

‘ಲವ್ ಜಿಹಾದ್’ ಆರೋಪ: ಭೋಪಾಲ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ದಾಳಿ, ಮುಖಕ್ಕೆ ಮಸಿ, ಸೆಗಣಿ ಬಳಿದು ಅವಮಾನ

Reading…
Follow Us

ಸಾರಾಂಶ

ಭೋಪಾಲ್‌ನಲ್ಲಿ ‘ಲವ್ ಜಿಹಾದ್’ ಆರೋಪದ ಹೆಸರಿನಲ್ಲಿ ಮುಸ್ಲಿಂ ಯುವಕ ಆರಿಫ್ ಖಾನ್ ಮೇಲೆ ಗುಂಪು ದಾಳಿ ನಡೆಸಿ, ಅರ್ಧನಗ್ನಗೊಳಿಸಿ ಮುಖಕ್ಕೆ ಮಸಿ, ಸೆಗಣಿ ಹಚ್ಚಿ ಅವಮಾನಿಸಿದೆ. ಯುವತಿ ಪರಸ್ಪರ ಸಮ್ಮತಿಯ ಲಿವ್-ಇನ್ ಸಂಬಂಧ ಎಂದು ಹೇಳಿದರೂ ದೌರ್ಜನ್ಯ ನಡೆದಿದೆ. ದೂರು ಇಲ್ಲದ ಕಾರಣ ಪ್ರಕರಣ ದಾಖಲಾಗಿಲ್ಲ.

ವರದಿಗಾರ; ಭೋಪಾಲ್-ಮೇ.11: ಹಿಂದೂ ಸಂಘಟನೆಯ ಕೆಲ ಕಾರ್ಯಕರ್ತರು ‘ಲವ್ ಜಿಹಾದ್’ ಆರೋಪದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಭೋಪಾಲ್‌ನ ಹೋಟೆಲೊಂದರಲ್ಲಿ ಮುಸ್ಲಿಂ ಯುವಕನ ಮೇಲೆ ದಾಳಿ ನಡೆಸಿ, ಸಾರ್ವಜನಿಕವಾಗಿ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ.

ಮಾಹಿತಿಯ ಪ್ರಕಾರ, ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಒಟ್ಟಿಗೆ ವಾಸ್ತವ್ಯ ಮಾಡುತ್ತಿದ್ದಾರೆ ಎಂಬ ಅನುಮಾನದಿಂದ ಕೆಲವರು ಹೋಟೆಲ್‌ಗೆ ನುಗ್ಗಿದ್ದಾರೆ. ನಂತರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ ಇಬ್ಬರನ್ನೂ ಹೊರತೆಗೆದು, ಯುವಕನನ್ನು ‘ಲವ್ ಜಿಹಾದ್’ ಆರೋಪದಲ್ಲಿ ಗುರಿಯಾಗಿಸಿ, ತೀವ್ರ ಹಲ್ಲೆ ನಡೆಸಿದ್ದಾರೆ.

ಯುವತಿ ಕಳೆದ ಐದು ವರ್ಷಗಳಿಂದ ಪರಸ್ಪರ ಸಮ್ಮತಿಯ ಆಧಾರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೇವೆ ಎಂದು ಹೇಳಿದರೂ, ಗುಂಪು ಆ ಮಾತನ್ನು ಲೆಕ್ಕಿಸದೆ ದೌರ್ಜನ್ಯ ನಡೆಸಿದೆ ಎಂದು ವರದಿಯಾಗಿದೆ.

ಯುವಕನನ್ನು 27 ವರ್ಷದ ಆರಿಫ್ ಖಾನ್ (ಜಹಾಂಗೀರಾಬಾದ್) ಎಂದು ಗುರುತಿಸಲಾಗಿದ್ದು, ಯುವಕನಿಗೆ ತೀವ್ರ ಹಲ್ಲೆ ನಡೆಸಿ, ಅರ್ಧನಗ್ನ ಸ್ಥಿತಿಗೆ ತಂದು, ಮುಖಕ್ಕೆ ಮಸಿ ಮತ್ತು ಸೆಗಣಿ ಹಚ್ಚಿ ಸಾರ್ವಜನಿಕವಾಗಿ ಅವಮಾನಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಯುವತಿ ತನ್ನ ಇಚ್ಛೆಯಿಂದ ಆರಿಫ್‌ರನ್ನು ಭೇಟಿಯಾಗಿದ್ದಾಗಿ, ಯಾವುದೇ ಬಲವಂತ, ಲೈಂಗಿಕ ದೌರ್ಜನ್ಯ ಅಥವಾ ಧರ್ಮಾಂತರ ಒತ್ತಡ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನ ನಿವಾಸದಲ್ಲಿ ನಿರ್ಬಂಧಗಳಿದ್ದ ಕಾರಣ ಹೋಟೆಲ್‌ನಲ್ಲಿ ಭೇಟಿಯಾದೆ ಎಂದು ಹೇಳಿದ್ದಾರೆ. ಅವರು ಆರಿಫ್ ವಿರುದ್ಧ ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ.

ಈ ಪ್ರಕರಣದಲ್ಲಿ ಅಧಿಕೃತ ದೂರು ಸಲ್ಲಿಸದ ಕಾರಣ ದಾಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲೆಯಾಗಿಲ್ಲ. ಆದರೆ ಪೊಲೀಸ್ ತನಿಖೆಯಲ್ಲಿ ಆರಿಫ್ ಖಾನ್ ವಿರುದ್ಧ ವಂಚನೆ, ಕಳವು ಮತ್ತು ನಂಬಿಕೆ ದ್ರೋಹ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗೋವಿಂದಪುರ ಠಾಣಾ ಅಧಿಕಾರಿಗಳು ಎಲ್ಲಾ ಪಕ್ಷಗಳನ್ನು ಕರೆದು ಸಮಾಲೋಚನೆ ನಡೆಸಿ, ಸಾಮಾಜಿಕ ಸೌಹಾರ್ದ ಕಾಪಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿವೆ.

Join our WhatsApp Channel Get every Varadigara story instantly
How does this story make you feel?
Share:
POLL

ಭೋಪಾಲ್ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕ್ರೀಡೆ

ಕಳಪೆ ಪ್ರದರ್ಶನ: ಜಸ್ಪ್ರಿತ್ ಬುಮ್ರಾಗೆ ಮೈದಾನದಲ್ಲೇ ಸುನಿಲ್ ಗವಾಸ್ಕರ್ ಬುದ್ದಿ ಮಾತು; ಹೇಳಿದ್ದೇನು ಗೊತ್ತಾ?

ರಾಜ್ಯ ಸುದ್ದಿ

“TVK – Try Vijay As King”; ನಟ ವಿಜಯ್‌ ಅದ್ವಿತೀಯ ಗೆಲುವಿಗೆ ಶಿವರಾಜ್‌ ಕುಮಾರ್‌ ಅಭಿನಂದನೆ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

From Across Varadigara

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!