ವರದಿಗಾರ; ಭೋಪಾಲ್-ಮೇ.11: ಹಿಂದೂ ಸಂಘಟನೆಯ ಕೆಲ ಕಾರ್ಯಕರ್ತರು ‘ಲವ್ ಜಿಹಾದ್’ ಆರೋಪದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಭೋಪಾಲ್ನ ಹೋಟೆಲೊಂದರಲ್ಲಿ ಮುಸ್ಲಿಂ ಯುವಕನ ಮೇಲೆ ದಾಳಿ ನಡೆಸಿ, ಸಾರ್ವಜನಿಕವಾಗಿ ಅವಮಾನಿಸಿದ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಒಟ್ಟಿಗೆ ವಾಸ್ತವ್ಯ ಮಾಡುತ್ತಿದ್ದಾರೆ ಎಂಬ ಅನುಮಾನದಿಂದ ಕೆಲವರು ಹೋಟೆಲ್ಗೆ ನುಗ್ಗಿದ್ದಾರೆ. ನಂತರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ ಇಬ್ಬರನ್ನೂ ಹೊರತೆಗೆದು, ಯುವಕನನ್ನು ‘ಲವ್ ಜಿಹಾದ್’ ಆರೋಪದಲ್ಲಿ ಗುರಿಯಾಗಿಸಿ, ತೀವ್ರ ಹಲ್ಲೆ ನಡೆಸಿದ್ದಾರೆ.
ಯುವತಿ ಕಳೆದ ಐದು ವರ್ಷಗಳಿಂದ ಪರಸ್ಪರ ಸಮ್ಮತಿಯ ಆಧಾರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೇವೆ ಎಂದು ಹೇಳಿದರೂ, ಗುಂಪು ಆ ಮಾತನ್ನು ಲೆಕ್ಕಿಸದೆ ದೌರ್ಜನ್ಯ ನಡೆಸಿದೆ ಎಂದು ವರದಿಯಾಗಿದೆ.
ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ
ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್
“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!
AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!
‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್ಮೇಲ್ ಆರೋಪ!
“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!
ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!
ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?
ಯುವಕನನ್ನು 27 ವರ್ಷದ ಆರಿಫ್ ಖಾನ್ (ಜಹಾಂಗೀರಾಬಾದ್) ಎಂದು ಗುರುತಿಸಲಾಗಿದ್ದು, ಯುವಕನಿಗೆ ತೀವ್ರ ಹಲ್ಲೆ ನಡೆಸಿ, ಅರ್ಧನಗ್ನ ಸ್ಥಿತಿಗೆ ತಂದು, ಮುಖಕ್ಕೆ ಮಸಿ ಮತ್ತು ಸೆಗಣಿ ಹಚ್ಚಿ ಸಾರ್ವಜನಿಕವಾಗಿ ಅವಮಾನಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸ್ ಠಾಣೆಯಲ್ಲಿ ಯುವತಿ ತನ್ನ ಇಚ್ಛೆಯಿಂದ ಆರಿಫ್ರನ್ನು ಭೇಟಿಯಾಗಿದ್ದಾಗಿ, ಯಾವುದೇ ಬಲವಂತ, ಲೈಂಗಿಕ ದೌರ್ಜನ್ಯ ಅಥವಾ ಧರ್ಮಾಂತರ ಒತ್ತಡ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತನ್ನ ನಿವಾಸದಲ್ಲಿ ನಿರ್ಬಂಧಗಳಿದ್ದ ಕಾರಣ ಹೋಟೆಲ್ನಲ್ಲಿ ಭೇಟಿಯಾದೆ ಎಂದು ಹೇಳಿದ್ದಾರೆ. ಅವರು ಆರಿಫ್ ವಿರುದ್ಧ ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ.
ಈ ಪ್ರಕರಣದಲ್ಲಿ ಅಧಿಕೃತ ದೂರು ಸಲ್ಲಿಸದ ಕಾರಣ ದಾಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲೆಯಾಗಿಲ್ಲ. ಆದರೆ ಪೊಲೀಸ್ ತನಿಖೆಯಲ್ಲಿ ಆರಿಫ್ ಖಾನ್ ವಿರುದ್ಧ ವಂಚನೆ, ಕಳವು ಮತ್ತು ನಂಬಿಕೆ ದ್ರೋಹ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗೋವಿಂದಪುರ ಠಾಣಾ ಅಧಿಕಾರಿಗಳು ಎಲ್ಲಾ ಪಕ್ಷಗಳನ್ನು ಕರೆದು ಸಮಾಲೋಚನೆ ನಡೆಸಿ, ಸಾಮಾಜಿಕ ಸೌಹಾರ್ದ ಕಾಪಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿವೆ.
