ಬಿಹಾರದ ನಲಂದಾ ಜಿಲ್ಲೆಯ ನೂರ್ಸರಾಯ್ ಬ್ಲಾಕ್ನ ಪಾರಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 18ರಂದು ಮಧ್ಯಾಹ್ನದ ಬಿಸಿಊಟ ಸೇವಿಸಿದ ನಂತರ ಕನಿಷ್ಠ 34 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಆಘಾತಕಾರಿ ಘಟನೆ ನಡೆದಿದೆ.
ಆಗಸ್ಟ್ 18ರ ಮಧ್ಯಾಹ್ನ ಸುಮಾರು 12:30ಕ್ಕೆ ಶಾಲೆಯ ಒಟ್ಟು 132 ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಆಲೂಗಡ್ಡೆ-ಸೋಯಾಬೀನ್ ಪಲ್ಯವನ್ನು ಬಡಿಸಲಾಗಿತ್ತು. ಕೆಲ ಮಕ್ಕಳು ಹೆಚ್ಚುವರಿ ಉಪ್ಪು ಕೇಳಿದಾಗ, ಅಡುಗೆಯವರು ಉಪ್ಪಿನ ಪಾತ್ರೆಯ ಪಕ್ಕದಲ್ಲೇ ಇಡಲಾಗಿದ್ದ ಡಿಟರ್ಜೆಂಟ್ ಪುಡಿಯನ್ನು ಗೊಂದಲದಿಂದ ತಂದು ಪಲ್ಯಕ್ಕೆ ಬೆರೆಸಿದ್ದಾರೆ ಎಂದು ಶಾಲೆಯ ಪ್ರಧಾನ ಶಿಕ್ಷಕ ಶೈಲೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ. ಇದನ್ನು ಸೇವಿಸಿದ ತಕ್ಷಣವೇ ಮಕ್ಕಳಿಗೆ ಗಂಟಲು ಉರಿ, ತೀವ್ರ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ.
ಕೂಡಲೇ ಜಾಗೃತರಾದ ಶಾಲಾ ಸಿಬ್ಬಂದಿ ಅಸ್ವಸ್ಥಗೊಂಡ ಮಕ್ಕಳನ್ನು ಬಿಹಾರಷರೀಫ್ ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ಜೈ ಪ್ರಕಾಶ್ ಸಿಂಗ್ ಮಾತನಾಡಿ, “ಪ್ರಸ್ತುತ ಎಲ್ಲ 34 ಮಕ್ಕಳಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿ ಗುಣಮುಖರಾಗುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್ನಲ್ಲಿ ವಿನೂತನ ಪ್ರತಿಭಟನೆ
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!
ಇನ್ನೊಂದೆಡೆ, ನಲಂದಾ ಜಿಲ್ಲಾ ಶಿಕ್ಷಣಾಧಿಕಾರಿ ಹೇಮಚಂದ್ರ ಅವರು ಶಾಲಾ ಆಹಾರದಲ್ಲಿ ಸರ್ಫ್ ಬೆರೆಸಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದ್ದು, ಪ್ರಕರಣದ ಕುರಿತು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಆಹಾರದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವೈದ್ಯಕೀಯ ಮತ್ತು ವಿಧಿವಿಜ್ಞಾನ ವರದಿ ಬಂದ ನಂತರವಷ್ಟೇ ನೈಜ ಕಾರಣ ತಿಳಿಯಲಿದೆ.
