ಜೈಪುರ: ಕಳೆದ 2023ರ ರಾಜಸ್ಥಾನ ವಿಧಾನಸಭೆ ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯದ ಒಬ್ಬರಿಗೂ ಟಿಕೆಟ್ ನೀಡದಿದ್ದ ಭಾರತೀಯ ಜನತಾ ಪಾರ್ಟಿ (ಬಿಜೆಪಿ), ಮುಂಬರುವ ಜೈಪುರ ಮಹಾನಗರ ಪಾಲಿಕೆ ಚುನಾವಣೆಗೆ ತನ್ನ 8 ಮುಸ್ಲಿಂ ನಾಯಕರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.
ಮಹಾನಗರ ಪಾಲಿಕೆಯ ಒಟ್ಟು 150 ವಾರ್ಡ್ಗಳ ಪೈಕಿ ಬಿಜೆಪಿ ಇದುವರೆಗೆ 146 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು ಸೇರಿದ್ದಾರೆ. ಅಷ್ಟೇ ಅಲ್ಲದೆ ಪಕ್ಷವು ಈ ಪಟ್ಟಿಯಲ್ಲಿ 52 ಮಹಿಳೆಯರಿಗೂ ಆದ್ಯತೆ ನೀಡಿದೆ. ಕಳೆದ 2020ರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಶಬಾಬ್ ಜಹಾನ್ ಎಂಬ ಏಕೈಕ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿತ್ತು. ಆ ಚುನಾವಣೆಯಲ್ಲಿ ಅವರು ಪರಾಭವಗೊಂಡಿದ್ದರೂ, ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಮತ್ತೆ ವಾರ್ಡ್ 117 ರಿಂದ ಕಣಕ್ಕಿಳಿಸಲಾಗಿದೆ.
ಶಬಾಬ್ ಜಹಾನ್ ಜೊತೆಗೆ ಅಫ್ಸಾನಾ (ವಾರ್ಡ್ 146), ಮಿಜಾನ್ ಮಿರ್ಜಾ (ವಾರ್ಡ್ 136), ರಹೀಸ್ ಮನ್ಸೂರಿ (ವಾರ್ಡ್ 137), ಮಜೀದ್ ಪಠಾಣ್ (ವಾರ್ಡ್ 128), ಫರೀವುದ್ದೀನ್ (ವಾರ್ಡ್ 113), ಝಾಕಿರ್ ಖಾನ್ (ವಾರ್ಡ್ 109) ಹಾಗೂ ಶಹನವಾಝ್ ಅನ್ಸಾರಿ (ವಾರ್ಡ್ 19) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಬ್ಯಾಂಕಿಂಗ್ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ
ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?
‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ
ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್ಇನ್ಸ್ಪೆಕ್ಟರ್ ಸೇವೆಯಿಂದ ಅಮಾನತು
ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ರಾಮ್ಲಾಲ್ ಶರ್ಮಾ, “ಮತದಾರರ ಸ್ವರೂಪ ಹಾಗೂ ಸ್ಥಳೀಯ ಅಭಿವೃದ್ಧಿಯ ಅಗತ್ಯಗಳನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮುಸ್ಲಿಂ ಸಮುದಾಯದವರೂ ಅಭಿವೃದ್ಧಿಯ ಪರವಾಗಿ ಬಿಜೆಪಿಗೆ ಮತ ನೀಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಉಜ್ಜವಲ ಯೋಜನೆಗಳಂತಹ ಕಲ್ಯಾಣ ಕಾರ್ಯಕ್ರಮಗಳು ತಳಮಟ್ಟದ ಜನರನ್ನು ತಲುಪಿರುವುದೇ ಕಣದಲ್ಲಿ ತಮಗೆ ನೆರವಾಗಲಿದೆ ಎಂದು ಅಭ್ಯರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.
ಇನ್ನೊಂದೆಡೆ, ಬಿಜೆಪಿಯ ಈ ನಡೆಯನ್ನು ಕಾಂಗ್ರೆಸ್ ಪಕ್ಷವು ವಿಭಿನ್ನವಾಗಿ ವಿಶ್ಲೇಷಿಸಿದೆ. “ಸಾಮಾನ್ಯವಾಗಿ ಅಲ್ಪಸಂಖ್ಯಾತ ವಿರೋಧಿ ಎಂಬ ಬಿರುದು ಹೊಂದಿರುವ ಬಿಜೆಪಿ, ತನ್ನ ಇಮೇಜ್ ಸರಿಪಡಿಸಿಕೊಳ್ಳಲು ಈ ರೀತಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ” ಎಂದು ಹೆಸರು ಹೇಳಲು ಇಷ್ಟಪಡದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಆರೋಪಿಸಿದ್ದಾರೆ.
ಈ ಬಾರಿಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಎರಡೂ ಪಕ್ಷಗಳು ವಿಭಿನ್ನ ತಂತ್ರ ಅನುಸರಿಸಿದ್ದವು. ಟಿಕೆಟ್ ಕೈತಪ್ಪಿದ ನಾಯಕರು ಬಂಡಾಯವೆದ್ದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸುವುದನ್ನು ತಡೆಯಲು, ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುವ ಬದಲು ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರವಾಗಿ ದೂರವಾಣಿ ಕರೆ ಮಾಡಿ ನಾಮಪತ್ರ ಸಲ್ಲಿಸಲು ಸೂಚಿಸಲಾಗಿತ್ತು. ಜೈಪುರ ಮಹಾನಗರ ಪಾಲಿಕೆ ಚುನಾವಣೆಗೆ ಸೆಪ್ಟೆಂಬರ್ 9 ಮತ್ತು 11 ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.
