ದೆಹಲಿಯಲ್ಲಿ ಆಯೋಜಿಸಲಾಗಿದ್ದ ತಮ್ಮ ಸಂಘಟನೆಯ ಕಾರ್ಯಕರ್ತರ ಸಭೆಗೆ ಸ್ಥಳಾವಕಾಶ ನೀಡದಂತೆ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬೆದರಿಕೆ ಹಾಗೂ ಒತ್ತಡ ತಂದಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮಾಧ್ಯಮಗಳೊಂದಿಗೆ ಮಾತನಾಡಿ, ದೆಹಲಿಯಲ್ಲಿ ಕಾರ್ಯಕರ್ತರ ಸಭೆಯನ್ನು ನಡೆಸಲು ಸುಮಾರು ಹತ್ತು ಬೇರೆ ಬೇರೆ ಸ್ಥಳಗಳನ್ನು ಸಂಪರ್ಕಿಸಲಾಗಿತ್ತು. ಆದರೆ ಮೇಲಧಿಕಾರಿಗಳ ಮತ್ತು ರಾಜಕೀಯ ಒತ್ತಡದ ನೆಪ ಹೇಳಿ ಎಲ್ಲಾ ಸಭಾಂಗಣದ ಮಾಲೀಕರು ಜಾಗ ನೀಡಲು ನಿರಾಕರಿಸಿದರು. ಕೊನೆಗೆ ನರೈನಾ ಪ್ರದೇಶದಲ್ಲಿ ಸಭಾಂಗಣವೊಂದನ್ನು ಕಾಯ್ದಿರಿಸಿ, ಮುಂಗಡ ಹಣ ಪಾವತಿಸಿ ರಶೀದಿ ಪಡೆಯಲಾಗಿತ್ತು. ಆದರೆ ಸಭೆ ನಡೆಯಬೇಕಿದ್ದ ದಿನದಂದು ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಸಭಾಂಗಣದ ಮಾಲೀಕರು ಬುಕಿಂಗ್ ರದ್ದುಗೊಳಿಸಿದ್ದಾರೆ.
ಆಡಳಿತಾರೂಢ ಪಕ್ಷವು ದೇಶದ ಯುವಜನರ ಧ್ವನಿಗೆ ಹೆದರುತ್ತಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಇಂತಹ ಬೆದರಿಕೆ ತಂತ್ರಗಳಿಂದ ನಮ್ಮ ಹೋರಾಟವನ್ನು ಹತೋಟಿಗೆ ತರಲು ಸಾಧ್ಯವಿಲ್ಲ ಎಂದು ದೀಪ್ಕೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ದೆಹಲಿ ಪೊಲೀಸರ ನಡೆ ಹಾಗೂ ದೆಹಲಿಯ ಕಾನೂನು ಸುವ್ಯವಸ್ಥೆಯ ಕುರಿತು ಪ್ರಶ್ನೆ ಎತ್ತಿದ್ದು, ಪೊಲೀಸ್ ಇಲಾಖೆಯು ಆಡಳಿತ ಪಕ್ಷದ ಹಿತಾಸಕ್ತಿಗೆ ತಕ್ಕಂತೆ ಕೆಲಸ ಮಾಡುತ್ತಿದೆಯೇ ಎಂದು ಕಿಡಿಕಾರಿದ್ದಾರೆ.
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?
ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!
‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ
ಕಾಕ್ರೋಚ್ ಜನತಾ ಪಾರ್ಟಿಯು ಮೇ 2026ರಲ್ಲಿ ಯುವಜನರ ಪರ ಧ್ವನಿಯಾಗಿ ಹುಟ್ಟಿಕೊಂಡ ಸಂಘಟನೆಯಾಗಿದೆ. ನಿರುದ್ಯೋಗ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ಜಂತರ್ ಮಂತರ್ನಲ್ಲಿ ಸಿಜೆಪಿ ನಡೆಸಿದ ಬೃಹತ್ ಪ್ರತಿಭಟನೆಯು ಜುಲೈ ತಿಂಗಳಲ್ಲಿ ಶಿಕ್ಷಣ ಸಚವರ ರಾಜೀನಾಮೆಗೆ ಕಾರಣವಾಗಿತ್ತು.
