ರಾಷ್ಟ್ರೀಯ ಸುದ್ದಿ

ವಾಣಿಜ್ಯ ಸಿಲಿಂಡರ್ ಬೆಲೆ ಮತ್ತಷ್ಟು ದುಬಾರಿ: ಐದೇ ತಿಂಗಳಲ್ಲಿ ದುಪ್ಪಟ್ಟಾದ ದರ!

Reading…
Follow Us

ಸಾರಾಂಶ

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಜೂನ್ 1 ರಿಂದ ಜಾರಿಗೆ ಬರುವಂತೆ ಮತ್ತೆ ರೂ. 46 ಏರಿಕೆಯಾಗಿದ್ದು, ಒಟ್ಟು ದರ ರೂ. 3,198 ತಲುಪಿದೆ. ಕಳೆದ ಐದು ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಬರೊಬ್ಬರಿ ಶೇ. 93 ರಷ್ಟು ದುಬಾರಿಯಾದಂತಾಗಿದೆ. ಜಾಗತಿಕ ಪೂರೈಕೆ ವ್ಯತ್ಯಯದ ಹಿನ್ನೆಲೆಯಲ್ಲಿ ಈ ಬೆಲೆ ಏರಿಕೆಯಾಗಿದ್ದು, ಹೋಟೆಲ್ ಹಾಗೂ ಸಣ್ಣ ಉದ್ಯಮಗಳ ಮೇಲೆ ಭಾರೀ ಹೊರೆ ಬಿದ್ದಿದೆ. ಆದರೆ ಮನೆಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದೇಶದಾದ್ಯಂತ ಹೋಟೆಲ್ ಮಾಲೀಕರು, ಬೀದಿಬದಿ ವ್ಯಾಪಾರಿಗಳು ಮತ್ತು ಸಣ್ಣ ಉದ್ದಿಮೆದಾರರಿಗೆ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಸಾರ್ವಜನಿಕ ವಲಯದ ತೈಲ ಮಾರಾಟ ಕಂಪನಿಗಳು ಜೂನ್ 1ರಿಂದ ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಮತ್ತೆ 46 ರೂಪಾಯಿ ಹೆಚ್ಚಳ ಮಾಡಿವೆ. ಈ ಹೊಸ ಪರಿಷ್ಕರಣೆಯೊಂದಿಗೆ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ದರ 3,198 ರೂಪಾಯಿಗಳಿಗೆ ತಲುಪಿದೆ. ಆತಂಕಕಾರಿ ಸಂಗತಿಯೆಂದರೆ, ಕಳೆದ ಐದು ತಿಂಗಳುಗಳಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆ ಶೇಕಡಾ 93 ಕ್ಕಿಂತಲೂ ಹೆಚ್ಚು ದುಬಾರಿಯಾಗಿದ್ದು, ಸಣ್ಣ ಉದ್ಯಮಿಗಳ ಬೆನ್ನುಲುಬು ಮುರಿಯುವಂತೆ ಮಾಡಿದೆ.

ಡಿಸೆಂಬರ್ ತಿಂಗಳಲ್ಲಿ 1654 ರೂಪಾಯಿ ಇದ್ದ ವಾಣಿಜ್ಯ ಸಿಲಿಂಡರ್ ಬೆಲೆ, ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಹಂತಹಂತವಾಗಿ ಏರಿಕೆಯಾಗುತ್ತಾ ಸಾಗಿತ್ತು. ಆದರೆ ಮೇ 1 ರಂದು ಒಂದೇ ಬಾರಿಗೆ ಬರೊಬ್ಬರಿ 993 ರೂಪಾಯಿಗಳ ಭಾರೀ ಜಿಗಿತ ಕಂಡು 3,152 ರೂಪಾಯಿ ತಲುಪಿತ್ತು. ಇಂದು ಜೂನ್ 1 ರಂದು ಮತ್ತೊಮ್ಮೆ 46 ರೂಪಾಯಿ ಏರಿಕೆ ಕಾಣುವ ಮೂಲಕ, ಕೇವಲ ಐದು ತಿಂಗಳ ಅವಧಿಯಲ್ಲಿ ಒಟ್ಟಾರೆ 1,433.50 ರೂಪಾಯಿಗಳಷ್ಟು ದರ ಹೆಚ್ಚಳವಾದಂತಾಗಿದೆ. ಈ ಸರಣಿ ಏರಿಕೆಯು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಆದರೆ, ಸಾರ್ವಜನಿಕರಿಗೆ ಸಮಾಧಾನಕರ ವಿಷಯವೆಂದರೆ ಮನೆಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಇದು ಹಿಂದಿನಂತೆಯೇ 915.50 ರೂಪಾಯಿಗಳಲ್ಲೇ ಮುಂದುವರಿದಿದೆ.

ನಗರವಾಣಿಜ್ಯ ಸಿಲಿಂಡರ್ ಬೆಲೆ –
31 ಡಿಸೆಂಬರ್ 2025
ವಾಣಿಜ್ಯ ಸಿಲಿಂಡರ್ ಬೆಲೆ –
1 ಜೂನ್ 2026
% ಬೆಲೆ ಏರಿಕೆ
ದೆಹಲಿ1580.503113.50+97%
ಕೋಲ್ಕತ್ತಾ1684.003255.50+93%
ಮುಂಬೈ1531.503067.50+100%
ಚೆನ್ನೈ1739.503283.00+89%
ಬೆಂಗಳೂರು1654.003198.00+93%

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಜಾಗತಿಕ ಪೂರೈಕೆ ವ್ಯತ್ಯಯಗಳು ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ತೈಲ ಕಂಪನಿಗಳ ಮೂಲಗಳು ತಿಳಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಯಾವುದೇ ಕೊರತೆಯಾಗದಂತೆ ಕನಿಷ್ಠ 30 ದಿನಗಳಿಗೆ ಸಾಕಾಗುವಷ್ಟು ದಾಸ್ತಾನು ಕಾಯ್ದುಕೊಳ್ಳುವಂತೆ ಮತ್ತು ಕಾಳಸಂತೆಯನ್ನು ತಡೆಯುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಕಂಪನಿಗಳಿಗೆ ನಿರ್ದೇಶನ ನೀಡಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

From Across Varadigara

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು