ದೇಶದಾದ್ಯಂತ ಹೋಟೆಲ್ ಮಾಲೀಕರು, ಬೀದಿಬದಿ ವ್ಯಾಪಾರಿಗಳು ಮತ್ತು ಸಣ್ಣ ಉದ್ದಿಮೆದಾರರಿಗೆ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಸಾರ್ವಜನಿಕ ವಲಯದ ತೈಲ ಮಾರಾಟ ಕಂಪನಿಗಳು ಜೂನ್ 1ರಿಂದ ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಮತ್ತೆ 46 ರೂಪಾಯಿ ಹೆಚ್ಚಳ ಮಾಡಿವೆ. ಈ ಹೊಸ ಪರಿಷ್ಕರಣೆಯೊಂದಿಗೆ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ದರ 3,198 ರೂಪಾಯಿಗಳಿಗೆ ತಲುಪಿದೆ. ಆತಂಕಕಾರಿ ಸಂಗತಿಯೆಂದರೆ, ಕಳೆದ ಐದು ತಿಂಗಳುಗಳಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆ ಶೇಕಡಾ 93 ಕ್ಕಿಂತಲೂ ಹೆಚ್ಚು ದುಬಾರಿಯಾಗಿದ್ದು, ಸಣ್ಣ ಉದ್ಯಮಿಗಳ ಬೆನ್ನುಲುಬು ಮುರಿಯುವಂತೆ ಮಾಡಿದೆ.
ಡಿಸೆಂಬರ್ ತಿಂಗಳಲ್ಲಿ 1654 ರೂಪಾಯಿ ಇದ್ದ ವಾಣಿಜ್ಯ ಸಿಲಿಂಡರ್ ಬೆಲೆ, ಫೆಬ್ರವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಹಂತಹಂತವಾಗಿ ಏರಿಕೆಯಾಗುತ್ತಾ ಸಾಗಿತ್ತು. ಆದರೆ ಮೇ 1 ರಂದು ಒಂದೇ ಬಾರಿಗೆ ಬರೊಬ್ಬರಿ 993 ರೂಪಾಯಿಗಳ ಭಾರೀ ಜಿಗಿತ ಕಂಡು 3,152 ರೂಪಾಯಿ ತಲುಪಿತ್ತು. ಇಂದು ಜೂನ್ 1 ರಂದು ಮತ್ತೊಮ್ಮೆ 46 ರೂಪಾಯಿ ಏರಿಕೆ ಕಾಣುವ ಮೂಲಕ, ಕೇವಲ ಐದು ತಿಂಗಳ ಅವಧಿಯಲ್ಲಿ ಒಟ್ಟಾರೆ 1,433.50 ರೂಪಾಯಿಗಳಷ್ಟು ದರ ಹೆಚ್ಚಳವಾದಂತಾಗಿದೆ. ಈ ಸರಣಿ ಏರಿಕೆಯು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಆದರೆ, ಸಾರ್ವಜನಿಕರಿಗೆ ಸಮಾಧಾನಕರ ವಿಷಯವೆಂದರೆ ಮನೆಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಇದು ಹಿಂದಿನಂತೆಯೇ 915.50 ರೂಪಾಯಿಗಳಲ್ಲೇ ಮುಂದುವರಿದಿದೆ.
| ನಗರ | ವಾಣಿಜ್ಯ ಸಿಲಿಂಡರ್ ಬೆಲೆ – 31 ಡಿಸೆಂಬರ್ 2025 | ವಾಣಿಜ್ಯ ಸಿಲಿಂಡರ್ ಬೆಲೆ – 1 ಜೂನ್ 2026 | % ಬೆಲೆ ಏರಿಕೆ |
| ದೆಹಲಿ | 1580.50 | 3113.50 | +97% |
| ಕೋಲ್ಕತ್ತಾ | 1684.00 | 3255.50 | +93% |
| ಮುಂಬೈ | 1531.50 | 3067.50 | +100% |
| ಚೆನ್ನೈ | 1739.50 | 3283.00 | +89% |
| ಬೆಂಗಳೂರು | 1654.00 | 3198.00 | +93% |
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಜಾಗತಿಕ ಪೂರೈಕೆ ವ್ಯತ್ಯಯಗಳು ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ತೈಲ ಕಂಪನಿಗಳ ಮೂಲಗಳು ತಿಳಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಯಾವುದೇ ಕೊರತೆಯಾಗದಂತೆ ಕನಿಷ್ಠ 30 ದಿನಗಳಿಗೆ ಸಾಕಾಗುವಷ್ಟು ದಾಸ್ತಾನು ಕಾಯ್ದುಕೊಳ್ಳುವಂತೆ ಮತ್ತು ಕಾಳಸಂತೆಯನ್ನು ತಡೆಯುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಕಂಪನಿಗಳಿಗೆ ನಿರ್ದೇಶನ ನೀಡಿದೆ.
ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?
“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!
“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!
ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್
‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್ಮೇಲ್ ಆರೋಪ!
AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!
ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!
