ನವದೆಹಲಿ, ಜೂ. 30: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ಆರೋಪದ ಕುರಿತು ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ರಾಮ ಮಂದಿರದಲ್ಲಿ ನಡೆದಿರುವ ಆರೋಪಿತ ಲೂಟಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವು ದೇಶದ ಕೋಟ್ಯಂತರ ಭಕ್ತರ ಧಾರ್ಮಿಕ ನಂಬಿಕೆಯ ಮೇಲಿನ ನೇರ ದಾಳಿಯಾಗಿದೆ ಎಂದು ಆರೋಪಿಸಿದರು.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆ ಪಾರದರ್ಶಕವಾಗಿರಲಿಲ್ಲ ಹಾಗೂ ಅದನ್ನು ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಅವರು ಟೀಕಿಸಿದರು. ಪ್ರಧಾನಿ ಮೋದಿ ಅವರು ಈ ಕುರಿತು ತಮ್ಮ ಮೌನ ಮುರಿದು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ
ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!
ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಹೊಸ ಆದೇಶ: ಸರ್ಕಾರಿ ನೌಕರರು ಮತ್ತು ಸೇನಾಧಿಕಾರಿಗಳಿಗೆ ಸ್ಮಾರ್ಟ್ಫೋನ್ ಬಳಕೆ ನಿಷೇಧ
ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್
ಇದರ ಮಧ್ಯೆ, ರಾಮ ಮಂದಿರಕ್ಕೆ ಕಾಂಗ್ರೆಸ್ ನಿಯೋಗ ಭೇಟಿ ನೀಡುವ ಮುನ್ನವೇ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
