ವರದಿಗಾರ – ಮೇ.14: ಕೇರಳದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆಗೆ ಕೊನೆಗೂ ತೆರೆ ಬಿದ್ದಂತೆ ಕಾಣುತ್ತಿದೆ. ಅದು ವಿ.ಡಿ. ಸತೀಶನ್ ಅವರನ್ನು ಮುಂದಿನ ಕೇರಳ ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ಸತೀಶನ್ ರನ್ನು ಮುಖ್ಯಮಂತ್ರಿಯಾಗಿ ಘೋಷಿಸುವ ಮುನ್ನ ಹಲವು ಹೈಡ್ರಾಮಕ್ಮೆ ಕೇರಳ ರಾಜಕೀಯ ಸಾಕ್ಷಿಯಾಗಿದೆ. ಆರೋಪ-ಪ್ರತ್ಯಾರೋಪ.. ಜನಬೆಂಬಲದ ಸಭೆ ಹೀಗೆ ಹಲವು ಪ್ರಯತ್ನಗಳು ನಡೆದಿತ್ತು. ಕೊನೆಗೂ ಚುನಾವಣಾ ಫಲಿತಾಂಶದ ಹತ್ತು ದಿನದ ಬಳಿಕ ಈ ನಿರ್ಧಾರ ಪ್ರಕಟವಾಗಿದೆ.
ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?
“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!
AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!
ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!
ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್
ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್ಮೇಲ್ ಆರೋಪ!
“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!
ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ
ತಿರುವನಂತಪುರಂನಲ್ಲಿ ಮಧ್ಯಾಹ್ನ 1 ಗಂಟೆಗೆ ಸಿ.ಎಲ್.ಪಿ. (ಕಾಂಗ್ರೆಸ್ ಲೆಜಿಸ್ಲೇಟಿವ್ ಪಾರ್ಟಿ) ಸಭೆ ನಡೆಯುವುದಾಗಿತ್ತು. ಆದರೆ ದೆಹಲಿಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಮುಖ್ಯ ನಾಯಕರೊಂದಿಗೆ ಕೊನೆಯ ಕ್ಷಣದ ಮಾತುಕತೆಗಳು ನಡೆದು ಸಭೆಯು ವಿಳಂಬಗೊಂಡಿತು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರು ಕೆಸಿ ವೇಣುಗೋಪಾಲ್ ರವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ ಎಂಬುವುದಾಗಿ ತಿಳಿದು ಬಂದಿದೆ.
ಸತೀಶನ್ ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ( ಹಿಂದಿನ ವಿರೋಧ ಪಕ್ಷದ ನಾಯಕ ಮತ್ತು ಗೃಹ ಸಚಿವ) ಇವರು ಮೂವರ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸ್ಪರ್ಧೆ ಏರ್ಪಟ್ಡಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಸತೀಶನ್ ರವರನ್ನು ಷೋಷಿಸಿದೆ. ಈ ಮೂಲಕ ಕೇರಳದ ವಿವಿದೆಡೆ ಸಂಭ್ರಮಾಚರಣೆ ನಡೆಯುತ್ತಿದೆ.
ಸತೀಶನ್ ಅವರಿಗೆ ಕಾಂಗ್ರೆಸ್ ಮಿತ್ರಪಕ್ಷಗಳು, ವಿಶೇಷವಾಗಿ 22 ಶಾಸಕರನ್ನು ಹೊಂದಿರುವ ಮುಸ್ಲಿಂ ಲೀಗ್ ಬೆಂಬಲವಿದೆ. ಇದಲ್ಲದೆ ಪಕ್ಷದ ಬಹುತೇಕ ಕಾರ್ಯಕರ್ತರು ಮತ್ತು ಸದಸ್ಯರು ವಿರೋಧ ಪಕ್ಷದ ನಾಯಕರಾಗಿ ಪರಿಣಾಮಕಾರಿ ನಾಯಕತ್ವ ನೋಡೊದ ಸತೀಶನ್ ಮತ್ತು ಕಳೆದ 5 ವರ್ಷಗಳಲ್ಲಿ ಕೇರಳದಾದ್ಯಂತ ನಡೆಸಿದ ರಾಜಕೀಯ ಸಮ್ಮೋಹನವೇ ಯುಡಿಎಫ್ನ ಭಾರೀ ಗೆಲುವಿಗೆ ಕಾರಣವೆಂದು ಹೇಳಲಾಗುತ್ತಿದೆ.
