ವರದಿಗಾರ-ಮೇ.05: ರಾಜ್ಯದ ಗ್ಯಾರಂಟಿ ಯೋಜನೆಗಳು ಜನರ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿರುವ ಫಲವಾಗಿಯೇ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ಬೆಂಬಲಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಉಪಚುನಾವಣೆ ಹಾಗೂ ಪಕ್ಕದ ರಾಜ್ಯಗಳ ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದರು. ದಾವಣಗೆರೆ ಕ್ಷೇತ್ರದಲ್ಲಿ ಉಂಟಾಗಿದ್ದ ಗೊಂದಲಗಳ ನಡುವೆಯೂ ನಮಗೆ ಗೆಲುವಿನ ವಿಶ್ವಾಸವಿತ್ತು. ಆದರೆ ಎಸ್ಡಿಪಿಐ ಪಕ್ಷವು ಅಲ್ಪಸಂಖ್ಯಾತರ ಮತಗಳನ್ನು ಸೆಳೆದ ಕಾರಣ ಗೆಲುವಿನ ಅಂತರ 25-30 ಸಾವಿರಕ್ಕೆ ಕುಸಿದಿದೆ. ಎಸ್ಡಿಪಿಐ ಅನ್ನು ನಾವು ಎಂದಿಗೂ ಹಗುರವಾಗಿ ಪರಿಗಣಿಸಿರಲಿಲ್ಲ ಎಂದು ಹೇಳಿದ್ದಾರೆ.
ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
