ಕಾಣಿಸದ್ದು - ಕೇಳಿಸದ್ದು

ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್

Reading…
Follow Us

ಸಾರಾಂಶ

ದೆಹಲಿ ಅಗ್ನಿ ದುರಂತದ ವೇಳೆ ಹಾಸಿಗೆ ಅಂಗಡಿ ಮಾಲೀಕ ರಿಯಾಜುದ್ದೀನ್ ಮನ್ಸೂರಿ ಮತ್ತು ಅವರ ಪುತ್ರ ಅರ್ಮಾನ್ ತೋರಿದ ಸಮಯಪ್ರಜ್ಞೆ ಮೆಚ್ಚುವಂತದ್ದು. ತಮ್ಮ ಅಂಗಡಿಯಲ್ಲಿದ್ದ 2 ಲಕ್ಷ ರೂ. ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ, ಕಟ್ಟಡದಿಂದ ಜಿಗಿದ 8 ಜನರ ಪ್ರಾಣ ಉಳಿಸುವ ಮೂಲಕ ಈ ತಂದೆ-ಮಗ ಮಾನವೀಯತೆ ಮೆರೆದಿದ್ದಾರೆ.

ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದ ‘ಫ್ಲರಿಶ್ ಸ್ಟೇ’ ಹೋಟೆಲ್‌ನಲ್ಲಿ ಜೂನ್ 3ರ ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಬೆಳಿಗ್ಗೆ ಸುಮಾರು 8:48ಕ್ಕೆ ಕಟ್ಟಡದ ನೆಲಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಮತ್ತು ದಟ್ಟ ಹೊಗೆಯಿಂದಾಗಿ ಮೇಲಿನ ಮಹಡಿಯಲ್ಲಿದ್ದವರು ಹೊರಬರಲಾಗದೆ ಸಿಲುಕಿಕೊಂಡಿದ್ದರು. ಈ ಸಂದರ್ಭದಲ್ಲಿ ಹೋಟೆಲ್ ಎದುರಿನ ಹಾಸಿಗೆ ಅಂಗಡಿ ಮಾಲೀಕ ಮೊಹಮ್ಮದ್ ರಿಯಾಝುದ್ದೀನ್ ಮನ್ಸೂರಿ ಮತ್ತು ಅವರ ಪುತ್ರ ಅರ್ಮಾನ್ ತೋರಿದ ಸಮಯಪ್ರಜ್ಞೆ ಹಲವರ ಪ್ರಾಣ ಉಳಿಸಿದೆ.

ಕಟ್ಟಡದ ಒಳಗೆ ಸಿಲುಕಿದ್ದ ಪ್ರವಾಸಿಗರು ಜೀವ ಉಳಿಸಿಕೊಳ್ಳಲು ಕಿಟಕಿಗಳಿಂದ ಕೆಳಗೆ ಜಿಗಿಯಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ರಿಯಾಜುದ್ದೀನ್, ತಕ್ಷಣವೇ ತಮ್ಮ ಅಂಗಡಿಯಲ್ಲಿದ್ದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 20 ರಿಂದ 25 ಹಾಸಿಗೆಗಳು ಮತ್ತು ರಗ್ಗುಗಳನ್ನು ರಸ್ತೆಯ ಮೇಲೆ ತಂದು ಹಾಸಿದರು. ಮೇಲಿನ ಮಹಡಿಗಳಿಂದ ಜಿಗಿಯುವವರಿಗೆ ಇದು ಸುರಕ್ಷಿತ ಆಸರೆಯಾಯಿತು.

ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸುವ ಮೊದಲೇ ಈ ತಂದೆ-ಮಗ ಸ್ಥಳೀಯರ ನೆರವಿನೊಂದಿಗೆ ಕನಿಷ್ಠ ಎಂಟು ಜನರ ಪ್ರಾಣವನ್ನು ಪ್ರತ್ಯಕ್ಷವಾಗಿ ಉಳಿಸಿದ್ದಾರೆ. ಮೇಲಿನಿಂದ ಬಿದ್ದ ರಭಸಕ್ಕೆ ಹಾಸಿಗೆಗಳು ರಕ್ಷಣಾ ಕವಚವಾದ ಕಾರಣ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಈ ರಕ್ಷಣಾ ಕಾರ್ಯದ ವೇಳೆ ರಿಯಾಝುದ್ದೀನ್ ಮತ್ತು ಅರ್ಮಾನ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇವರ ಕಾರ್ಯವನ್ನು ಕಂಡು ಸುತ್ತಮುತ್ತಲಿನ ಸ್ಥಳೀಯರು ಕೂಡ ರಕ್ಷಣೆಗೆ ಕೈಜೋಡಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.

ತಮ್ಮ ವ್ಯಾಪಾರದ ಸರಕುಗಳು ನಷ್ಟವಾಗುತ್ತಿದ್ದರೂ ಜನರ ಜೀವ ಉಳಿಸಲು ಮುಂದಾದ ರಿಯಾಝುದ್ದೀನ್ ಅವರ ನಡೆಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. NDTV ವರದಿ ಪ್ರಕಾರ,ಈ ಕುರಿತು ಮಾತನಾಡಿದ ಅವರು, “ನಾವೆಲ್ಲರೂ ಹಿಂದುಸ್ತಾನಿಗಳು. ಸಂಕಷ್ಟದಲ್ಲಿದ್ದ ನಮ್ಮ ಸಹೋದರರನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿತ್ತು” ಎಂದು ಹೇಳಿದ್ದಾರೆ. ಸದ್ಯ ಹೋಟೆಲ್‌ನಲ್ಲಿ ಸುರಕ್ಷತಾ ನಿಯಮಗಳ ಉಲ್ಲಂಘನೆ ಆಗಿರುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ. ಕಿರಿದಾದ ಗಲ್ಲಿಗಳ ನಡುವೆಯೂ ರಿಯಾಜುದ್ದೀನ್ ಮತ್ತು ಸ್ಥಳೀಯರು ತೋರಿದ ಸಮಯಪ್ರಜ್ಞೆಯಿಂದಾಗಿ ಹೆಚ್ಚಿನ ಪ್ರಾಣಹಾನಿ ತಪ್ಪಿದಂತಾಗಿದೆ.

Join our WhatsApp Channel Get every Varadigara story instantly
How does this story make you feel?
Share:
POLL

ಇಂತಹ ತುರ್ತು ಸಂದರ್ಭಗಳಲ್ಲಿ ಸ್ವಂತ ಹಿತಾಸಕ್ತಿ ಬದಿಗಿಟ್ಟು ರಕ್ಷಣೆಗೆ ಧಾವಿಸುವ ನಾಗರಿಕರನ್ನು ಪ್ರೋತ್ಸಾಹಿಸಲು ಸರ್ಕಾರ ಕೈಗೊಳ್ಳಬೇಕಾದ ಕ್ರಮ ಯಾವುದು?

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

From Across Varadigara

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ರಾಜ್ಯ ಸುದ್ದಿ

ಮಂಗಳೂರು ರೈಲ್ವೆ ವ್ಯಾಪ್ತಿ ವರ್ಗಾವಣೆ: ತೀರ್ಮಾನ ತಡೆಹಿಡಿಯಲು ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ ವಿ. ಡಿ. ಸತೀಶನ್

ಸುತ್ತ - ಮುತ್ತ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು: 2026-27ರ ಸಾಲಿಗೆ ನೂತನ ನಾಯಕರ ಆಯ್ಕೆ

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ರಾಷ್ಟ್ರೀಯ ಸುದ್ದಿ

ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ರಾಷ್ಟ್ರೀಯ ಸುದ್ದಿ

ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಘೋಷಿಸಿದ ಸಿಜೆಪಿ

ರಾಜ್ಯ ಸುದ್ದಿ

ರಿಕ್ಷಾ ಚಾಲಕ ಗುರುಪ್ರಸಾದ್‌ ಹೃದಯಾಘಾತದಿಂದ ನಿಧನ: ಮೃತರಿಗೆ ಗೌರವಾರ್ಥ ಮಿಲಾದ್ ಕಾರ್ಯಕ್ರಮ ಮುಂದೂಡಿದ ಮಸೀದಿ ಆಡಳಿತ