ನವದೆಹಲಿ: ಕೇಂದ್ರ ದೆಹಲಿ ಭಾಗದಲ್ಲಿರುವ ಕೇಂದ್ರ ಶಿಕ್ಷಣ ಸಚಿವಾಲಯದ ಕಚೇರಿಗಳು ಕಾರ್ಯನಿರ್ವಹಿಸುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಿಗ್ಗೆ ದಿಢೀರ್ ಅಗ್ನಿ ಅವಘಡ ಸಂಭವಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದು, ಸದ್ಯದ ಮಾಹಿತಿ ಪ್ರಕಾರ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.
ಅಧಿಕಾರಿಗಳು ನೀಡಿರುವ ಮಾಹಿತಿಯ ಅನ್ವಯ, ಐಟಿಒ ಪ್ರದೇಶದ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್ (ಎಸ್ಪಿಎ) ಆವರಣದಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕುರಿತು ಸೋಮವಾರ ಬೆಳಿಗ್ಗೆ ಸುಮಾರು 9:37 ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದ್ದು, ತಕ್ಷಣವೇ ಎಂಟು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಶಿಕ್ಷಣ ಸಚಿವಾಲಯದ ಕಚೇರಿಗಳಿರುವ ಕಟ್ಟಡದ ಎರಡನೇ ಮಹಡಿಯಿಂದ ದಟ್ಟವಾದ ಹೊಗೆ ಹೊರಬರುತ್ತಿದ್ದು, ಸಿಬ್ಬಂದಿ ಏಣಿ ಹಾಗೂ ಹೋಸ್ ಪೈಪ್ಗಳ ಮೂಲಕ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸುದ್ದಿ ಸಂಸ್ಥೆ ‘ಎಎನ್ಐ’ (ANI) ಅಗ್ನಿಶಾಮಕ ದಳದ ಹೇಳಿಕೆಯನ್ನು ಉಲ್ಲೇಖಿಸಿ ಈ ಘಟನೆಯನ್ನು ಮೊದಲು ವರದಿ ಮಾಡಿದೆ. ಸದ್ಯಕ್ಕೆ ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಏನೆಂಬುದು ಇನ್ನು ಪತ್ತೆಯಾಗಿಲ್ಲ. ಕಚೇರಿಯಲ್ಲಿದ್ದ ದಾಖಲೆಗಳು ಅಥವಾ ಮೂಲಸೌಕರ್ಯಗಳಿಗೆ ಆಗಿರುವ ಹಾನಿಯ ಬಗ್ಗೆಯೂ ಸದ್ಯಕ್ಕೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್
ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!
AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!
ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?
‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್ಮೇಲ್ ಆರೋಪ!
“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!
“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!
ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ
ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
#WATCH | Delhi | Efforts underway to douse the fire on the second floor of the Ministry of Education office, Vikas Marg. Further details awaited. pic.twitter.com/gZa8KLVK1O
— ANI (@ANI) June 1, 2026
ಅವಘಡ ಸಂಭವಿಸಿದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಇನ್ಯಾವುದೇ ಕಾರಣದಿಂದ ಈ ಘಟನೆ ನಡೆದಿದೆಯೇ ಎಂಬ ಬಗ್ಗೆ ಪ್ರಾಥಮಿಕ ತನಿಖಾ ವರದಿಗಳು ಇನ್ನು ಹೊರಬರಬೇಕಿದೆ.
ಇತ್ತೀಚಿನ ದಿನಗಳಲ್ಲಿ ನೀಟ್-ಯುಜಿ ಪರೀಕ್ಷಾ ವಿವಾದ ಹಾಗೂ ಸಿಬಿಎಸ್ಇ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯವು ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ತೀವ್ರ ತರಾಟೆಗೆ ಒಳಗಾಗುತ್ತಿರುವ ಬೆನ್ನಲ್ಲೇ ಈ ಅಗ್ನಿ ಅವಘಡ ಸಂಭವಿಸಿರುವುದು ಗಮನಾರ್ಹ. ಆದರೆ, ಈ ವಿವಾದಗಳಿಗೂ ಮತ್ತು ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೂ ಯಾವುದೇ ರೀತಿಯ ಸಂಬಂಧವಿರುವ ಬಗ್ಗೆ ಯಾವುದೇ ವಿಶ್ವಾಸಾರ್ಹ ಮೂಲಗಳು ಪುಷ್ಟೀಕರಿಸಿಲ್ಲ. ಅಧಿಕಾರಿಗಳು ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
