ಬೆಂಗಳೂರು: ‘ಕಾಂಗ್ರೆಸ್ ಪಕ್ಷದವರು ಕೇಸು, ಜೈಲುಗಳಿಗೆಲ್ಲ ಹೆದರುವವರಲ್ಲ. ರಾಹುಲ್ ಗಾಂಧಿಯವರು ಹುಟ್ಟು ಹೋರಾಟಗಾರರು’ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಿದ್ದ ಮೈದಾನವನ್ನು ಕೆಲವರು ಶುದ್ಧೀಕರಣ ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಯ ವಿರುದ್ಧ ರಾಜಕೀಯ ದ್ವೇಷದಿಂದ ಸುಳ್ಳು ಹಾಗೂ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ, ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಈ ದೇಶ ಎಲ್ಲಿಗೆ ಹೋಗುತ್ತಿದೆ ಎಂಬುದನ್ನು ಜನರಿಗೆ ಮನದಟ್ಟು ಮಾಡಿಕೊಡುವುದು ನಮ್ಮ ಕರ್ತವ್ಯ. ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಕಾಂಗ್ರೆಸ್ ಶಕ್ತಿಯೇ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬ್ಯಾಂಕಿಂಗ್ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ
ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?
ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್ಇನ್ಸ್ಪೆಕ್ಟರ್ ಸೇವೆಯಿಂದ ಅಮಾನತು
ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ
ಕಾಂಗ್ರೆಸ್ ಪಕ್ಷವು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ರಾಷ್ಟ್ರಧ್ವಜ, ಸಂವಿಧಾನ ಹಾಗೂ ಎಲ್ಲ ವರ್ಗದ ಜನರ ಬದುಕಿಗೆ ಭದ್ರಬುನಾದಿ ಒದಗಿಸಿದೆ ಎಂದು ಅವರು ಹೇಳಿದರು. ಗಾಂಧಿ ಕುಟುಂಬವು ದೇಶ ಹಾಗೂ ಕಾಂಗ್ರೆಸ್ ಪಕ್ಷವನ್ನು ಒಗ್ಗಟ್ಟಾಗಿ ಇಡಲು ಹಲವು ತ್ಯಾಗ-ಬಲಿದಾನಗಳನ್ನು ಮಾಡಿದೆ ಎಂದರು.
ಬೆಳಗಾವಿಯಲ್ಲಿ ನಡೆದ ‘ಜೈ ಬಾಪು – ಜೈ ಭೀಮ್ – ಜೈ ಸಂವಿಧಾನ’ ಕಾರ್ಯಕ್ರಮವನ್ನು ನೆನಪಿಸಿಕೊಂಡ ಅವರು, 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಇಂದು ಅದೇ ಅಧ್ಯಕ್ಷ ಸ್ಥಾನವನ್ನು ಮಲ್ಲಿಕಾರ್ಜುನ ಖರ್ಗೆ ಅವರು ಅಲಂಕರಿಸಿದ್ದಾರೆ ಎಂದು ಹೇಳಿದರು.
‘ಇಂದಿನ ಪ್ರತಿಭಟನೆ ಕೇವಲ ರಾಹುಲ್ ಗಾಂಧಿಯವರ ಬಗ್ಗೆ ಅಲ್ಲ. ನಾವು ಕಾಂಗ್ರೆಸ್ಸಿಗರು ಕೇಸು, ಜೈಲುಗಳಿಗೆ ಹೆದರುವವರಲ್ಲ. ಬಿಜೆಪಿಯವರು ನೂರು ಕೇಸುಗಳನ್ನು ದಾಖಲಿಸಿದರೂ ರಾಹುಲ್ ಗಾಂಧಿಯವರು ಹೆದರುವುದಿಲ್ಲ. ಅವರ ರಕ್ತದಲ್ಲೇ ಹೋರಾಟವಿದೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
‘ನಿಮ್ಮಂತೆ ಹೆದರಿ ಕ್ಷಮಾಪಣಾ ಪತ್ರ ಬರೆಯುವವರಲ್ಲ ನಮ್ಮ ರಾಹುಲ್ ಗಾಂಧಿ. ಅವರು ಹುಟ್ಟು ಹೋರಾಟಗಾರರು. He is a born fighter, he is living as a fighter, he will die as a fighter’ ಎಂದು ಅವರು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆದ ಘಟನೆ ಕೇವಲ ದೇಶಕ್ಕೆ ಸಂಬಂಧಿಸಿದ ವಿಚಾರವಲ್ಲ, ಇಡೀ ಜಗತ್ತಿನ ಮಾನವೀಯತೆಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.
ರಾಹುಲ್ ಗಾಂಧಿ ವಿರುದ್ಧ ರಾಜಕೀಯ ದ್ವೇಷದಿಂದ ಸುಳ್ಳು ಹಾಗೂ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ನ್ಯಾಯಾಲಯವು ಕಾಂಗ್ರೆಸ್ಗೆ ನ್ಯಾಯ ಒದಗಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
‘ತಪ್ಪು ಮಾಡಿದ್ದರೆ ಅದನ್ನು ತಿದ್ದುಕೊಳ್ಳಬೇಕು. ಬಿಜೆಪಿಯವರ ಅಂತ್ಯದ ದಿನಗಳು ಆರಂಭಗೊಂಡಿವೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
