ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಕ್ರಿಕೆಟ್ ನಾಯಕ ಇಮ್ರಾನ್ ಖಾನ್ ಅವರ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಅವರಿಗೆ ಸುಪ್ರೀಂ ಕೋರ್ಟ್ ಸೂಚನೆಯಂತೆ ಪೂರ್ಣ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವಂತೆ ಆಗ್ರಹಿಸಿ 21 ಅಂತಾರಾಷ್ಟ್ರೀಯ ಕ್ರಿಕೆಟ್ ನಾಯಕರು ಪಾಕ್ ಪ್ರಧಾನಿ ಶಹಬಾಝ್ ಶರೀಫ್ ಅವರಿಗೆ ಪತ್ರ ಬರೆದಿದ್ದಾರೆ. ಭಾರತದ ಸುನಿಲ್ ಗವಾಸ್ಕರ್, ಕಪಿಲ್ ದೇವ್, ದಿಲೀಪ್ ವೆಂಗ್ಸರ್ಕಾರ್ ಸೇರಿದಂತೆ ಜಗತ್ತಿನ ಪ್ರಮುಖ ಮಾಜಿ ನಾಯಕರು ಈ ಜಂಟಿ ಮನವಿಗೆ ಸಹಿ ಹಾಕಿದ್ದಾರೆ.
73 ವರ್ಷದ ಇಮ್ರಾನ್ ಖಾನ್ 2023ರ ಆಗಸ್ಟ್ನಿಂದ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿದ್ದು, ಅವರ ಬಲಗಣ್ಣಿನ ದೃಷ್ಟಿ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂಬ ವರದಿಗಳು ಕಳವಳಕ್ಕೆ ಕಾರಣವಾಗಿವೆ. ಇಮ್ರಾನ್ ಅವರ ವೈಯಕ್ತಿಕ ವೈದ್ಯರು ಹಾಗೂ ಸಹೋದರಿ ಡಾ. ಉಜ್ಮಾ ಖಾನ್ ಒಳಗೊಂಡ ಸ್ವತಂತ್ರ ವೈದ್ಯಕೀಯ ಮಂಡಳಿಯಿಂದ ತಪಾಸಣೆ ನಡೆಸುವಂತೆ ಪಾಕ್ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ, ಕೋರ್ಟ್ ಸೂಚಿಸಿದ ತಂಡದ ಬದಲು ಸರ್ಕಾರಿ ವೈದ್ಯರ ತಂಡವಷ್ಟೇ ಕೆಲವೇ ಗಂಟೆಗಳಲ್ಲಿ ತಪಾಸಣೆ ನಡೆಸಿ, ಅವರು “ಆರೋಗ್ಯವಾಗಿದ್ದಾರೆ” ಎಂದು ಜೈಲಿಗೆ ವಾಪಸ್ ಕಳುಹಿಸಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶಿಸಿದ ವೈದ್ಯಕೀಯ ಮಂಡಳಿಯಿಂದಲೇ ಸ್ವತಂತ್ರ ತಪಾಸಣೆ ನಡೆಸಬೇಕು, ವಾರಕ್ಕೊಮ್ಮೆ ಕುಟುಂಬದ ಭೇಟಿಗೆ ಅವಕಾಶ ನೀಡಬೇಕು ಹಾಗೂ ಅಗತ್ಯವಿದ್ದರೆ ತಕ್ಷಣ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಮಾಜಿ ನಾಯಕರು ಒತ್ತಾಯಿಸಿದ್ದಾರೆ. ನಾವು ಯಾವುದೇ ರಾಜಕೀಯ ಉದ್ದೇಶದಿಂದ ಈ ಪತ್ರ ಬರೆಯುತ್ತಿಲ್ಲ; ಬದಲಾಗಿ ಹಳೆಯ ಸಹ- ಆಟಗಾರರು ಹಾಗೂ ಎದುರಾಳಿಗಳಾಗಿ ಮಾನವೀಯ ಆಧಾರದ ಮೇಲೆ ಮನವಿ ಮಾಡುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ
ಇಸ್ರೇಲ್ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್ನಲ್ಲಿ ವಿನೂತನ ಪ್ರತಿಭಟನೆ
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
“ಇಮ್ರಾನ್ ಖಾನ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಪತ್ರಕ್ಕೆ ಇಂಗ್ಲೆಂಡ್ನ ಅಲಸ್ಟೇರ್ ಕುಕ್, ಆಸ್ಟ್ರೇಲಿಯಾದ ಆಲನ್ ಬೋರ್ಡರ್, ಸ್ಟೀವ್ ವಾ, ವೆಸ್ಟ್ ಇಂಡೀಸ್ನ ಕ್ಲೈವ್ ಲಾಯ್ಡ್ ಸೇರಿದಂತೆ ಹಲವು ದಿಗ್ಗಜರು ಸಹಿ ಮಾಡಿದ್ದಾರೆ. ಭದ್ರತಾ ಕಾರಣಗಳನ್ನು ನೀಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿರುವುದಾಗಿ ಪಾಕ್ ಮೂಲಗಳು ತಿಳಿಸಿದ್ದು, ಪ್ರಸ್ತುತ ಪಾಕಿಸ್ತಾನ ಸರ್ಕಾರದಿಂದ ಈ ಮನವಿಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.
