ಸುತ್ತ - ಮುತ್ತ

ಕರಾವಳಿಯ ಆಹಾರ ಪ್ರೀಯರಿಗೊಂದು ಸಂತಸದ ಸುದ್ದಿ; ಶುಭಾರಂಭಗೊಂಡ ಅನ್ಫಾಲ್‌ ರೆಸ್ಟೋರೆಂಟ್‌

Reading…
Follow Us

ವರದಿಗಾರ-ಮೇ.05: ವಿಭಿನ್ನ ರುಚಿಗಳನ್ನು ಒಂದೇ ಮಳಿಗೆಯಡಿಯಲ್ಲಿ ನೀಡುವ ಉದ್ದೇಶದಿಂದ Anfal Restauant ತನ್ನ ಸೇವೆಯನ್ನು ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ NH 75, ಸೂರಿಕುಮೇರ್‌ ಮಾಣಿಯಲ್ಲಿ ಮೇ 3 ರಂದು ನಡೆದ ಅದ್ಧೂರಿ ಉದ್ಘಾಟನಾ ಸಮಾರಂಭದ ಮೂಲಕ ಆರಂಭಿಸಿದೆ.

ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯುಟಿ ಖಾದರ್‌ ಫರೀದ್‌ ಉದ್ಘಾಟನೆ ನೆರವೇರಿಸಿ, ಗುಣಮಟ್ಟದ ಆಹಾರ ನೀಡುವುದು ಸಂಸ್ಥೆಯ ಧ್ಯೇಯವಾಗಿರುವುದರಿಂದ ಇದು ಜನರನ್ನು ತನ್ನತ್ತ ಸೆಳೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ರಾಷ್ಟೀಯ ಹೆದ್ದಾರಿಯಲ್ಲಿ ಅಗತ್ಯವಾಗಿ ಬೇಕಾಗಿದ್ದ ವವಸ್ಥಿತ ರೆಸ್ಟೋರೆಂಟ್‌ ಇದಾಗಿದ್ದು ಅದನ್ನು ಅನ್ಫಾಲ್‌ ರೆಸ್ಟೋರೆಂಟ್‌ ಇಂದು ಪೂರೈಸಿದೆ. ಸಂಸ್ಥೆಗೆ ಎಲ್ಲಾ ರೀತಿಯ ಶುಭವನ್ನು ಕೋರುತ್ತೇನೆ ಎಂದು ಯುಟಿ ಖಾದರ್‌ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಅವರು, ಖ್ಯಾತ ಸಾಹಿತಿ ಯೋಗೇಶ್‌ ಮಾಸ್ಟರ್‌ ರವರು ಬರೆದ “ನನ್ನ ಪ್ರೀತಿಯ ಪ್ರವಾದಿ” ಪುಸ್ತಕವನ್ನು ಬಿಡುಗಡೆಗೊಳಿಸಿದರು.  

ಮೂವರು ಸ್ಥಳೀಯ ಸಾಧಕರನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಿದರು.

ಸಮಾರಂಭದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್‌ ಅಲಿ, ಗ್ಯಾರಂಟಿ ನ್ಯೂಸ್‌ ಚಾನೆಲ್‌ ಇದರ ಎಡಿಟರ್‌ ಇನ್‌ ಚೀಫ್‌ ರಾಧಾ ಹಿರೇಗೌಡರ್‌, ಸುದ್ದಿ ನಿರೂಪಕಿ ಪೂಜಾ ಹಿರೇಗೌಡರ್‌, ಪತ್ರಕರ್ತ ರಾ ಚಿಂತನ್‌,ಎಸ್‌ಡಿಪಿಐ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಅಶ್ರಫ್‌ ಅಂಕಜಾಲ್‌, ರಿಯಾಝ್‌ ಫರಂಗಿಪೇಟೆ,  ಮಾಜಿ ಮೇಯರ್‌ ಅಶ್ರಫ್‌, ನಮ್ಮ ಧ್ವನಿಯ ಎಂ ಮಹೇಶ್‌, ಎಂ ಎಸ್‌ ಮುಹಮ್ಮದ್‌ ಸೇರಿದಂತೆ ಹಲವು ರಾಜಕೀಯ, ಸಾಮಾಜಿಕ ನಾಯಕರು ಉಪಸ್ಥಿತರಿದ್ದರು.

ಕುಟುಂಬದೊಂದಿಗೆ, ಸ್ನೇಹಿತರೊಂದಿಗೆ ರುಚಿಕರವಾದ ಸಮಯ ಕಳೆಯಲು ಇದು ಸೂಕ್ತವಾದ ಸ್ಥಳವಾಗಿರಲಿದೆ. ಇಲ್ಲಿ ಇಂಡಿಯನ್, ಚೈನೀಸ್ ಹಾಗೂ ಅರೇಬಿಯನ್ ಖಾದ್ಯಗಳು ವಿಶೇಷವಾಗಿ ಲಭ್ಯವಿದ್ದು, ಪ್ರತಿಯೊಬ್ಬರ ರುಚಿಗೆ ತಕ್ಕಂತೆ ವೈವಿಧ್ಯಮಯ ಮೆನು ಸಿದ್ಧಪಡಿಸಲಾಗಿದೆ. ಸ್ವಚ್ಛತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುವ ದೃಢ ಸಂಕಲ್ಪದೊಂದಿಗೆ ಈ ರೆಸ್ಟೋರೆಂಟ್ ಶುಭಾರಂಭಗೊಂಡಿದೆ ಎಂದು ಸಂಸ್ಥೆಯು ತಿಳಿಸಿದೆ.

ಅದೇ ರೀತಿ, ಗ್ರಾಹಕರ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಎಸಿ ಫ್ಯಾಮಿಲಿ ರೂಂ, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಪಾರ್ಟಿ ಹಾಲ್, ಮಜ್ಲಿಸ್ ವ್ಯವಸ್ಥೆ, ಪ್ರಾರ್ಥನಾ ಕೊಠಡಿ ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕುಟುಂಬ ಸಮಾರಂಭಗಳು, ಸ್ನೇಹಿತರ ಕೂಟಗಳು ಮತ್ತು ವಿಶೇಷ ಸಂದರ್ಭಗಳಿಗೆ ಇದು ಅತ್ಯುತ್ತಮ ಸ್ಥಳವಾಗಲಿದೆ.

ಆಹಾರದ ರುಚಿಯೊಂದಿಗೆ ಮನಸ್ಸಿಗೆ ಹತ್ತಿರವಾಗುವ ಆತಿಥ್ಯವನ್ನು ಅನುಭವಿಸಲು ಅನ್ಫಾಲ್ ರೆಸ್ಟೋರೆಂಟ್ ನಿಮ್ಮನ್ನು ಹೃತ್ಪೂರ್ವಕವಾಗಿ ಆಹ್ವಾನಿಸುತ್ತದೆ ಎಂದು ತಿಳಿಸಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

From Across Varadigara

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ