ರಾಷ್ಟ್ರೀಯ ಸುದ್ದಿ

ನಾನು ರಾಜೀನಾಮೆ ಕೊಡುವುದೇ ಇಲ್ಲ: ಮಮತಾ ಬ್ಯಾನರ್ಜಿ ಸ್ಪಷ್ಟನೆ

Reading…
Follow Us

ವರದಿಗಾರ-ಮೇ.05: 2026ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಬಳಿಕ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಂಗಳವಾರ ರಾಜೀನಾಮೆ ನೀಡುವುದನ್ನು ಸ್ಪಷ್ಟವಾಗಿ ನಿರಾಕರಿಸಿ, ನಾವು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೇ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ, ಹಿಂಸಾಚಾರ ಉಂಟಾಗಿದೆ ಮತ್ತು ಅಧಿಕಾರಿಗಳು ಪಕ್ಷಪಾತದಿಂದ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದು, ರಾಜೀನಾಮೆ ನೀಡುವುದನ್ನು ನಿರಾಕರಿಸಿದ್ದಾರೆ.

“ನನ್ನ ರಾಜೀನಾಮೆಯ ಪ್ರಶ್ನೆಯೇ ಇಲ್ಲ. ನಾವು ಚುನಾವಣೆಯಲ್ಲಿ ಸೋತಿಲ್ಲ. ತಮ್ಮ ಪಕ್ಷಕ್ಕೆ ನೈತಿಕ ಗೆಲುವು ದೊರೆತಿದೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “ನಮ್ಮ ಹೋರಾಟ ಬಿಜೆಪಿಯೊಂದಿಗೆ ಅಲ್ಲ, ಚುನಾವಣಾ ಆಯೋಗದೊಂದಿಗೆ. ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಯೋಜಿತವಾಗಿ ಕೆಲಸ ಮಾಡಿದೆ. ಇದು ಪ್ರಜಾಪ್ರಭುತ್ವದ ಕ್ರೂರ ಕೊಲೆ,” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಅವರು ನ್ಯಾಯಸಮ್ಮತವಾಗಿ ಗೆದ್ದಿದ್ದರೆ ನಾನು ದೂರು ನೀಡುತ್ತಿರಲಿಲ್ಲ. ಆದರೆ ನಾವು ಸೋತಿಲ್ಲ; ನಮ್ಮ ಗೆಲುವನ್ನು ಕಸಿದುಕೊಳ್ಳಲಾಗಿದೆ ,” ಎಂದು ಖಾರವಾಗಿಯೇ ಹೇಳಿಕೆ ನೀಡಿದ್ದಾರೆ.ಚುನಾವಣಾ ಪ್ರಚಾರ ಮತ್ತು ಮತ ಎಣಿಕೆ ಅವಧಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದ ಅವರು, “ಮೊದಲ ಸುತ್ತಿನ ನಂತರ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದವು. ಆ ಬಳಿಕ ಬಿಜೆಪಿ, ಬೂತ್‌ಗಳಿಗೆ ನುಗ್ಗಿ ನಮ್ಮ ಕಾರ್ಯಕರ್ತರ ಮೇಲೆ ದಾಳಿ ಆರಂಭಿಸಿತು,”

“ಬಿಜೆಪಿ ಗೂಂಡಾಗಳೊಂದಿಗೆ ದೌರ್ಜನ್ಯ ನಡೆಸಿತು. ಪೊಲೀಸರು ಸಂಪೂರ್ಣ ನಿಷ್ಕ್ರಿಯರಾಗಿದ್ದರು. ನಮ್ಮ ಜನರನ್ನು ಹಿಂಸಿಸಲಾಯಿತು. ಎಸ್‌ಸಿ ಮತ್ತು ಎಸ್‌ಟಿ ಕುಟುಂಬಗಳ ಮೇಲೂ ದಾಳಿ ನಡೆದಿದೆ, ಮಹಿಳೆಯರಿಗೆ ಅತ್ಯಾಚಾರದ ಬೆದರಿಕೆ ಹಾಕಲಾಗಿದೆ” ಎಂದು ಆರೋಪಿಸಿದ್ದಾರೆ. ಕೇಂದ್ರ ಪಡೆಗಳ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ‘ಇದು ಜವಾನರ ಪಡೆಯಾ ಅಥವಾ ಗೂಂಡಾಗಳ ಪಡೆಯಾ? ಇಂತಹ ವರ್ತನೆ ಎಂದಿಗೂ ಕಂಡಿಲ್ಲ,’ ಎಂದು ಪ್ರತಿಕ್ರಿಯಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

“ವೋಟ್ ಚೋರಿ, ಸರ್ಕಾರ ಚೋರಿ ನಂತರ ಇದೀಗ ಸೀಟ್ ಚೋರಿ; BJP – EC ಜುಗಲ್‌ಬಂದಿ” – ರಾಹುಲ್ ಗಾಂಧಿ

ಸಾಮಾಜಿಕ ತಾಣ

AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!

From Across Varadigara

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ