ಕಾಣಿಸದ್ದು - ಕೇಳಿಸದ್ದು

‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಆರೋಪ!

Reading…
Follow Us

ಸಾರಾಂಶ

ಯೂಟ್ಯೂಬ್ ಪ್ರವಚನಗಳ ಮೂಲಕ ಐಟಿ ವೃತ್ತಿಪರರು ಹಾಗೂ ಸುಶಿಕ್ಷಿತ ಯುವತಿಯರನ್ನು ಸೆಳೆದು, ಸಾಂಪ್ರದಾಯಿಕ ವಿಧಿವಿಧಾನಗಳಿಲ್ಲದ 'ಗಂಧರ್ವ ವಿವಾಹ'ದ ನೆಪದಲ್ಲಿ ಲೈಂಗಿಕ ಶೋಷಣೆ ಮತ್ತು ಬ್ಲಾಕ್‌ಮೇಲ್ ಮಾಡುತ್ತಿದ್ದ ‘ಐಐಟಿ ಬಾಬಾ’ ಖ್ಯಾತಿಯ ಅಭಿಷೇಕ್ ಮಿಶ್ರಾನನ್ನು ಮಥುರಾ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ನರ್ಸಿಂಗ್ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಈ ಜಾಲ ಬಯಲಾಗಿದೆ. ಪ್ರಸಾದ ಎಂದು ನಂಬಿಸಿ ಹಾಲಿನಲ್ಲಿ ಮಾದಕ ದ್ರವ್ಯ ಬೆರೆಸಿ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಮೊಬೈಲ್‌ನಲ್ಲಿ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿದ್ದು, ತನಿಖೆ ಪ್ರಗತಿಯಲ್ಲಿದೆ. 

ಆಧ್ಯಾತ್ಮಿಕತೆಯ ಹೆಸರಿನಲ್ಲಿ ಸುಶಿಕ್ಷಿತ ಯುವತಿಯರನ್ನು ಸೆಳೆದು ಲೈಂಗಿಕ ಶೋಷಣೆ ಹಾಗೂ ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಐಐಟಿ ರೂರ್ಕಿ ಸಂಸ್ಥೆಯ ಪದವೀಧರನೊಬ್ಬನನ್ನು ಉತ್ತರ ಪ್ರದೇಶದ ಮಥುರಾ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯವಾಗಿ ‘ಐಐಟಿ ಬಾಬಾ’ ಎಂದೇ ಚರ್ಚೆಗೆ ಒಳಗಾಗಿರುವ, ಒಡಿಶಾದ ಭುವನೇಶ್ವರ ಮೂಲದ 29 ವರ್ಷದ ಅಭಿಷೇಕ್ ಮಿಶ್ರಾ ಬಂಧಿತ ಆರೋಪಿಯಾಗಿದ್ದಾನೆ. ಈತ ಮಥುರಾದ ಗೋವರ್ಧನ ವ್ಯಾಪ್ತಿಯ ರಾಧಾ ಕುಂಡ್ ಪ್ರದೇಶದಲ್ಲಿ ಆಶ್ರಮದಂತಹ ವಸತಿ ನಿರ್ಮಿಸಿಕೊಂಡು, ತನ್ನನ್ನು ತಾನು ಆಧ್ಯಾತ್ಮಿಕ ಗುರು ಎಂದು ಬಿಂಬಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢ ಮೂಲದ 22 ವರ್ಷದ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಜೂನ್ 1, 2026 ರಂದು ಈ ಬಂಧನ ನಡೆದಿದೆ. ಆರೋಪಿ ಅಭಿಷೇಕ್ ಮಿಶ್ರಾ ಸಾಮಾಜಿಕ ಜಾಲತಾಣಗಳಲ್ಲಿ ‘ಆದಿಕರ್ತ ನಾರಾಯಣ ದಾಸ್’ ಎಂಬ ಹೆಸರಿನಲ್ಲಿ ಸಕ್ರಿಯನಾಗಿದ್ದ. ಭಗವದ್ಗೀತೆಯ ಕುರಿತು ಆನ್‌ಲೈನ್ ಮೂಲಕ ಪ್ರವಚನಗಳನ್ನು ನೀಡುತ್ತಾ ಐಟಿ ಉದ್ಯೋಗಿಗಳು, ಎಂಜಿನಿಯರ್‌ಗಳು ಹಾಗೂ ಸುಶಿಕ್ಷಿತ ಯುವತಿಯರನ್ನು ತನ್ನತ್ತ ಆಕರ್ಷಿಸುತ್ತಿದ್ದ ಎನ್ನಲಾಗಿದೆ. ದೂರು ನೀಡಿರುವ ಯುವತಿಯನ್ನು ತನ್ನ ನಿವಾಸಕ್ಕೆ ಕರೆಸಿಕೊಂಡಿದ್ದ ಆರೋಪಿ, ಪ್ರಸಾದ ಎಂದು ನಂಬಿಸಿ ಹಾಲಿನಲ್ಲಿ ಮಾದಕ ದ್ರವ್ಯ ಬೆರೆಸಿ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಈ ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ 5 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಥುರಾ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಚಂದ್ರ ರಾವತ್ ಅವರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ಅಭಿಷೇಕ್ ಮಿಶ್ರಾ ಐಐಟಿ ರೂರ್ಕಿಯಲ್ಲಿ 2017-2021 ರ ಅವಧಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಮುಗಿಸಿದ್ದ. ವಾರ್ಷಿಕ 20 ಲಕ್ಷ ರೂಪಾಯಿ ಪ್ಯಾಕೇಜ್‌ನ ಕಾರ್ಪೊರೇಟ್ ಕೆಲಸದಲ್ಲಿದ್ದ ಈತ, ಮೂರು ವರ್ಷಗಳ ಹಿಂದೆ ಅದನ್ನು ತೊರೆದು ಮಥುರಾಕ್ಕೆ ಬಂದಿದ್ದ. ಮೊದಲು ಬಾಡಿಗೆ ಮನೆಯಲ್ಲಿದ್ದ ಈತ, ನಂತರ ಸ್ವಂತ ಮನೆ ಖರೀದಿಸಿ ಅದನ್ನು ಆಶ್ರಮದ ಮಾದರಿಯಲ್ಲಿ ಬದಲಾಯಿಸಿಕೊಂಡು ಭಕ್ತರಿಗೆ ಆಶ್ರಯ ನೀಡಲು ಆರಂಭಿಸಿದ್ದ.  

ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಅಂಶವೊಂದು ಹೊರಬಿದ್ದಿದ್ದು, ಆರೋಪಿಯು ತನ್ನ ಆಶ್ರಮಕ್ಕೆ ಬರುವ ಸುಶಿಕ್ಷಿತ ಯುವತಿಯರನ್ನು ವ್ಯವಸ್ಥಿತವಾಗಿ ಬ್ರೈನ್‌ವಾಶ್ ಮಾಡುತ್ತಿದ್ದ. ಗುಂಪಿನಲ್ಲಿದ್ದ ಯುವತಿಯರನ್ನು ಪುಸಲಾಯಿಸಲು ಮತ್ತು ತನ್ನ ಕೃತ್ಯಗಳಿಗೆ ಧಾರ್ಮಿಕ ಮುಖವಾಡ ತೊಡಿಸಲು ಈತ ‘ಗಂಧರ್ವ ವಿವಾಹ’ದ ತಂತ್ರವನ್ನು ಬಳಸುತ್ತಿದ್ದ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪುರಾತನ ಸಂಪ್ರದಾಯದ ಪ್ರಕಾರ ಯಾವುದೇ ಅಗ್ನಿ ಸಾಕ್ಷಿ, ಮಂತ್ರ-ಮಾಂಗಲ್ಯ, ಹಿರಿಯರ ಒಪ್ಪಿಗೆ ಅಥವಾ ಸಾಮಾಜಿಕ ಆಚರಣೆಗಳಿಲ್ಲದೆ ಕೇವಲ ಇಬ್ಬರ ಪರಸ್ಪರ ಒಪ್ಪಿಗೆಯಿಂದ ಆಗುವ ವಿವಾಹ ಪದ್ಧತಿಯನ್ನು ಈತ ತನ್ನ ಶೋಷಣೆಗೆ ದಾಳವಾಗಿಸಿಕೊಂಡಿದ್ದ. ಇಂತಹ ಮುಖವಾಡದ ಅಡಿಯಲ್ಲಿ ಈತ ಯುವತಿಯರೊಂದಿಗೆ ದೈಹಿಕ ಸಂಪರ್ಕ ಬೆಳೆಸುತ್ತಿದ್ದ ಹಾಗೂ ತನ್ನ ಅನುಯಾಯಿಗಳ ನಡುವೆಯೂ ಇಂತಹ ಅನಧಿಕೃತ ಸಂಬಂಧಗಳನ್ನು ಪ್ರೋತ್ಸಾಹಿಸುತ್ತಿದ್ದ ಎಂದು ಗೋವರ್ಧನ ವೃತ್ತದ ಡಿಎಸ್‌ಪಿ ಅನಿಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.  

ಬಂಧನದ ವೇಳೆ ಪೊಲೀಸರು ಆರೋಪಿಯ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಅದರಲ್ಲಿ 12 ಕ್ಕೂ ಹೆಚ್ಚು ಆಕ್ಷೇಪಾರ್ಹ ಚಿತ್ರಗಳು ಮತ್ತು ವಿಡಿಯೋಗಳು ಪತ್ತೆಯಾಗಿವೆ. ಇದೇ ವೇಳೆ ಆಶ್ರಮದ ಆವರಣದಲ್ಲಿದ್ದ ಬಿಲಾಸಪುರದ ಯುವತಿ, ಮಧ್ಯಪ್ರದೇಶದ ಛತ್ತರಪುರದ  ಯುವತಿ ಹಾಗೂ ಒಬ್ಬ ಯುವಕನನ್ನು ಪೊಲೀಸರು ರಕ್ಷಿಸಿ ಅವರ ಪೋಷಕರಿಗೆ ಒಪ್ಪಿಸಿದ್ದಾರೆ. ಮೇ 25 ರಂದೇ ಗೋವರ್ಧನ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ ಅತ್ಯಾಚಾರ, ಸುಲಿಗೆ, ಕ್ರಿಮಿನಲ್ ಬೆದರಿಕೆ ಹಾಗೂ ಲೈಂಗಿಕ ಕಿರುಕುಳ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಜೈಲಿಗಟ್ಟಲಾಗಿದ್ದು, ಈತನ ಜಾಲಕ್ಕೆ ಬಿದ್ದಿರುವ ಇತರ ಸಂತ್ರಸ್ತರ ಬಗ್ಗೆ ತನಿಖೆ ಮುಂದುವರಿದಿದೆ.  

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕಾಣಿಸದ್ದು - ಕೇಳಿಸದ್ದು

ಉತ್ತರ ಪ್ರದೇಶ: ವಾರ್ಡ್ ಅಭಿವೃದ್ಧಿ ನಿರ್ಲಕ್ಷ್ಯದ ವಿರುದ್ಧ ತಲೆ ಬೋಳಿಸಿ ಪ್ರತಿಭಟಿಸಿದ ಬಿಜೆಪಿ ಕೌನ್ಸಿಲರ್

ರಾಷ್ಟ್ರೀಯ ಸುದ್ದಿ

ಯೋಗಿ ಆದಿತ್ಯನಾಥ್‌ಗೆ ಇಕ್ರಾ ಹಸನ್ ತಿರುಗೇಟು: “ಯಾವುದೇ ಸಮುದಾಯವನ್ನು ಗುರಿ ಮಾಡುವ ಹಕ್ಕು ಅವರಿಗಿಲ್ಲ”

ರಾಷ್ಟ್ರೀಯ ಸುದ್ದಿ

ರಸ್ತೆ ತಡೆದು ನಮಾಜ್‌ ಮಾಡಿದರೆ ಕಾನೂನು ಕ್ರಮ, ಮಸೀದಿಗಳಲ್ಲಿ ‘ಶಿಫ್ಟ್’ ಪದ್ಧತಿ ಬಳಸಿ: ಯೋಗಿ ಆದಿತ್ಯನಾಥ್ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

“ಗಂಗಾ ನದಿಗೆ ಮಾಂಸಾಹಾರದ ತ್ಯಾಜ್ಯ ಎಸೆಯುವುದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ”: ವಾರಣಾಸಿ ಇಫ್ತಾರ್ ಪ್ರಕರಣದ ಎಂಟು ಮಂದಿಗೆ ಅಲಹಾಬಾದ್ ಹೈಕೋರ್ಟ್‌ನಿಂದ ಜಾಮೀನು

ರಾಷ್ಟ್ರೀಯ ಸುದ್ದಿ

ಮಳೆಗಾಲಕ್ಕೂ ಮುನ್ನವೇ ಉತ್ತರ ಪ್ರದೇಶದಲ್ಲಿ ರುದ್ರತಾಂಡವ: ಸಿಡಿಲು, ಬಿರುಗಾಳಿಗೆ 111 ಬಲಿ, ನೂರಾರು ಮನೆಗಳು ಧ್ವಂಸ

From Across Varadigara

ವಿಶೇಷ ಲೇಖನ

ದ್ವೇಷದ ಚಿತೆಗೆ ಮಾನವೀಯತೆಯ ಅಗ್ನಿಸ್ಪರ್ಶ: ಇರ್ಫಾನಾ ಇಕ್ಬಾಲ್ ಮಾನವೀಯ ಪಾಠ | ಕೇರಳದ ರಿಯಲ್ ಸ್ಟೋರಿ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಸಾಮಾಜಿಕ ತಾಣ

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ ಜಾಹೀರಾತು; ಮೆಟಾ ಬೇಜವಾಬ್ದಾರಿತನ ಬಯಲಿಗೆಳೆದ ಬಿಬಿಸಿ ತನಿಖಾ ವರದಿ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ಅಂತಾರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಹೊಸ ಆದೇಶ: ಸರ್ಕಾರಿ ನೌಕರರು ಮತ್ತು ಸೇನಾಧಿಕಾರಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ನಿಷೇಧ

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ