ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ತಂತ್ರಜ್ಞಾನದಲ್ಲಿ ಸ್ಪಷ್ಟವಾದ ಹೆಜ್ಜೆಯಿಡದಿರುವುದು, ದುಬಾರಿ ಷೇರು ಮೌಲ್ಯ ಹಾಗೂ ಆರ್ಥಿಕ ಪ್ರಗತಿಯ ನಿಧಾನಗತಿ ಹಿನ್ನೆಲೆಯಲ್ಲಿ ಜಾಗತಿಕ ಹೂಡಿಕೆದಾರರು ಭಾರತೀಯ ಷೇರು ಮಾರುಕಟ್ಟೆಯತ್ತ ವಿಮುಖರಾಗುತ್ತಿದ್ದಾರೆ. ಬ್ಯಾಂಕ್ ಆಫ್ ಅಮೆರಿಕ ನಡೆಸಿದ ಇತ್ತೀಚಿನ ನಿಧಿ ನಿರ್ವಾಹಕರ (ಫಂಡ್ ಮ್ಯಾನೇಜರ್) ಸಮೀಕ್ಷೆಯ ಪ್ರಕಾರ, ಏಷ್ಯಾ ಖಂಡದಲ್ಲೇ ಹೂಡಿಕೆಗೆ ಭಾರತೀಯ ಷೇರು ಮಾರುಕಟ್ಟೆಯು ಅತ್ಯಂತ ಕನಿಷ್ಠ ಆದ್ಯತೆಯ ತಾಣವಾಗಿ ಹೊರಹೊಮ್ಮಿದೆ.
ಆಗಸ್ಟ್ 7 ರಿಂದ 13 ರವರೆಗೆ ಸುಮಾರು 272 ಬಿಲಿಯನ್ ಡಾಲರ್ ಆಸ್ತಿ ನಿರ್ವಹಿಸುವ 98 ಪ್ರಮುಖ ಜಾಗತಿಕ ನಿಧಿ ನಿರ್ವಾಹಕರನ್ನು ಒಳಗೊಂಡು ಈ ಸಮೀಕ್ಷೆ ನಡೆಸಲಾಗಿತ್ತು. ಈ ಪೈಕಿ ಶೇಕಡಾ 32 ರಷ್ಟು ಹೂಡಿಕೆದಾರರು ಭಾರತೀಯ ಷೇರುಗಳ ಮೇಲಿನ ತಮ್ಮ ಹೂಡಿಕೆಯನ್ನು ತಗ್ಗಿಸಿರುವುದಾಗಿ ಅಭಿಪ್ರಾಯಪಟ್ಟಿದ್ದಾರೆ. ಇದರೊಂದಿಗೆ ಭಾರತವು ಇಂಡೋನೇಷ್ಯಾವನ್ನು ಹಿಂದಿಕ್ಕಿ, ಪ್ರದೇಶದಲ್ಲೇ ಅತ್ಯಂತ ಕಡಿಮೆ ಆದ್ಯತೆಯ ಮಾರುಕಟ್ಟೆಯಾಗಿ ಬದಲಾಗಿದೆ. ಆಸಕ್ತಿಕರ ವಿಷಯವೆಂದರೆ, ತೈವಾನ್ ಮತ್ತು ಜಪಾನ್ ಷೇರು ಮಾರುಕಟ್ಟೆಗಳು ಜಾಗತಿಕ ಹೂಡಿಕೆದಾರರ ನೆಚ್ಚಿನ ಆಯ್ಕೆಗಳಾಗಿ ಮುಂಚೂಣಿಯಲ್ಲಿವೆ.
ಇತ್ತೀಚಿನ ತ್ರೈಮಾಸಿಕದಲ್ಲಿ ನಿಫ್ಟಿ 50 ಕಂಪನಿಗಳ ಶೇಕಡಾ 18 ರಷ್ಟು ಲಾಭದ ಪ್ರಗತಿ ಹಾಗೂ 4 ಬಿಲಿಯನ್ ಡಾಲರ್ಗೂ ಹೆಚ್ಚಿನ ವಿದೇಶಿ ಬಂಡವಾಳ ಹರಿವಿನ ಹೊರತಾಗಿಯೂ ಜಾಗತಿಕ ಹೂಡಿಕೆದಾರರಲ್ಲಿ ಈ ಹಿಂಜರಿಕೆ ಕಂಡುಬಂದಿದೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತೀಯ ಕಂಪನಿಗಳ ಮಂದಗತಿ, ಷೇರುಗಳ ಅತಿಯಾದ ಮೌಲ್ಯೀಕರಣ, ನಿರೀಕ್ಷಿತ ಮಟ್ಟದಲ್ಲಿ ಆಗದ ಸುಧಾರಣೆಗಳು ಮತ್ತು ಆರ್ಥಿಕ ಪ್ರಗತಿಯ ನಿಧಾನಗತಿ ಜಾಗತಿಕ ಹೂಡಿಕೆದಾರರ ಆತಂಕಕ್ಕೆ ಮುಖ್ಯ ಕಾರಣಗಳಾಗಿವೆ. ಪ್ರಸಕ್ತ ಸಾಲಿನಲ್ಲಿ ಜಗತ್ತಿನ ಕಳಪೆ ಸಾಧನೆ ತೋರಿದ ಪ್ರಮುಖ ಷೇರು ಮಾರುಕಟ್ಟೆಗಳಲ್ಲಿ ಭಾರತವೂ ಒಂದಾಗಿದೆ.
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!
ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್ನಲ್ಲಿ ವಿನೂತನ ಪ್ರತಿಭಟನೆ
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಕಳೆದ ಕೆಲವು ವಾರಗಳಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕಂಡುಬಂದ ಕುಸಿತವು ನಿಧಿ ನಿರ್ವಾಹಕರ ಈ ಕಳವಳಕ್ಕೆ ಕನ್ನಡಿ ಹಿಡಿದಿದೆ. ಕಂಪನಿಗಳ ಷೇರು ಲಾಭ ಹೆಚ್ಚುತ್ತಿದ್ದರೂ, ಜಾಗತಿಕ ಮಟ್ಟದ ಸವಾಲುಗಳು ಹಾಗೂ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗಳ ಕೊರತೆಯಿಂದಾಗಿ ಹೂಡಿಕೆದಾರರು ಮುನ್ನೆಚ್ಚರಿಕೆಯ ಹೆಜ್ಜೆಯಿಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ದೇಶೀಯ ನಿಯಂತ್ರಣ ಸಂಸ್ಥೆಗಳು ಹಾಗೂ ಕಂಪನಿಗಳು ಈ ಸವಾಲುಗಳನ್ನು ಹೇಗೆ ಎದುರಿಸಲಿವೆ ಎಂಬುದು ಮಾರುಕಟ್ಟೆಯ ಭವಿಷ್ಯವನ್ನು ನಿರ್ಧರಿಸಲಿದೆ.
