ಸೌದಿ ಅರೇಬಿಯಾ ಮತ್ತು ಟರ್ಕಿ ದೇಶಗಳೊಂದಿಗೆ ತ್ರಿಪಕ್ಷೀಯ ರಕ್ಷಣಾ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ, ಪಾಕಿಸ್ತಾನವು ಗಲ್ಫ್ ವಲಯದಲ್ಲಿ ತನ್ನ ಮಿಲಿಟರಿ ಬಾಂಧವ್ಯವನ್ನು ಮತ್ತಷ್ಟು ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ-ರಾಜಕೀಯ ಉದ್ವಿಗ್ನತೆಯ ನಡುವೆಯೇ, ಕುವೈತ್ ಮತ್ತು ಪಾಕಿಸ್ತಾನ ದೇಶಗಳು ಆಗಸ್ಟ್ 27 ರಂದು ಇಸ್ಲಾಮಾಬಾದ್ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ‘ಪ್ರೋಟೋಕಾಲ್ ಒಪ್ಪಂದ 2026’ಕ್ಕೆ ಅಧಿಕೃತವಾಗಿ ಸಹಿ ಹಾಕಿವೆ. 2023ರಲ್ಲಿ ಮಾಡಿಕೊಳ್ಳಲಾಗಿದ್ದ ರಕ್ಷಣಾ ಸಹಕಾರ ಒಪ್ಪಂದದ ಮುಂದುವರಿದ ಭಾಗವಾಗಿ ಈ ಹೊಸ ಷರತ್ತುಗಳನ್ನು ಅಳವಡಿಸಿಕೊಳ್ಳಲಾಗಿದೆ.
ಈ ಒಪ್ಪಂದದ ಪ್ರಕಾರ, ಪಾಕಿಸ್ತಾನದ ಸಶಸ್ತ್ರ ಪಡೆಗಳು ಕುವೈತ್ ಸೇನೆಗೆ ವಿವಿಧ ಹಂತಗಳಲ್ಲಿ ನೆರವು ನೀಡಲಿವೆ. ಪ್ರಮುಖವಾಗಿ ಸೈನಿಕ ತರಬೇತಿ, ಸಾಮರ್ಥ್ಯ ವೃದ್ಧಿ, ಗಡಿ ನಿರ್ವಹಣೆ ಹಾಗೂ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ಕಾರ್ಯಾಚರಣೆಗಳಲ್ಲಿ ಸಹಕಾರ ವಿಸ್ತರಿಸಲು ನಿರ್ಧರಿಸಲಾಗಿದೆ. ಎರಡೂ ದೇಶಗಳ ನಡುವೆ ಸೇನಾ ಪರಿಣತಿಯನ್ನು ವಿನಿಮಯ ಮಾಡಿಕೊಳ್ಳುವುದು ಮತ್ತು ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಪಡೆಯ ಕಾರ್ಯಾಚರಣೆಯ ಸನ್ನದ್ಧತೆಯನ್ನು ಹೆಚ್ಚಿಸುವುದು ಈ ಪ್ರೋಟೋಕಾಲ್ನ ಮುಖ್ಯ ಉದ್ದೇಶ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕುವೈತ್ ರಕ್ಷಣಾ ಸಚಿವ ಶೇಖ್ ಅಬ್ದುಲ್ಲಾ ಅಲಿ ಅಬ್ದುಲ್ಲಾ ಅಲ್-ಸಾಬಾಹ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಅವರೊಂದಿಗೆ ಮಾತುಕತೆ ನಡೆಸಿತು. ಇದೇ ವೇಳೆ ಕುವೈತ್ ಸಚಿವರು ರಾವಲ್ಪಿಂಡಿಯ ಸೇನಾ ಪ್ರಧಾನ ಕಚೇರಿಯಲ್ಲಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರನ್ನು ಭೇಟಿಯಾಗಿ ಪ್ರಾದೇಶಿಕ ಭದ್ರತೆ ಮತ್ತು ದ್ವಿಪಕ್ಷೀಯ ಮಿಲಿಟರಿ ವ್ಯವಹಾರಗಳ ಕುರಿತು ಚರ್ಚಿಸಿದರು. ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಸ್ಥಿರತೆ ಕಾಯ್ದುಕೊಳ್ಳುವ ಬಗ್ಗೆಯೂ ಸಭೆಯಲ್ಲಿ ಗಮನಹರಿಸಲಾಯಿತು.
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!
ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ
ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ
ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ
ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್ ಸಂಗ್ರಹ!
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್ನಲ್ಲಿ ವಿನೂತನ ಪ್ರತಿಭಟನೆ
ಕುವೈತ್ ಸರ್ಕಾರವು 2023ರ ರಕ್ಷಣಾ ಒಪ್ಪಂದವನ್ನು ಇತ್ತೀಚೆಗಷ್ಟೇ ಅಧಿಕೃತವಾಗಿ ಅನುಮೋದಿಸಿತ್ತು. ಇದರ ಬೆನ್ನಲ್ಲೇ ಈ ನೂತನ ಪ್ರೋಟೋಕಾಲ್ ಜಾರಿಗೆ ಬಂದಿರುವುದು ಗಮನಾರ್ಹ. ಆದರೆ, ಈ ತರಬೇತಿ ಯೋಜನೆಗಳು ಮತ್ತು ಸೇನಾ ನಿಯೋಜನೆಯ ಕಾಲಮಿತಿ ಹಾಗೂ ಕಾರ್ಯಕ್ರಮಗಳ ನಿಖರ ವಿವರಗಳನ್ನು ಉಭಯ ಸರ್ಕಾರಗಳು ಇನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ಮುಂಬರುವ ದಿನಗಳಲ್ಲಿ ರಕ್ಷಣಾ ಮಂಡಳಿಯು ಈ ಪ್ರಕ್ರಿಯೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ಸಿದ್ಧಪಡಿಸಲಿದೆ.
