ಉತ್ತರ ಪ್ರದೇಶದ ಲಕ್ನೋದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಜಯಪ್ರಕಾಶ್ ನಾರಾಯಣ್ ಸರ್ವೋದಯ ವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಶಿಕ್ಷಕರ ತೀವ್ರ ಕೊರತೆಯನ್ನು ಖಂಡಿಸಿ ಆಗಸ್ಟ್ 14ರಂದು ಬುದ್ಧೇಶ್ವರ ಕ್ರಾಸಿಂಗ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಶಾಲೆಯಲ್ಲಿ ಸುಮಾರು 450 ವಿದ್ಯಾರ್ಥಿಗಳಿದ್ದರೂ ಕೇವಲ 7 ಜನ ಶಿಕ್ಷಕರಿದ್ದಾರೆ ಎಂದು ಆರೋಪಿಸಿದ ವಿದ್ಯಾರ್ಥಿಗಳು, ರಸ್ತೆಯಲ್ಲೇ ಕುಳಿತು ಸಂಚಾರಕ್ಕೆ ಅಡ್ಡಿಪಡಿಸಿದರು. ಸಕಾಲದಲ್ಲಿ ತರಗತಿಗಳು ನಡೆಯದೆ ಮುಂಬರುವ ಪರೀಕ್ಷಾ ಸಿದ್ಧತೆಗೆ ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಮಾರ್ಗವಾಗಿ ಕನ್ನೌಜ್ಗೆ ತೆರಳುತ್ತಿದ್ದ ಉತ್ತರ ಪ್ರದೇಶದ ಸಮಾಜ ಕಲ್ಯಾಣ ಸಚಿವ ಅಸೀಮ್ ಅರುಣ್ ಅವರು ತಮ್ಮ ವಾಹನವನ್ನು ತಡೆದು, ಸ್ಥಳದಲ್ಲೇ ಪ್ರತಿಭಟನಾನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸುವುದಾಗಿ ಸಚಿವರು ನೀಡಿ ಭರವಸೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದು ಶಾಲೆಗೆ ಮರಳಿದರು. ತದನಂತರ ಲಕ್ನೋ ಪೊಲೀಸರು ಬುದ್ಧೇಶ್ವರ ರಸ್ತೆಯಲ್ಲಿ ವಾಹನ ಸಂಚಾರವನ್ನು ಯಥಾಸ್ಥಿತಿಗೆ ತಂದರು.
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!
ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ
ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?
