ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

Reading…
Follow Us

ಸಾರಾಂಶ

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಫ ಮತ್ತು ನೆಗಡಿಗೆ ಚಿಕಿತ್ಸೆ ಪಡೆಯಲು ಬಂದ 19 ತಿಂಗಳ ಮಗುವಿಗೆ ಕಣ್ಣಿಗೆ ತಪ್ಪು ಔಷಧ (ನಾಸಲ್ ಡ್ರಾಪ್ಸ್) ಹಾಕಿದ ಕಾರಣ ಮಗು ದೃಷ್ಟಿ ಕಳೆದುಕೊಂಡಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆ ಸಂಬಂಧ ಆರೋಗ್ಯ ಇಲಾಖೆ 3 ಸದಸ್ಯರ ತನಿಖಾ ಸಮಿತಿ ರಚಿಸಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಆದರೆ ವೈದ್ಯರು ಮಗುವಿನ ಅಪೌಷ್ಟಿಕತೆಯೂ ಇದಕ್ಕೆ ಕಾರಣವಿರಬಹುದು ಎಂದು ವಾದಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದ ನಂತರ 19 ತಿಂಗಳ ಗಂಡು ಮಗುವೊಂದು ತನ್ನ ಕಣ್ಣಿನ ದೃಷ್ಟಿಯನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಗುವಿಗೆ ತಪ್ಪು ಔಷಧ ನೀಡಿದ್ದೇ ಈ ದುರಂತಕ್ಕೆ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆಯು ಘಟನೆ ಕುರಿತು ತನಿಖೆ ನಡೆಸಲು ಮೂರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ಸಾಗರ್ ಜಿಲ್ಲೆಯ ಭೂಸಾ ಕಮಲ್‌ಪುರ ಗ್ರಾಮದ ಇಂದ್ರಜ್ ವಿಶ್ವಕರ್ಮ ಅವರ 19 ತಿಂಗಳ ಮಗ ವಿನಯ್ ವಿಶ್ವಕರ್ಮನಿಗೆ ಕಫ, ನೆಗಡಿ ಮತ್ತು ಕಣ್ಣು ಕೆಂಪಾಗಿದ್ದ ಹಿನ್ನೆಲೆಯಲ್ಲಿ ಮೇ 29 ರಂದು ಬಂದಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ (OPD) ಮಕ್ಕಳ ತಜ್ಞ ಡಾ. ಹಿಮಾಂಶು ವರ್ಮಾ ಅವರು ಮಗುವನ್ನು ಪರೀಕ್ಷಿಸಿ ಕೆಲವು ದ್ರಾವಣಗಳು ಮತ್ತು ಸಿರಪ್‌ಗಳನ್ನು ಚೀಟಿಯಲ್ಲಿ ಬರೆದುಕೊಟ್ಟಿದ್ದರು. ಆದರೆ, ಆಸ್ಪತ್ರೆಯ ಸಿಬ್ಬಂದಿ ಕಫ ನಿವಾರಣೆಗೆ ಮೂಗಿಗೆ ಹಾಕಬೇಕಾಗಿದ್ದ ಡ್ರಾಪ್ಸ್ (ಸಲೈನ್ ನಾಸಲ್ ಡ್ರಾಪ್ಸ್) ಅನ್ನು ಮಗುವಿನ ಕಣ್ಣಿಗೆ ಹಾಕಿದ್ದಾರೆ ಎಂದು ಪೋಷಕರು ದೂರಿದ್ದಾರೆ.

ಔಷಧ ಹಾಕಿದ ಕೆಲವೇ ಗಂಟೆಗಳಲ್ಲಿ ಮಗುವಿನ ಸ್ಥಿತಿ ಹದಗೆಟ್ಟಿದೆ. ತಕ್ಷಣವೇ ಮಗುವನ್ನು ಸಾಗರ್ ಜಿಲ್ಲಾ ಆಸ್ಪತ್ರೆಗೆ ಹಾಗೂ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಸುಮಾರು 225 ಕಿಲೋಮೀಟರ್ ದೂರದಲ್ಲಿರುವ ಭೋಪಾಲ್‌ನ ಪ್ರತಿಷ್ಠಿತ ಎಮ್ಸ್ (AIIMS) ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ತಪ್ಪು ಔಷಧದ ತೀವ್ರತೆಯಿಂದಾಗಿ ಮಗು ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡಿದೆ ಎಂದು ಎಮ್ಸ್ ವೈದ್ಯರು ದೃಢಪಡಿಸಿದ್ದಾರೆ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಈ ಸಂಬಂಧ ಮಗುವಿನ ತಂದೆ ಇಂದ್ರಜ್ ಅವರು ಬಂದಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಗನ ಜೀವನ ಹಾಳುಮಾಡಿದ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಮಕ್ಕಳ ತಜ್ಞ ಡಾ. ಹಿಮಾಂಶು, ಮಗುವನ್ನು ಆಸ್ಪತ್ರೆಗೆ ತಂದಾಗಲೇ ಅದರ ಸ್ಥಿತಿ ಗಂಭೀರವಾಗಿತ್ತು. ಹಾಗಾಗಿ ಪ್ರಾಥಮಿಕ ಚಿಕಿತ್ಸೆ ನೀಡಿ ತಕ್ಷಣವೇ ಮೇಲ್ಮಟ್ಟದ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕಣ್ಣಿನ ಔಷಧದ ಬಾಟಲಿಗೂ ತಾವು ಬರೆದುಕೊಟ್ಟ ಚೀಟಿಗೂ ಸಾಮ್ಯತೆಯಿಲ್ಲ. ಮಗು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ವೈದ್ಯಕೀಯ ವಿಜ್ಞಾನದ ಪ್ರಕಾರ ಅಪೌಷ್ಟಿಕತೆಯೂ ದೃಷ್ಟಿ ದೋಷಕ್ಕೆ ಕಾರಣವಾಗಬಹುದು. ತನಿಖೆಯ ಮುನ್ನವೇ ಯಾರನ್ನೂ ದೂಷಿಸುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಾಗರ್ ಜಿಲ್ಲೆಯ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಗಂಗಾ ಪ್ರಸಾದ್ ಆರ್ಯ ಅವರು ಪ್ರತಿಕ್ರಿಯಿಸಿ, ಘಟನೆಯ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಲಾಗಿದೆ. ಮೂರು ಸದಸ್ಯರ ಸಮಿತಿಯು ಯಾವ ಔಷಧವನ್ನು ಶಿಫಾರಸು ಮಾಡಲಾಗಿತ್ತು ಮತ್ತು ವಾಸ್ತವವಾಗಿ ಮಗುವಿಗೆ ಏನನ್ನು ನೀಡಲಾಗಿದೆ ಎಂಬುದನ್ನು ಪರಿಶೀಲಿಸಿ ಒಂದು ವಾರದೊಳಗೆ ವರದಿ ನೀಡಲಿದೆ. ನಿರ್ಲಕ್ಷ್ಯ ಸಾಬೀತಾದರೆ ಕಠಿಣ ಕ್ರಮ ಖಂಡಿತ ಎಂದು ಭರವಸೆ ನೀಡಿದ್ದಾರೆ. ಸದ್ಯ ಪೊಲೀಸರು ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದು, ತನಿಖಾ ವರದಿಯ ನಂತರವೇ ಈ ಕರುಣಾಜನಕ ಘಟನೆಯ ಹಿಂದಿನ ನೈಜ ಸತ್ಯಾಂಶ ಹೊರಬರಬೇಕಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ಕಾಣಿಸದ್ದು - ಕೇಳಿಸದ್ದು

ಅಂತರ್ಜಾತಿ ಗೆಳೆತನದ ಹಿನ್ನೆಲೆ: ದಲಿತ ವಿದ್ಯಾರ್ಥಿಯ ಕ್ರೂರ ಕೊಲೆ, ಇಬ್ಬರ ಬಂಧನ

ಕಾಣಿಸದ್ದು - ಕೇಳಿಸದ್ದು

ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್

ಕಾಣಿಸದ್ದು - ಕೇಳಿಸದ್ದು

‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಆರೋಪ!

From Across Varadigara

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ