ಮಹಾರಾಷ್ಟ್ರ ಸರ್ಕಾರವು ಅದಾನಿ ಸಮೂಹದ ಎರಡು ಬೃಹತ್ ಯೋಜನೆಗಳಿಗಾಗಿ ರಾಯಗಢ ಮತ್ತು ಅಮರಾವತಿ ಜಿಲ್ಲೆಗಳಲ್ಲಿ ಬರುವ ಸುಮಾರು 83,700 ಚದರ ಅಡಿ (ಸುಮಾರು 0.78 ಹೆಕ್ಟೇರ್) ಅರಣ್ಯ ಭೂಮಿಯನ್ನು ಬಿಟ್ಟುಕೊಡಲು ಅನುಮೋದನೆ ನೀಡಿದೆ. ಈ ಕುರಿತು ಆಗಸ್ಟ್ 10ರಂದು ಮಹಾರಾಷ್ಟ್ರ ಅರಣ್ಯ ಇಲಾಖೆಯು ಎರಡು ಪ್ರತ್ಯೇಕ ಸರ್ಕಾರಿ ನಿರ್ಣಯಗಳನ್ನು (ಜಿಆರ್) ಹೊರಡಿಸಿದ್ದು, ಅದಾನಿ ಸಿಮೆಂಟೇಶನ್ ಲಿಮಿಟೆಡ್ ಹಾಗೂ ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ ಕಂಪನಿಗಳಿಗೆ ಭೂಮಿಯ ಬಳಕೆಯ ಹಕ್ಕನ್ನು ಹಸ್ತಾಂತರಿಸಿದೆ.
ರಾಯಗಢ ಜಿಲ್ಲೆಯ ಅಲಿಬಾಗ್ ತಾಲೂಕಿನ ಶಹಾಪುರ ಮತ್ತು ಶಹಾಬಾಜ್ ಗ್ರಾಮಗಳಲ್ಲಿರುವ ಸುಮಾರು 69,933 ಚದರ ಅಡಿ ಕಾಯ್ದಿರಿಸಿದ ಅರಣ್ಯ, ಕ್ರೀಕ್ ಮತ್ತು ಮ್ಯಾಂಗ್ರೋವ್ ಅರಣ್ಯ ಭೂಮಿಯನ್ನು ಅದಾನಿ ಸಿಮೆಂಟೇಶನ್ ಲಿಮಿಟೆಡ್ಗೆ ನೀಡಲಾಗಿದೆ. ಕಂಪನಿಯು ತನ್ನ ಪ್ರಸ್ತಾವಿತ ರಾಯಗಢ ಸಿಮೆಂಟ್ ಬಲ್ಕ್ ಟರ್ಮಿನಲ್ಗೆ ಅಗತ್ಯವಿರುವ ಬರ್ತಿಂಗ್ ಜೆಟ್ಟಿ, ಕನ್ವೇಯರ್ ಕಾರಿಡಾರ್ ಹಾಗೂ ರಸ್ತೆ ನಿರ್ಮಾಣಕ್ಕಾಗಿ ಈ ಸೂಕ್ಷ್ಮ ಪರಿಸರ ವಲಯವನ್ನು ಬಳಸಿಕೊಳ್ಳಲಿದೆ. ಆದರೆ, ಈ ಪ್ರದೇಶಕ್ಕೆ ಅರಣ್ಯ ಅಧಿಕಾರಿಗಳ ಪ್ರವೇಶಕ್ಕೆ ಯಾವುದೇ ಅಡ್ಡಿಪಡಿಸಬಾರದು ಮತ್ತು ನಿಯಮ ಉಲ್ಲಂಘಿಸಿದರೆ ಮಂಜೂರಾತಿಯನ್ನು ಹಿಂಪಡೆಯಲಾಗುವುದು ಎಂಬ ಕಟ್ಟುನಿಟ್ಟಿನ ಷರತ್ತನ್ನು ಸರ್ಕಾರ ವಿಧಿಸಿದೆ.
ಮತ್ತೊಂದೆಡೆ, ಅಮರಾವತಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈಸರ್ಗಿಕ ಅನಿಲ ವಿತರಣಾ ಜಾಲವನ್ನು ವಿಸ್ತರಿಸುವ ಸಲುವಾಗಿ ಭೂಗತ ಸ್ಟೀಲ್ ಪೈಪ್ಲೈನ್ ಅಳವಡಿಸಲು ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ಗೆ 13,788 ಚದರ ಅಡಿ ಅರಣ್ಯ ಭೂಮಿಯನ್ನು ಹಸ್ತಾಂತರಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅರಣ್ಯೇತರ ಉದ್ದೇಶಕ್ಕಾಗಿ ಭೂಮಿ ಬಳಸಿಕೊಳ್ಳುವ ನಿಯಮಾವಳಿಗಳ ಪ್ರಕಾರ ಈ ಮಂಜೂರಾತಿ ನೀಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ
ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ
‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ
ಆದಾಗ್ಯೂ, ಈ ಯೋಜನೆಗಳಿಂದ ನಾಶವಾಗುವ ಮ್ಯಾಂಗ್ರೋವ್ ಹಾಗೂ ಜೀವ ವೈವಿಧ್ಯತೆಗೆ ಪರ್ಯಾಯವಾಗಿ ಕೈಗೊಳ್ಳಬೇಕಾದ ಪರ್ಯಾಯ ಅರಣ್ಯೀಕರಣ (Compensatory Afforestation) ಕ್ರಮಗಳ ಕುರಿತು ಅಥವಾ ಯೋಜನೆಯ ಮುಂದಿನ ಹಂತದ ತೆರವು ಪ್ರಕ್ರಿಯೆಗಳ ಬಗ್ಗೆ ಸರ್ಕಾರಿ ಆದೇಶದಲ್ಲಿ ಯಾವುದೇ ಸ್ಪಷ್ಟ ವಿವರಣೆಗಳನ್ನು ನೀಡಲಾಗಿಲ್ಲ. ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಕರಾವಳಿ ಮತ್ತು ಮ್ಯಾಂಗ್ರೋವ್ ಅರಣ್ಯ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ವರ್ಗಾಯಿಸುತ್ತಿರುವುದು ಪರಿಸರ ಪ್ರೇಮಿಗಳಲ್ಲಿ ಮತ್ತು ಸ್ಥಳೀಯರಲ್ಲಿ ಮತ್ತೆ ಕಳವಳ ಮೂಡಿಸಿದೆ.
