ರಾಜ್ಯ ಸುದ್ದಿ

ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ; ರಾಜ್ಯದ 3 ಹಿರಿಯ IPS ಅಧಿಕಾರಿಗಳ ವರ್ಗಾವಣೆ

Reading…
Follow Us

ವರದಿಗಾರ-ಮೇ.06: ಕರ್ನಾಟಕ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, 3 ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಸಂದೀಪ್‌ ಪಾಟೀಲ್, ಡಾ. ಚೇತನ್ ಸಿಂಗ್ ರಾಥೋರ್, ಅನುಪಮ್ ಅಗರ್ವಾಲ್ ಅವರ ವರ್ಗಾವಣೆಯಾಗಿದೆ.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಪಡೆಯ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಆಗಿದ್ದ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು, ಬೆಳಗಾವಿ ಕೇಂದ್ರ ಕಚೇರಿಯ ಉತ್ತರ ವಲಯದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇವರು ಡಾ. ಚೇತನ್ ಸಿಂಗ್ ರಾಥೋರ್ ಅವರಿಂದ ತೆರವಾದ ಸ್ಥಾನಕ್ಕೆ ನಿಯೋಜನೆಗೊಂಡಿದ್ದಾರೆ.

ಬೆಳಗಾವಿಯ ಉತ್ತರ ವಲಯದ ಐಜಿಪಿಯಾಗಿದ್ದ ಡಾ. ಚೇತನ್ ಸಿಂಗ್ ರಾಥೋರ್ ಅವರನ್ನು, ಸಿಐಡಿ ವಿಭಾಗದ ಆರ್ಥಿಕ ಅಪರಾಧಗಳ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯು ಈ ಮೊದಲು ಖಾಲಿಯಿತ್ತು.

ಹುದ್ದೆಯ ನಿರೀಕ್ಷೆಯಲ್ಲಿದ್ದ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು, ಸಂದೀಪ್ ಪಾಟೀಲ್ ಅವರ ವರ್ಗಾವಣೆಯಿಂದಾಗಿ ಖಾಲಿಯಾದ ಹಾಗೂ ಮೇಲ್ದರ್ಜೆಗೇರಿಸಲಾದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಪಡೆಯ ಐಜಿಪಿಯಾಗಿ ನೇಮಿಸಲಾಗಿದೆ.


ಈ ಆದೇಶದಲ್ಲಿ, ಕೆಎಸ್‌ಆರ್‌ಪಿ ಐಜಿಪಿ ಹುದ್ದೆಯನ್ನು ‘ಪೊಲೀಸ್ ಕಂಪ್ಯೂಟರ್ ವಿಭಾಗದ ಐಜಿಪಿ’ ಹುದ್ದೆಯ ಸ್ಥಾನಮಾನ ಮತ್ತು ಜವಾಬ್ದಾರಿಗಳಿಗೆ ಸಮಾನವಾದ ಹುದ್ದೆ ಎಂದು ಘೋಷಿಸಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್‌) ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಈ ವರ್ಗಾವಣೆ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಜ್ಯ ಸುದ್ದಿ

“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!

ರಾಜ್ಯ ಸುದ್ದಿ

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ

ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

From Across Varadigara

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ