ಮಧ್ಯಪ್ರದೇಶದ ಖಾಂಡ್ವಾ ಕಲೆಕ್ಟರೇಟ್ನಲ್ಲಿ ಮಂಗಳವಾರ (ಆಗಸ್ಟ್ 18) ನಡೆದ ಸಾರ್ವಜನಿಕ ಕುಂದುಕೊರತೆ ಆಲಿಕೆ (ಜನ ಸುನ್ವಾಯಿ) ಸಭೆಯಲ್ಲಿ ವಿನೂತನ ಪ್ರತಿಭಟನೆಯೊಂದು ನಡೆದಿದೆ. ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ನಿಯಂತ್ರಣ ಹಾಗೂ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಪ್ರತಿಪಕ್ಷದ ನಾಯಕ ದೀಪಕ್ ರಾಥೋಡ್ ಅವರೊಂದಿಗೆ ವ್ಯಕ್ತಿಯೊಬ್ಬರು ನಾಯಿಯ ವೇಷ ಧರಿಸಿ ಹಿರಿಯ ಅಧಿಕಾರಿಗಳ ಮುಂದೆ ಹಾಜರಾಗಿದ್ದರು.
ಕಳೆದ ನಾಲ್ಕು ವರ್ಷಗಳಲ್ಲಿ ನಗರಸಭೆಯು ಬೀದಿ ನಾಯಿಗಳ ಸಂತಾನಶಕ್ತಿ ಹರಣಕ್ಕಾಗಿ ಸುಮಾರು ₹40 ಲಕ್ಷ ರೂಪಾಯಿ ವೆಚ್ಚ ಮಾಡಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಆದರೆ, ಇದೇ ಅವಧಿಯಲ್ಲಿ ನಗರದಲ್ಲಿ 13,225 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ನಾಯಿಗಳ ಸಂಖ್ಯೆಯೂ ಹೆಚ್ಚಾಗಿದೆ. ಸಾರ್ವಜನಿಕರ ಹಣ ದುರುಪಯೋಗವಾಗಿದ್ದು, ಈ ಯೋಜನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಕೋರಿ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಅಧಿಕಾರಿಗಳು ಮನವಿಯನ್ನು ಸ್ವೀಕರಿಸಿದ್ದು, ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.
