ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಜೆನ್ ಝೀ’ (Gen Z) ಹಾಗೂ ‘ಜೆನ್ ಆಲ್ಫಾ’ (Gen Alpha) ಯುವ ಪೀಳಿಗೆಗೆ ಸಲಹೆ ನೀಡಿದ್ದಾರೆ. ಚೆನ್ನೈನ ಡಾ. ಎಂ.ಜಿ.ಆರ್. ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ 36ನೇ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯುವ ಸಮುದಾಯವು ಪ್ರಚಲಿತ ಜಾಗತಿಕ ಸವಾಲುಗಳನ್ನು ಎದುರಿಸಲು ನಾಯಕತ್ವ ವಹಿಸಬೇಕು ಮತ್ತು ರಾಷ್ಟ್ರದ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಆದಾಗ್ಯೂ, ಹಣಕಾಸು ಸಚಿವರ ಈ ಪ್ರಕಟಣೆಯು ದೇಶದ ಪ್ರಸ್ತುತ ಸಾಮಾಜಿಕ ಹಾಗೂ ಆರ್ಥಿಕ ವಾತಾವರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. Periodic Labour Force Survey (PLFS) ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, ದೇಶದ ಒಟ್ಟಾರೆ ನಿರುದ್ಯೋಗ ದರದಲ್ಲಿ ಇಳಿಕೆ ಕಂಡುಬಂದಿದ್ದರೂ, ಪದವೀಧರ ಯುವಜನರಲ್ಲಿ ನಿರುದ್ಯೋಗ ಪ್ರಮಾಣವು ಇಂದಿಗೂ ಗಮನಾರ್ಹ ಸವಾಲಾಗಿ ಉಳಿದಿದೆ. ಉನ್ನತ ಶಿಕ್ಷಣ ಪಡೆದ ಯುವಕರಿಗೆ ಅವರ ವಿದ್ಯಾರ್ಹತೆಗೆ ತಕ್ಕಂತೆ ಯೋಗ್ಯ ವೇತನ ನೀಡುವ ಉದ್ಯೋಗಗಳ ಕೊರತೆ ಇದೆ ಎಂಬುದು ವಿವಿಧ ಆರ್ಥಿಕ ವರದಿಗಳಿಂದ ತಿಳಿದುಬರುತ್ತದೆ.
ಇದರೊಂದಿಗೆ, ಶಿಕ್ಷಣಕ್ಕಾಗಿ ಪಡೆಯುವ ಸಾಲದ ಹೊರೆ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ (GST) ಪಾವತಿಯು ಪ್ರತಿಯೊಬ್ಬ ನಾಗರಿಕನ ಮೇಲೂ ನೇರ ಪರಿಣಾಮ ಬೀರುತ್ತಿದೆ. ಯುವ ಸಮುದಾಯವು ಶಿಕ್ಷಣ, ತೆರಿಗೆ ಹಾಗೂ ದೈನಂದಿನ ಜೀವನ ವೆಚ್ಚಗಳ ಮೂಲಕ ಈಗಾಗಲೇ ದೇಶದ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆಯಾದರೂ, ಮೂಲಸೌಕರ್ಯ ಮತ್ತು ಯೋಗ್ಯ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ಅವರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲಿ ಉಂಟಾಗುತ್ತಿರುವ ವಿಳಂಬ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅನಿಶ್ಚಿತತೆಯೂ ಯುವಜನರ ಆತಂಕಕ್ಕೆ ಕಾರಣವಾಗಿದೆ.
‘ದೇಶ ನಿಮಗೇನು ಮಾಡಿದೆ ಎಂದು ಕೇಳುವ ಬದಲು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂಬುದರತ್ತ ಗಮನಹರಿಸಿ’ : ಯುವಜನತೆಗೆ ನಿರ್ಮಲಾ ಸೀತಾರಾಮನ್ ಸಲಹೆ
ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?
‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ
ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರವು ‘ಸ್ಟಾರ್ಟ್ಅಪ್ ಇಂಡಿಯಾ’, ‘ಸ್ಕಿಲ್ ಇಂಡಿಯಾ’ ಹಾಗೂ ‘ಆತ್ಮನಿರ್ಭರ ಭಾರತ’ದಂತಹ ಯೋಜನೆಗಳ ಮೂಲಕ ಯುವ ಸಮುದಾಯದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಯುವಜನರು ಕೇವಲ ಉದ್ಯೋಗ ಅರಸುವವರಾಗದೆ, ಉದ್ಯೋಗ ನೀಡುವವರಾಗಬೇಕು ಎಂಬುದು ಸರ್ಕಾರದ ಪ್ರಮುಖ ಆಶಯವಾಗಿದೆ. ಆದರೆ, ಈ ಯೋಜನೆಗಳ ಅನುಷ್ಠಾನ ಹಾಗೂ ಪ್ರತ್ಯಕ್ಷ ಉದ್ಯೋಗ ಸೃಷ್ಟಿಯ ನಡುವಿನ ಅಂತರದ ಕುರಿತು ಆರ್ಥಿಕ ತಜ್ಞರ ನಡುವೆ ಭಿನ್ನಾಭಿಪ್ರಾಯಗಳು ಮುಂದುವರಿದಿವೆ.
