ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

Reading…
Follow Us

ಸಾರಾಂಶ

'ಹಾರುವ ಬಸ್' ತರಲಿದ್ದೇವೆ ಎಂದ ನಿತಿನ್ ಗಡ್ಕರಿ; ನೆಟ್ಟಿಗರ ವ್ಯಂಗ್ಯ! ಲಕ್ನೋ-ಕಾನ್ಪುರ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ದೇಶದಲ್ಲಿ ರೋಪ್‌ವೇ ಮಾದರಿಯ ವಿದ್ಯುತ್ ಚಾಲಿತ 'ಹಾರುವ ಬಸ್' ಸಾರಿಗೆ ವ್ಯವಸ್ಥೆ ತರುವುದಾಗಿ ಘೋಷಿಸಿದ್ದಾರೆ. ಆದರೆ, ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಹಾಸ್ಯಕ್ಕೆ ಇಡಾಗಿದ್ದು, 'Chidiya udd, bus udd' ಎನ್ನುತ್ತಾ, "ಮೊದಲು ರಸ್ತೆ ಗುಂಡಿ ಮುಚ್ಚಿ, ಆಮೇಲೆ ಬಸ್ ಹಾರಿಸಿ" ಎಂದು ನೆಟ್ಟಿಗರು ರಸ್ತೆಗಳ ಸದ್ಯದ ದುಸ್ಥಿತಿಯನ್ನು ಮುಂದಿಟ್ಟುಕೊಂಡು ವ್ಯಂಗ್ಯವಾಡಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರ ಮತ್ತು ಲಕ್ನೋ ನಡುವಿನ 63 ಕಿಲೋಮೀಟರ್ ಉದ್ದದ ಹೊಸ ಎಕ್ಸ್‌ಪ್ರೆಸ್‌ವೇ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ದೇಶದಲ್ಲಿ “ಆಕಾಶದಲ್ಲಿ ಹಾರಾಡುವ ಬಸ್” ಪರಿಚಯಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ. ಸಾರಿಗೆ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ತಮ್ಮ ಸಚಿವಾಲಯವು ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೋಪ್‌ವೇ, ಕೇಬಲ್ ಕಾರ್ ಹಾಗೂ ವಿದ್ಯುತ್ ಚಾಲಿತ ಸಮೂಹ ಸಾರಿಗೆ ವ್ಯವಸ್ಥೆಗಳ (ಮಾಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ಸ್) ಅನುಷ್ಠಾನದ ಬಗ್ಗೆಯೂ ಗಂಭೀರ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದರು. ಈ ಹಿಂದೆ ಜೂನ್ 2025 ರಲ್ಲಿಯೂ ಅವರು ಬೆಂಗಳೂರು, ಪುಣೆ ಮತ್ತು ದೆಹಲಿ ನಗರಗಳಲ್ಲಿ ಓವರ್‌ಹೆಡ್ ಟ್ರ್ಯಾಕ್‌ಗಳ ಸಹಾಯದಿಂದ ತೂಗುಹಾಕಲ್ಪಟ್ಟ ಸ್ವಯಂಚಾಲಿತ ವಿದ್ಯುತ್ ಪಾಡ್ ಸಾರಿಗೆ ವ್ಯವಸ್ಥೆಯ (ಏರಿಯಲ್ ಪಾಡ್ ಸಿಸ್ಟಮ್) ಸಾಧ್ಯಸಾಧ್ಯತೆಗಳ ಬಗ್ಗೆ ಸಮೀಕ್ಷೆ ನಡೆಯುತ್ತಿರುವುದಾಗಿ ಹೇಳಿದ್ದರು.

ಸಚಿವರ ಈ ಭಾಷಣದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣವಾದ ‘ಎಕ್ಸ್’ ನಲ್ಲಿ ತೀವ್ರ ವ್ಯಂಗ್ಯ ಹಾಗೂ ತಮಾಷೆಯ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ದೇಶದ ರಸ್ತೆಗಳ ದುಸ್ಥಿತಿ ಹಾಗೂ ಗುಂಡಿಗಳನ್ನು ಮುಂದಿಟ್ಟುಕೊಂಡು ನೆಟ್ಟಿಗರು ಸಚಿವರ ಹೇಳಿಕೆಯನ್ನು ಅಣಕಿಸಿದ್ದಾರೆ. ಬಾಲ್ಯದ ಜನಪ್ರಿಯ ಆಟದ ಶೈಲಿಯನ್ನು ಬಳಸಿ ‘Chidiya udd, bus udd’ (ಗಿಳಿ ಹಾರಿತು, ಬಸ್ ಹಾರಿತು) ಎಂದು ನೆಟ್ಟಿಗರು ಮೀಮ್ಸ್ ಹಂಚಿಕೊಳ್ಳುವ ಮೂಲಕ ಕಾಲೆಳೆದಿದ್ದಾರೆ. ತಾಂತ್ರಿಕ ಅಧ್ಯಯನಗಳು ನಡೆಯುತ್ತಿರುವುದನ್ನು ಕೆಲವರು ಗಮನಿಸಿದರೂ, ಬಹುತೇಕರು ಈ ಯೋಜನೆಯ ಪ್ರಾಯೋಗಿಕ ಜಾರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

ರಾಷ್ಟ್ರೀಯ ಸುದ್ದಿ

ಬೆಲೆ ಏರಿಕೆ ಬಿಸಿ: 16 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದ ಚಿಲ್ಲರೆ ಹಣದುಬ್ಬರ

From Across Varadigara

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ಸಾಮಾಜಿಕ ತಾಣ

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ ಜಾಹೀರಾತು; ಮೆಟಾ ಬೇಜವಾಬ್ದಾರಿತನ ಬಯಲಿಗೆಳೆದ ಬಿಬಿಸಿ ತನಿಖಾ ವರದಿ

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಅಂತಾರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಹೊಸ ಆದೇಶ: ಸರ್ಕಾರಿ ನೌಕರರು ಮತ್ತು ಸೇನಾಧಿಕಾರಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ನಿಷೇಧ

ವಿಶೇಷ ಲೇಖನ

ದ್ವೇಷದ ಚಿತೆಗೆ ಮಾನವೀಯತೆಯ ಅಗ್ನಿಸ್ಪರ್ಶ: ಇರ್ಫಾನಾ ಇಕ್ಬಾಲ್ ಮಾನವೀಯ ಪಾಠ | ಕೇರಳದ ರಿಯಲ್ ಸ್ಟೋರಿ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ