ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅದರಲ್ಲಿ ಅಚ್ಚರಿಯೇನಿಲ್ಲ. ಆದರೆ, ರಾಷ್ಟ್ರೀಯ ಮಟ್ಟದಲ್ಲಿ ಅದು ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ‘ತೃತೀಯ ಶಕ್ತಿ’ಯಾಗಿ ಹೊರಹೊಮ್ಮಲು ಸಾಧ್ಯವೇ ಎನ್ನುವುದು ಸದ್ಯಕ್ಕೆ ಅನುಮಾನ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
‘ದಿ ಹಿಂದೂ 360’ ತಮಿಳು ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇಶದ ಸದ್ಯದ ರಾಜಕೀಯ ಸ್ಥಿತ್ಯಂತರ ಹಾಗೂ ಯುವಜನರ ಅಸಮಾಧಾನದ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಿಜೆಪಿ ಕೈಗೆತ್ತಿಕೊಂಡಿರುವ ‘ಸ್ಕೂಲ್ ಠೀಕ್ ಕರೋ’ (ಸರ್ಕಾರಿ ಶಾಲೆಗಳನ್ನು ಸುಧಾರಿಸಿ) ಅಭಿಯಾನವು ದೇಶದ ಆಡಳಿತಾರೂಢರ ಗಮನ ಸೆಳೆದಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಇಂತಹ ಪ್ರಾದೇಶಿಕ ಚಳವಳಿಗಳು ಮತ್ತು ಹೊಸ ಪಕ್ಷಗಳು ಹೊರಹೊಮ್ಮುವುದಕ್ಕೆ ಇತಿಹಾಸದಲ್ಲಿ ಹಲವು ಉದಾಹರಣೆಗಳಿವೆ. 1985ರಲ್ಲಿ ಅಸ್ಸಾಂನಲ್ಲಿ ‘ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್’ (ಎಎಸ್ಯು) ಚಳವಳಿಯ ಮೂಲಕ ‘ಅಸ್ಸಾಂ ಗಣ ಪರಿಷತ್’ ಅಧಿಕಾರಕ್ಕೆ ಬಂದಿದ್ದನ್ನು ಹಾಗೂ ಇತ್ತೀಚೆಗೆ ನೇಪಾಳದಲ್ಲಿ ಯುವಜನರ (Gen Z) ಪ್ರತಿಭಟನೆಯ ಫಲವಾಗಿ ಬಲೇಂದ್ರ ಶಾ ಪ್ರಧಾನಿಯಾದ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ.
ದೇಶದಲ್ಲಿ ಸದ್ಯ ಎದ್ದಿರುವ ಯುವಜನರ ಆಕ್ರೋಶಕ್ಕೆ ಕೇವಲ ಪರೀಕ್ಷಾ ಅಕ್ರಮಗಳು ಮಾತ್ರ ಕಾರಣವಲ್ಲ ಎಂದಿರುವ ಚಿದಂಬರಂ, ನಿರುದ್ಯೋಗ ಮತ್ತು ಆದಾಯದ ಕೊರತೆಯೇ ಇದರ ಮೂಲ ಬೇರು ಎಂದು ಪ್ರತಿಪಾದಿಸಿದ್ದಾರೆ. ಹಿಂದೆ ಪದವಿ ಪಡೆದರೆ ಗೌರವಾನ್ವಿತ ಸರ್ಕಾರಿ ಉದ್ಯೋಗ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಇಂದು ಇಂಜಿನಿಯರಿಂಗ್, ವೈದ್ಯಕೀಯ ಮಾತ್ರವಲ್ಲದೆ ಐಐಟಿ ಮತ್ತು ಐಐಎಂಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಹೊರಬಂದ ಪದವೀಧರರಿಗೂ ಉದ್ಯೋಗ ಭದ್ರತೆ ಇಲ್ಲದಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್ನಲ್ಲಿ ವಿನೂತನ ಪ್ರತಿಭಟನೆ
ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ
ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ
CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್ ಸಂಗ್ರಹ!
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!
ಇದೇ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸುವ ನೀಟ್ (NEET-UG) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅತ್ಯಲ್ಪ ಖಾಯಂ ಸಿಬ್ಬಂದಿಯನ್ನು ಹೊಂದಿರುವ ಸಂಸ್ಥೆಯೊಂದು ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಾಗ ಇಂತಹ ಅಕ್ರಮಗಳು ನಡೆಯುವುದು ನಿರೀಕ್ಷಿತವೇ ಆಗಿತ್ತು ಎಂದು ಟೀಕಿಸಿದ್ದಾರೆ.
ತಮಿಳುನಾಡಿನ ರಾಜಕೀಯ ಸನ್ನಿವೇಶದ ಕುರಿತು ಮಾತನಾಡಿದ ಚಿದಂಬರಂ, ವಿಧಾನಸಭೆ ಚುನಾವಣೆಯ ಬಳಿಕ ಆಡಳಿತಾರೂಢ ಡಿಎಂಕೆ ಪಕ್ಷವು ಬಿಜೆಪಿಯತ್ತ ವಾಲುವ ಯಾವುದೇ ಸಾಧ್ಯತೆಗಳಿಲ್ಲ. ಒಂದು ವೇಳೆ ಡಿಎಂಕೆ ಅಂತಹ ನಿರ್ಧಾರ ತಳೆದರೆ ಅದು ತನಗೆ ತಾನೇ ಮಾಡಿಕೊಳ್ಳುವ ದೊಡ್ಡ ಆಘಾತವಾಗಲಿದೆ ಎಂದಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ವಿಷಯದಲ್ಲೂ ಡಿಎಂಕೆ ರಾಜ್ಯದ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಳೆದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
