ರಾಷ್ಟ್ರೀಯ ಸುದ್ದಿ

ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ; ವಿಜಯ್ ಅಧ್ಯಕ್ಷತೆಯಲ್ಲಿ ಟಿವಿಕೆ ಶಾಸಕರ ಸಭೆ

Reading…
Follow Us

ವರದಿಗಾರ-ಮೇ.05: ಟಿವಿಕೆ ಮುಖ್ಯಸ್ಥ, ಖ್ಯಾತ ನಟ ದಳಪತಿ ವಿಜಯ್ ಮಂಗಳವಾರ ಪಕ್ಷದ ನೂತನ ಶಾಸಕರ ಸಭೆಯನ್ನು ನಡೆಸಿದ್ದು,ಇದಕ್ಕೂ ಮುನ್ನ ಪಕ್ಷದ ಸೈದ್ಧಾಂತಿಕ ನಾಯಕರಿಗೆ ಗೌರವ ನಮನಗಳನ್ನು ಸಲ್ಲಿಸಿದರು. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು,108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ ಏಕೈಕ ದೊಡ್ಡ ಪಕ್ಷವಾಗಿ ಮೂಡಿಬಂದಿದ್ದು ರಾಷ್ಟ್ರದಾದ್ಯಂತ ರಾಜಕೀಯ ಕ್ರಾಂತಿ ನಿರ್ಮಿಸಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ

ಟಿವಿಕೆ ಕೇಂದ್ರ ಕಚೇರಿಗೆ ಆಗಮಿಸಿದ ವಿಜಯ್ ಅವರಂತೆ ಮೊದಲ ಬಾರಿಗೆ ಆಯ್ಕೆಯಾದ ಹಲವಾರು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತವನ್ನು ನೀಡಿ ಅಭಿನಂದಿಸಿದ್ದಾರೆ.

ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತು ವಿಧಾನಸಭೆಯಲ್ಲಿ ಶಾಸಕರ ನಡೆನುಡಿಗಳ ಕುರಿತು ಚರ್ಚೆಗಳು ನಡೆದವು ಎಂದು ಶಾಸಕರೋರ್ವರು ಮಾಹಿತಿ ನೀಡಿದ್ದಾರೆ. ಸಭೆಗೂ ಮುನ್ನ ವಿಜಯ್ ಪಕ್ಷದ ಸೈದ್ಧಾಂತಿಕ ನಾಯಕರಾದ ಪೆರಿಯಾರ್ ಇ.ವಿ.ರಾಮಸ್ವಾಮಿ,ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ,ವೇಲು ನಾಚಿಯಾರ್ ಮತ್ತು ಅಂಜಲೈ ಅಮ್ಮಾಳ್ ಅವರ ಪ್ರತಿಮೆಗಳಿಗೆ ಪುಷ್ಪ ನಮನಗಳನ್ನು ಸಲ್ಲಿಸಿ ಗೌರವ ಸಲ್ಲಿಸಿದ್ದಾರೆ. ಸಭೆಯಲ್ಲಿ ಶಾಸಕರು ತಮ್ಮ ಗೆಲುವಿನ ಪ್ರಮಾಣಪತ್ರಗಳನ್ನು ವಿಜಯ್ ಅವರಿಗೆ ಸಲ್ಲಿಸುವ ಜೊತೆಗೆ ಸರಕಾರ ರಚನೆಗೆ ಕಾರ್ಯತಂತ್ರಗಳನ್ನು ಚರ್ಚಿಸಿದರು ಎಂದು ಟಿವಿಕೆ ನಾಯಕ ನಂಜಿಲ್ ಸಂಪತ್ ಹೇಳಿದ್ದಾರೆ

ಸರಕಾರ ನಡೆಸಲು ಟಿವಿಕೆಗೆ 10 ಸ್ಥಾನಗಳ ಕೊರತೆಯಿದ್ದು, ಸರಳ ಬಹುಮತವನ್ನು ಹೇಗೆ ಪಡೆಯಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಸಂಪತ್, ‘ಅದನ್ನು ಪಕ್ಷದ ನಾಯಕರು ಸಾಧಿಸಲಿದ್ದಾರೆ. ಸಕಾರಾತ್ಮಕ ಫಲಿತಾಂಶದ ಬಗ್ಗೆ ನನಗೆ ವಿಶ್ವಾಸವಿದೆ. ನೀವು ಶೀಘ್ರವೇ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು ’ ಎಂದು ಉತ್ತರಿಸಿದರು.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ರಾಜಭವನದಲ್ಲಿ ವಿಜಯ್ ಶಿಷ್ಟಾಚಾರದ ನಡೆ: ರಾಜ್ಯಪಾಲರ ಭೇಟಿಯ ಹಿಂದಿನ ಕುತೂಹಲಕಾರಿ ಸಂಗತಿಗಳು ಬಹಿರಂಗ !

ರಾಷ್ಟ್ರೀಯ ಸುದ್ದಿ

ವಿಜಯ್ ಸಂಪುಟದ ‘ನವ ನಾಯಕರು’: ಯುವ ನಟಿ, ಮಾಜಿ IRS ಅಧಿಕಾರಿ ಸೇರಿ 9 ಮಂದಿ ಸಚಿವರಾಗಿ ಪದಗ್ರಹಣ

ರಾಷ್ಟ್ರೀಯ ಸುದ್ದಿ

ತಮಿಳುನಾಡು ರಾಜಕೀಯದಲ್ಲಿ ಹೊಸ ಯುಗ: ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ

ರಾಷ್ಟ್ರೀಯ ಸುದ್ದಿ

ತಮಿಳುನಾಡು ರಾಜಕೀಯದಲ್ಲಿ ಬಿರುಕು. ಕಾಂಗ್ರೆಸ್‌ನಿಂದ ದೂರ ಸರಿಯುತ್ತಿರುವ ಡಿಎಂಕೆ

ರಾಷ್ಟ್ರೀಯ ಸುದ್ದಿ

ನಟ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಶನಿವಾರ ಅಧಿಕಾರ ಸ್ವೀಕಾರ

From Across Varadigara

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು