ರಾಷ್ಟ್ರೀಯ ಸುದ್ದಿ

ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ; ವಿಜಯ್ ಅಧ್ಯಕ್ಷತೆಯಲ್ಲಿ ಟಿವಿಕೆ ಶಾಸಕರ ಸಭೆ

Reading…
Follow Us

ವರದಿಗಾರ-ಮೇ.05: ಟಿವಿಕೆ ಮುಖ್ಯಸ್ಥ, ಖ್ಯಾತ ನಟ ದಳಪತಿ ವಿಜಯ್ ಮಂಗಳವಾರ ಪಕ್ಷದ ನೂತನ ಶಾಸಕರ ಸಭೆಯನ್ನು ನಡೆಸಿದ್ದು,ಇದಕ್ಕೂ ಮುನ್ನ ಪಕ್ಷದ ಸೈದ್ಧಾಂತಿಕ ನಾಯಕರಿಗೆ ಗೌರವ ನಮನಗಳನ್ನು ಸಲ್ಲಿಸಿದರು. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು,108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ ಏಕೈಕ ದೊಡ್ಡ ಪಕ್ಷವಾಗಿ ಮೂಡಿಬಂದಿದ್ದು ರಾಷ್ಟ್ರದಾದ್ಯಂತ ರಾಜಕೀಯ ಕ್ರಾಂತಿ ನಿರ್ಮಿಸಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ

ಟಿವಿಕೆ ಕೇಂದ್ರ ಕಚೇರಿಗೆ ಆಗಮಿಸಿದ ವಿಜಯ್ ಅವರಂತೆ ಮೊದಲ ಬಾರಿಗೆ ಆಯ್ಕೆಯಾದ ಹಲವಾರು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ಭರ್ಜರಿ ಸ್ವಾಗತವನ್ನು ನೀಡಿ ಅಭಿನಂದಿಸಿದ್ದಾರೆ.

ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತು ವಿಧಾನಸಭೆಯಲ್ಲಿ ಶಾಸಕರ ನಡೆನುಡಿಗಳ ಕುರಿತು ಚರ್ಚೆಗಳು ನಡೆದವು ಎಂದು ಶಾಸಕರೋರ್ವರು ಮಾಹಿತಿ ನೀಡಿದ್ದಾರೆ. ಸಭೆಗೂ ಮುನ್ನ ವಿಜಯ್ ಪಕ್ಷದ ಸೈದ್ಧಾಂತಿಕ ನಾಯಕರಾದ ಪೆರಿಯಾರ್ ಇ.ವಿ.ರಾಮಸ್ವಾಮಿ,ಬಿ.ಆರ್.ಅಂಬೇಡ್ಕರ್, ಕೆ.ಕಾಮರಾಜ,ವೇಲು ನಾಚಿಯಾರ್ ಮತ್ತು ಅಂಜಲೈ ಅಮ್ಮಾಳ್ ಅವರ ಪ್ರತಿಮೆಗಳಿಗೆ ಪುಷ್ಪ ನಮನಗಳನ್ನು ಸಲ್ಲಿಸಿ ಗೌರವ ಸಲ್ಲಿಸಿದ್ದಾರೆ. ಸಭೆಯಲ್ಲಿ ಶಾಸಕರು ತಮ್ಮ ಗೆಲುವಿನ ಪ್ರಮಾಣಪತ್ರಗಳನ್ನು ವಿಜಯ್ ಅವರಿಗೆ ಸಲ್ಲಿಸುವ ಜೊತೆಗೆ ಸರಕಾರ ರಚನೆಗೆ ಕಾರ್ಯತಂತ್ರಗಳನ್ನು ಚರ್ಚಿಸಿದರು ಎಂದು ಟಿವಿಕೆ ನಾಯಕ ನಂಜಿಲ್ ಸಂಪತ್ ಹೇಳಿದ್ದಾರೆ

ಸರಕಾರ ನಡೆಸಲು ಟಿವಿಕೆಗೆ 10 ಸ್ಥಾನಗಳ ಕೊರತೆಯಿದ್ದು, ಸರಳ ಬಹುಮತವನ್ನು ಹೇಗೆ ಪಡೆಯಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಸಂಪತ್, ‘ಅದನ್ನು ಪಕ್ಷದ ನಾಯಕರು ಸಾಧಿಸಲಿದ್ದಾರೆ. ಸಕಾರಾತ್ಮಕ ಫಲಿತಾಂಶದ ಬಗ್ಗೆ ನನಗೆ ವಿಶ್ವಾಸವಿದೆ. ನೀವು ಶೀಘ್ರವೇ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು ’ ಎಂದು ಉತ್ತರಿಸಿದರು.

How does this story make you feel?
Share:
ಹನಿ ಸುದ್ದಿ ⚡ NEW
News Cards · Swipe to read
See All →

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us

More Stories

ರಾಷ್ಟ್ರೀಯ ಸುದ್ದಿ

ರಾಜಭವನದಲ್ಲಿ ವಿಜಯ್ ಶಿಷ್ಟಾಚಾರದ ನಡೆ: ರಾಜ್ಯಪಾಲರ ಭೇಟಿಯ ಹಿಂದಿನ ಕುತೂಹಲಕಾರಿ ಸಂಗತಿಗಳು ಬಹಿರಂಗ !

ರಾಷ್ಟ್ರೀಯ ಸುದ್ದಿ

ವಿಜಯ್ ಸಂಪುಟದ ‘ನವ ನಾಯಕರು’: ಯುವ ನಟಿ, ಮಾಜಿ IRS ಅಧಿಕಾರಿ ಸೇರಿ 9 ಮಂದಿ ಸಚಿವರಾಗಿ ಪದಗ್ರಹಣ

ರಾಷ್ಟ್ರೀಯ ಸುದ್ದಿ

ತಮಿಳುನಾಡು ರಾಜಕೀಯದಲ್ಲಿ ಹೊಸ ಯುಗ: ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ

ರಾಷ್ಟ್ರೀಯ ಸುದ್ದಿ

ತಮಿಳುನಾಡು ರಾಜಕೀಯದಲ್ಲಿ ಬಿರುಕು. ಕಾಂಗ್ರೆಸ್‌ನಿಂದ ದೂರ ಸರಿಯುತ್ತಿರುವ ಡಿಎಂಕೆ

ರಾಷ್ಟ್ರೀಯ ಸುದ್ದಿ

ನಟ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಶನಿವಾರ ಅಧಿಕಾರ ಸ್ವೀಕಾರ

From Across Varadigara

ರಾಷ್ಟ್ರೀಯ ಸುದ್ದಿ

ವಾಣಿಜ್ಯ ಸಿಲಿಂಡರ್ ಬೆಲೆ ಮತ್ತಷ್ಟು ದುಬಾರಿ: ಐದೇ ತಿಂಗಳಲ್ಲಿ ದುಪ್ಪಟ್ಟಾದ ದರ!

ರಾಷ್ಟ್ರೀಯ ಸುದ್ದಿ

ಅಧಿಕಾರ ಹಸ್ತಾಂತರದ ಬೆನ್ನಲ್ಲೇ ಸಿದ್ದರಾಮಯ್ಯ ಕಾರ್ಯವೈಖರಿಗೆ ಸಂಜಯ್ ರಾವುತ್ ಶ್ಲಾಘನೆ: “ಇಂತಹ ನಾಯಕತ್ವ ಭಾರತೀಯ ರಾಜಕಾರಣದಲ್ಲಿ ಅಪರೂಪ, ಅವರು ನಿಜವಾದ ಜನನಾಯಕ”

ಕಾಣಿಸದ್ದು - ಕೇಳಿಸದ್ದು

ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ

ಸಾಮಾಜಿಕ ತಾಣ

ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?

ರಾಜ್ಯ ಸುದ್ದಿ

“ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು” : ಸಿದ್ದರಾಮಯ್ಯ

ಕಾಣಿಸದ್ದು - ಕೇಳಿಸದ್ದು

ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್

ರಾಷ್ಟ್ರೀಯ ಸುದ್ದಿ

ಬೆಲೆ ಏರಿಕೆ ಬಿಸಿ: 16 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದ ಚಿಲ್ಲರೆ ಹಣದುಬ್ಬರ

ರಾಷ್ಟ್ರೀಯ ಸುದ್ದಿ

ಕೋಮು ಸೌಹಾರ್ದತೆಯ ಬೆಲೆ: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ‘ಮೊಹಮ್ಮದ್ ದೀಪಕ್’ ಜಿಮ್ ಮುಚ್ಚುವ ಭೀತಿಯಲ್ಲಿ!

ಕಾಣಿಸದ್ದು - ಕೇಳಿಸದ್ದು

‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಆರೋಪ!

ರಾಷ್ಟ್ರೀಯ ಸುದ್ದಿ

“ನಿಮ್ಮದೇ ಹೋಟೆಲ್‌ನಲ್ಲಿ ಮಟನ್ ಮಸಾಲಾ ಮಾರುವುದು ನೆನಪಿಲ್ಲವೇ?” : ‘ವರ್ಚುವಲ್ ಬಕ್ರೀದ್’ ಸಲಹೆ ನೀಡಿದ್ದ ಬಿಜೆಪಿಯ ನಿತೇಶ್ ರಾಣೆಗೆ ಸ್ವಪಕ್ಷ  ನಾಯಕನ ಬಹಿರಂಗ ಸವಾಲು

ಅಂತಾರಾಷ್ಟ್ರೀಯ

ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!

ಸಾಮಾಜಿಕ ತಾಣ

CBSE ಉತ್ತರ ಪತ್ರಿಕೆ ಎಡವಟ್ಟು : ನ್ಯಾಯ ಕೇಳಿದ ದೆಹಲಿ ವಿದ್ಯಾರ್ಥಿಗೆ ‘ಪಾಕಿಸ್ತಾನಿ’ ಪಟ್ಟ ಕಟ್ಟಿದ ಟ್ರೋಲಿಗರು!

ರಾಷ್ಟ್ರೀಯ ಸುದ್ದಿ

ಮುಂಬೈ: ಬಕ್ರೀದ್ ಆಡುಗಳಿಗೆ ಪ್ರತಿಯಾಗಿ ಹಂದಿ ತಂದ ಹಿಂದುತ್ವ ಸಂಘಟನೆಗಳು; ಸಾಮಾಜಿಕ ಕಾಳಜಿಯ ಹೆಸರಲ್ಲಿ ಕೋಮು ಪ್ರಚೋದನೆ?

ರಾಷ್ಟ್ರೀಯ ಸುದ್ದಿ

“ವೋಟ್ ಚೋರಿ, ಸರ್ಕಾರ ಚೋರಿ ನಂತರ ಇದೀಗ ಸೀಟ್ ಚೋರಿ; BJP – EC ಜುಗಲ್‌ಬಂದಿ” – ರಾಹುಲ್ ಗಾಂಧಿ

ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

ಸಾಮಾಜಿಕ ತಾಣ

AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!

ರಾಜ್ಯ ಸುದ್ದಿ

“ಅಲ್ಲಿ ಇನ್ನು ಮುಂದೆ ಕೋಮುಗಲಭೆ ನಡೆಯಬಾರದಷ್ಟೇ”; ಜಿಲ್ಲಾಧಿಕಾರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿದ್ದ ಸೂಚನೆಯನ್ನು ಹಂಚಿಕೊಂಡ ಸಸಿಕಾಂತ್ ಸೆಂಥಿಲ್

ರಾಷ್ಟ್ರೀಯ ಸುದ್ದಿ

ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ರಾಷ್ಟ್ರೀಯ ಸುದ್ದಿ

ಪಂಜಾಬ್‌ ಸ್ಥಳೀಯ ಸಂಸ್ಥೆ ಚುನಾವಣೆ: ‘ಆಪ್’ ಭರ್ಜರಿ ಜಯಭೇರಿ; ‘ವೋಟ್ ಚೋರಿ’ ಆರೋಪ ಹೊರಿಸಿದ ಬಿಜೆಪಿ!

ಕಾಣಿಸದ್ದು - ಕೇಳಿಸದ್ದು

ಅಂತರ್ಜಾತಿ ಗೆಳೆತನದ ಹಿನ್ನೆಲೆ: ದಲಿತ ವಿದ್ಯಾರ್ಥಿಯ ಕ್ರೂರ ಕೊಲೆ, ಇಬ್ಬರ ಬಂಧನ