ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

Reading…
Follow Us

ಸಾರಾಂಶ

ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರ ನಿವಾಸಿ ಮಂಗಿಲಾಲ್ ಮೇಘವಾಲ್ (50) ಎಂಬ ರೈತ, ಸೈಟ್ ಮಾರಾಟದಿಂದ ಬಂದಿದ್ದ ₹5 ಲಕ್ಷ ನಗದನ್ನು ಕಳ್ಳತನ ಹಾಗೂ ಕುಟುಂಬದ ಖರ್ಚಿನಿಂದ ರಕ್ಷಿಸಲು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ತಮ್ಮ ಹೊಲದಲ್ಲೇ ಹೂತಿಟ್ಟಿದ್ದರು. ಆದರೆ ಜಾಗ ಮರೆತುಹೋಗಿದ್ದರಿಂದ, ಸುಮಾರು ಒಂದು ವರ್ಷದ ಬಳಿಕ ಕೃಷಿ ಕೆಲಸದ ವೇಳೆ ಈ ಹಣ ಪತ್ತೆಯಾಗಿದೆ. ಅಷ್ಟರಲ್ಲಾಗಲೇ ಗೆದ್ದಲುಗಳು ಬಹುತೇಕ ನೋಟುಗಳನ್ನು ತಿಂದು ನಾಶಪಡಿಸಿದ್ದು, ಉಳಿದ ತುಂಡಾದ ₹500 ನೋಟುಗಳನ್ನು ಬದಲಾಯಿಸಿಕೊಡಲು ಎಸ್‌ಬಿಐ ಬ್ಯಾಂಕ್ ನಿರಾಕರಿಸಿದೆ.

ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರ ನಿವಾಸಿ ಮಂಗಿಲಾಲ್ ಮೇಘವಾಲ್ (50) ಎಂಬ ರೈತ, ಸೈಟ್ ಮಾರಾಟದಿಂದ ಬಂದಿದ್ದ ₹5 ಲಕ್ಷ ನಗದನ್ನು ಕಳ್ಳತನ ಹಾಗೂ ಕುಟುಂಬದ ಖರ್ಚಿನಿಂದ ರಕ್ಷಿಸಲು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ತಮ್ಮ ಹೊಲದಲ್ಲೇ ಹೂತಿಟ್ಟಿದ್ದರು. ಆದರೆ, ಮರೆವಿನ ಕಾರಣದಿಂದ ಹಣ ಹೂತಿಟ್ಟ ಜಾಗ ಮರೆತುಹೋಗಿದ್ದು, ಸುಮಾರು ಒಂದು ವರ್ಷದ ಬಳಿಕ ಜಮೀನು ಹದಗೊಳಿಸುವಾಗ ಮತ್ತು ಬೇಲಿ ದುರಸ್ತಿ ಮಾಡುವ ಸಂದರ್ಭದಲ್ಲಿ ಈ ಹಣದ ಬ್ಯಾಗ್ ಮೇಲಕ್ಕೆ ಬಂದಿದೆ. 

ಆದರೆ, ಅಷ್ಟರಲ್ಲಾಗಲೇ ಗೆದ್ದಲುಗಳು ಬಹುತೇಕ ನೋಟುಗಳನ್ನು ತಿಂದು ಸಂಪೂರ್ಣವಾಗಿ ನಾಶಪಡಿಸಿದ್ದವು. ಹಾನಿಗೊಳಗಾದ ₹500 ನೋಟುಗಳ ತುಂಡುಗಳನ್ನು ಹಿಡಿದುಕೊಂಡು ರೈತನ ಕುಟುಂಬವು ಸ್ಥಳೀಯ ಎಸ್‌ಬಿಐ (SBI) ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿದರೂ, ನೋಟುಗಳ ದುಸ್ಥಿತಿಯನ್ನು ನೋಡಿ ಬದಲಾಯಿಸಿಕೊಡಲು ಬ್ಯಾಂಕ್ ನಿರಾಕರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋ ಒಂದರಲ್ಲಿ ರೈತ ನಾಶವಾದ ನೋಟುಗಳನ್ನು ಹಿಡಿದು ಕಂಗಾಲಾಗಿರುವುದು ಕಂಡುಬಂದಿದೆ.

ವೀಡಿಯೊ ವೀಕ್ಷಿಸಿ:

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

From Across Varadigara

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ