ವರದಿಗಾರ-ಮೇ.14: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿ.ಡಿ.ಸತೀಶನ್ ರನ್ನು ಹಾಡಿ ಹೊಗಳಿ ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೆಳಗಿನಂತೆ ಅಭಿನಂದನೆ ಸಲ್ಲಿಸಿದ್ದಾರೆ
“ಕೇರಳಂ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕ ಹಾಗೂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿ.ಡಿ.ಸತೀಶನ್ ಅವರಿಗೆ ಅಭಿನಂದನೆಗಳು.
ವಿದ್ಯಾರ್ಥಿಯಾಗಿರುವಾಗಲೇ ಎನ್ಎಸ್ಯುಐ ಮೂಲಕ ರಾಜಕೀಯ ರಂಗ ಪ್ರವೇಶಿಸಿ, ಬಳಿಕ 6 ಬಾರಿ ಶಾಸಕರಾಗಿ, 2021 ರಿಂದ 2026ರ ವರೆಗೆ ವಿರೋಧ ಪಕ್ಷದ ನಾಯಕರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದ ಸತೀಶನ್ ಅವರ ರಾಜಕೀಯ ಅನುಭವ, ಸಂಘಟನಾಶೀಲತೆ, ಜನಸಾಮಾನ್ಯರ ಜೊತೆಗಿನ ಒಡನಾಟವು ಅವರನ್ನು ಇಲ್ಲಿಯವರೆಗೆ ಕೈಹಿಡಿದು ನಡೆಸಿದೆ ಎಂದು ಭಾವಿಸಿದ್ದೇನೆ.
ಸತೀಶನ್ ಅವರ ನಾಯಕತ್ವದಲ್ಲಿ ಕೇರಳಂನಲ್ಲಿ ನಮ್ಮ ಪಕ್ಷವು ಜಾತ್ಯತೀತ, ಸಾಮಾಜಿಕ ನ್ಯಾಯದ ಆಶಯಗಳಡಿ ಸರ್ವರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಆಡಳಿತ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ. ಒಕ್ಕೂಟ ತತ್ವದಡಿ ಎರಡೂ ರಾಜ್ಯಗಳ ಮತ್ತು ರಾಷ್ಟ್ರದ ಹಿತಕ್ಕಾಗಿ ಜೊತೆಸೇರಿ ಕೆಲಸ ಮಾಡೋಣ.
ಕೇರಳಂನ ಜನತೆಗೆ ಹಾಗೂ ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು” ಎಂದು ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
