ರಾಜ್ಯ ಸುದ್ದಿ

ಶೃಂಗೇರಿ; ಬಿಜೆಪಿಗರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

Reading…
Follow Us

ವರದಿಗಾರ-ಮೇ.05: ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಮತಗಳು ಲಭಿಸಿವೆ. ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿದ್ದಾರೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೃಂಗೇರಿ ವಿಧಾನಸಭಾ ಕ್ಷೇತ್ರ ಚುನಾವಣೆ, ಮರುಮತದಾನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ಮರು ಮತ ಎಣಿಕೆಯಲ್ಲಿ ಕ್ಷೇತ್ರದಲ್ಲಿ ಮೂರು ವರ್ಷದಿಂದ ಶಾಸಕರಾಗಿದ್ದ ಕಾಂಗ್ರೆಸ್ ರಾಜೇಗೌಡರ ಸ್ಥಾನ ಅಸಿಂಧುಗೊಂಡಿದೆ. ಇದರಲ್ಲಿ ಬಿಜೆಪಿಗರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ನ ರಾಜೇಗೌಡ ಕಳೆದ ಚುನಾವಣೆಯಲ್ಲಿ ಶೃಂಗೇರಿಯಲ್ಲಿ 201 ಮತಗಳ ಅಂತರದಲ್ಲಿ ಗೆದ್ದಿದ್ದರು. ಅವರಿಗೆ 59,171 ಮತಗಳು ಬಂದಿದ್ದವು. ಎದುರಾಳಿ ಬಿಜೆಪಿಯ ಜೀವರಾಜ್ ಅವರಿಗೆ 58,970 ಮತಗಳು ಬಂದಿದ್ದವು. ಇವಿಎಂನಲ್ಲಿ ರಾಜೇಗೌಡರು 58,602 ಮತ ಮತ್ತು ಅಂಚೆಯಲ್ಲಿ 569 ಮತಗಳನ್ನು ಪಡೆದಿದ್ದಾರೆ. ಇನ್ನೂ ಜೀವರಾಜ್ ಅವರು 58,278 ಮತಗಳ ಜೊತೆಗೆ ಅಂಚೆ ಮೂಲಕ 692 ಮತ ಗಳಿಸಿದ್ದರು. ಇವೆಲ್ಲವೂ ಅರ್ಹ ಮತಗಳೆಂದು ಚುನಾವಣಾಧಿಕಾರಿಗಳು, ಏಜೆಂಟ್‌ಗಳು ಸಹಿ ಮಾಡಿ ಫಲಿತಾಂಶ ಘೋಷಿಸಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವಾಗಿತ್ತು ಎಂಬುದನ್ನು ಹೈಲೈಟ್ ಮಾಡಿದರು.

ಫಲಿತಾಂಶ ಬಂದ ಬಳಿಕ ಜೀವರಾಜ್ ಅವರು ಮತದಾನದಲ್ಲಿ ಅಕ್ರಮ ಆಗಿದೆ ಎಂದು ರಾಜ್ಯ ಹೈಕೋರ್ಟ್ ನಲ್ಲಿ ಮರು ಎಣಿಕೆಗೆ ದಾವೆ ಹೂಡಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ಇದೇ ವರ್ಷ ಮಾರ್ಚ್ 6ರಂದು ಮರು ಎಣಿಕೆಗೆ ನಿರ್ದೇಶಿಸಿತು. ಮರು ಎಣಿಕೆಯಲ್ಲಿ ರಾಜೇಗೌಡರಿಗೆ 314 ಮತಗಳು ಮಾತ್ರ ಅರ್ಹವಾಗುತ್ತವೆ. 255 ಮತಗಳು ಅನರ್ಹ ಎಂದು ಆಗುತ್ತದೆ ಎಂದು ಅವರು ಹೇಳಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಷ್ಟ್ರೀಯ ಸುದ್ದಿ

“ವೋಟ್ ಚೋರಿ, ಸರ್ಕಾರ ಚೋರಿ ನಂತರ ಇದೀಗ ಸೀಟ್ ಚೋರಿ; BJP – EC ಜುಗಲ್‌ಬಂದಿ” – ರಾಹುಲ್ ಗಾಂಧಿ

ಸಾಮಾಜಿಕ ತಾಣ

AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!

From Across Varadigara

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ