ರಾಷ್ಟ್ರೀಯ ಸುದ್ದಿ

ಯುಎಪಿಎ ಪ್ರಕರಣಗಳಲ್ಲೂ ಜಾಮೀನು ತತ್ವ ಅನ್ವಯ: ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ್ದ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ

Reading…
Follow Us

ಸಾರಾಂಶ

ಯುಎಪಿಎ ಪ್ರಕರಣಗಳಲ್ಲಿ ಸುದೀರ್ಘ ವಿಚಾರಣೆ ವಿಳಂಬದ ನಡುವೆಯೂ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಯುಎಪಿಎ ಅಡಿಯಲ್ಲೂ ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು ಅನ್ವಯವಾಗಲಿದ್ದು, 'ಜಾಮೀನು ನಿಯಮ, ಜೈಲು ಅಪವಾದ' ಎಂಬ ತತ್ವವನ್ನು ಗಾಳಿಗೆ ತೂರುವಂತಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯ ಪ್ರಕರಣಗಳಲ್ಲಿ ಸುದೀರ್ಘ ಜೈಲುವಾಸದ ಸಂದರ್ಭದಲ್ಲೂ ಜಾಮೀನು ನಿರಾಕರಿಸುವ ಧೋರಣೆಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. 2020 ರ ದೆಹಲಿ ಗಲಭೆ ಸಂಚಿನ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಸುದೀರ್ಘ ಬಂಧನದ ಹೊರಾಗಿಯೂ ಅವರಿಗೆ ಜಾಮೀನು ನಿರಾಕರಿಸಿದ್ದ ತನ್ನದೇ ಜನವರಿ 2026 ರ ‘ಗುಲ್ಫಿಶಾ ಫಾತಿಮಾ’ ತೀರ್ಪಿನ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಸೋಮವಾರ ಗಂಭೀರವಾಗಿ ಪ್ರಶ್ನಿಸಿದೆ. ವಿಚಾರಣೆ ವಿಳಂಬವಾಗುವ ಸಂದರ್ಭಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯದ ರಕ್ಷಣೆಗಾಗಿ ಯುಎಪಿಎ ಅಡಿಯಲ್ಲೂ ಜಾಮೀನು ನೀಡಬಹುದು ಎಂಬ ಉನ್ನತ ಪೀಠದ ಆದೇಶವನ್ನು ಆ ತೀರ್ಪು ಸರಿಯಾಗಿ ಪಾಲಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ನಿವಾಸಿ ಸೈಯದ್ ಇಫ್ತಿಕಾರ್ ಅಂದ್ರಾಬಿ ಎಂಬುವವರಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಈ ಮಹತ್ವದ ವೀಕ್ಷಣೆ ಮಾಡಿದೆ. ಜಮ್ಮು ಕಾಶ್ಮೀರದ ಎನ್‌ಐಎ ನಾರ್ಕೋ-ಭಯೋತ್ಪಾದನೆ ಪ್ರಕರಣದಲ್ಲಿ ಅಂದ್ರಾಬಿ ಜೂನ್ 2020 ರಿಂದ ಅಂದರೆ ಸುಮಾರು 6 ವರ್ಷಗಳಿಂದ ಜೈಲಿನಲ್ಲಿದ್ದರು.

ಜನವರಿ 5, 2026 ರಂದು ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳ ಪೀಠವು ದೆಹಲಿ ಗಲಭೆ ಪ್ರಕರಣದ ಐದು ಜನ ಸಹ-ಆರೋಪಿಗಳಿಗೆ ಜಾಮೀನು ನೀಡಿತ್ತಾದರೂ, ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಅವರಿಬ್ಬರು ಗಲಭೆಯ “ಮುಖ್ಯ ಸೂತ್ರಧಾರಿಗಳು” ಎಂದು ಪ್ರಾಸಿಕ್ಯೂಷನ್ ಬಿಂಬಿಸಿದ್ದನ್ನು ಕೋರ್ಟ್ ಒಪ್ಪಿತ್ತು. ಆದರೆ, ಇಂದಿನ ಪೀಠವು ಈ ನಿರ್ಧಾರವು 2021 ರ ‘ಕೇಂದ್ರ ಸರ್ಕಾರ ವರ್ಸಸ್ ಕೆ.ಎ. ನಜೀಬ್’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ಉನ್ನತ ಪೀಠ ನೀಡಿದ್ದ ಬದ್ಧ ತೀರ್ಪಿಗೆ ವಿರುದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ಯುಎಪಿಎ ಕಾಯ್ದೆಯಡಿ ಕಠಿಣ ನಿಯಮಗಳಿದ್ದರೂ, ವಿಚಾರಣೆ ಪೂರ್ಣಗೊಳ್ಳುವುದು ತಡವಾದರೆ ಸಂವಿಧಾನದ ವಿಧಿ 21 ರ ಅಡಿಯಲ್ಲಿ ನಾಗರಿಕರಿಗೆ ಸಿಗಬೇಕಾದ ಬದುಕುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ನಜೀಬ್ ಪ್ರಕರಣದಲ್ಲಿ ಹೇಳಲಾಗಿತ್ತು. ಯುಎಪಿಎ ಕಾಯ್ದೆಯಡಿಯೂ “ಜಾಮೀನು ನೀಡುವುದು ನಿಯಮ, ಜೈಲು ವಿನಾಯಿತಿ” ( “Bail is the rule, jail is the exception” )ಎಂಬ ಸಾಂವಿಧಾನಿಕ ತತ್ವ ಅನ್ವಯವಾಗುತ್ತದೆ. ಕೆಳಮಟ್ಟದ ಅಥವಾ ಸಮಾನ ಪೀಠಗಳು ಉನ್ನತ ಪೀಠದ ಆದೇಶಗಳನ್ನು ಕಡೆಗಣಿಸುವಂತಿಲ್ಲ ಎಂದು ನ್ಯಾಯಾಧೀಶರು ಜ್ಞಾಪಿಸಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಯುಎಪಿಎ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣ ಕೇವಲ ಶೇಕಡಾ 6 ರಷ್ಟಿದೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಇದು ಶೇಕಡಾ 1 ಕ್ಕಿಂತಲೂ ಕಡಿಮೆ ಇದೆ ಎಂಬ ಅಧಿಕೃತ ಅಂಕಿಅಂಶಗಳನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಇಂತಹ ಸಂದರ್ಭಗಳಲ್ಲಿ ವಿಚಾರಣೆಯೇ ಆರಂಭವಾಗದೆ ವರ್ಷಗಟ್ಟಲೆ ಜನರನ್ನು ಜೈಲಿನಲ್ಲಿಡುವುದು ಶಿಕ್ಷೆಗೆ ಸಮಾನವಾಗುತ್ತದೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಕೇವಲ ಗಂಭೀರ ಆರೋಪ ಹೊರಿಸಲಾಗಿದೆ ಎಂಬ ಕಾರಣಕ್ಕೆ ಸುದೀರ್ಘ ಕಾಲ ವಿಚಾರಣೆಯಿಲ್ಲದೆ ಬಂಧನದಲ್ಲಿಡುವುದು ಕಾನೂನುಬಾಹಿರ ಎಂದು ಕೋರ್ಟ್ ಪುನರುಚ್ಚರಿಸಿದೆ.

ಸದ್ಯ ಸೈಯದ್ ಇಫ್ತಿಕಾರ್ ಅಂದ್ರಾಬಿ ಅವರಿಗೆ ಪಾಸ್‌ಪೋರ್ಟ್ ಒಪ್ಪಿಸುವುದು ಸೇರಿದಂತೆ ಕೆಲವು ಷರತ್ತುಗಳೊಂದಿಗೆ ಬಿಡುಗಡೆಗೆ ಆದೇಶಿಸಲಾಗಿದೆ. ಇಂದಿನ ಸುಪ್ರೀಂ ಕೋರ್ಟ್ ಅಭಿಪ್ರಾಯವು ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಪ್ರಕರಣದ ತಕ್ಷಣ ಮರುಪರಿಶೀಲನೆಗೆ ಕಾರಣವಾಗುವುದಿಲ್ಲವಾದರೂ, ಭವಿಷ್ಯದಲ್ಲಿ ಅವರು ಸಲ್ಲಿಸುವ ಜಾಮೀನು ಅರ್ಜಿಗಳಿಗೆ ಮತ್ತು ದೇಶಾದ್ಯಂತ ಜೈಲಿನಲ್ಲಿರುವ ಇತರ ಯುಎಪಿಎ ವಿಚಾರಣಾಧೀನ ಕೈದಿಗಳಿಗೆ ದೊಡ್ಡ ಕಾನೂನು ಆಸರೆಯಾಗಲಿದೆ ಎಂದು ಕಾನೂನು ತಜ್ಞರು ವಿಶ್ಲೇಷಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ತಾಯಿಯ ಆರೈಕೆಗಾಗಿ ಉಮರ್ ಖಾಲಿದ್ ಕೋರಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ

ರಾಜ್ಯ ಸುದ್ದಿ

“ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಅವಕಾಶ ನೀಡುವುದಿಲ್ಲ”: ಶೃಂಗೇರಿ ಶಾಸಕತ್ವ ವಿವಾದದಲ್ಲಿ ಸುಪ್ರೀಂ ಕೋರ್ಟ್ ಚಾಟಿ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

From Across Varadigara

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ಸಾಮಾಜಿಕ ತಾಣ

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ ಜಾಹೀರಾತು; ಮೆಟಾ ಬೇಜವಾಬ್ದಾರಿತನ ಬಯಲಿಗೆಳೆದ ಬಿಬಿಸಿ ತನಿಖಾ ವರದಿ

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಅಂತಾರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಹೊಸ ಆದೇಶ: ಸರ್ಕಾರಿ ನೌಕರರು ಮತ್ತು ಸೇನಾಧಿಕಾರಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ನಿಷೇಧ

ವಿಶೇಷ ಲೇಖನ

ದ್ವೇಷದ ಚಿತೆಗೆ ಮಾನವೀಯತೆಯ ಅಗ್ನಿಸ್ಪರ್ಶ: ಇರ್ಫಾನಾ ಇಕ್ಬಾಲ್ ಮಾನವೀಯ ಪಾಠ | ಕೇರಳದ ರಿಯಲ್ ಸ್ಟೋರಿ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ