ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

Reading…
Follow Us

ಸಾರಾಂಶ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಯಾಗಿರುವ ಡೆರಾ ಸಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ವಿರುದ್ಧ 'ಡ್ರಗ್ ಮಾಫಿಯಾಗಳು ಸಂಚು ರೂಪಿಸಿದ್ದವು' ಎಂಬ ಆಕ್ಷೇಪಾರ್ಹ ಜಾಹೀರಾತು ಪ್ರಕಟಿಸಿದ್ದ ‘ದಿ ಹಿಂದೂ’ ಪತ್ರಿಕೆ ತೀವ್ರ ಸಾರ್ವಜನಿಕ ಆಕ್ರೋಶದ ನಂತರ ತನ್ನ ಓದುಗರಲ್ಲಿ ಬೇಷರತ್ ಕ್ಷಮಾಪಣೆ ಕೋರಿದೆ.

ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಡೆರಾ ಸಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಬೆಂಬಲಿಸಿ ತನ್ನ ದೆಹಲಿ, ಮೊಹಾಲಿ ಹಾಗೂ ಉತ್ತರ ಭಾರತದ ಆವೃತ್ತಿಗಳ ಮುಖಪುಟದಲ್ಲೇ ಪೂರ್ಣ ಪ್ರಮಾಣದ ಜಾಹೀರಾತು ಪ್ರಕಟಿಸಿದ್ದ ದೇಶದ ಪ್ರಮುಖ ಆಂಗ್ಲ ದಿನಪತ್ರಿಕೆ ‘ದಿ ಹಿಂದೂ’ ಸಾರ್ವಜನಿಕ ಆಕ್ರೋಶಕ್ಕೆ ಮಣಿದು ಬೇಷರತ್ ಕ್ಷಮಾಪಣೆ ಯಾಚಿಸಿದೆ. ‘ವಾಟ್ ಈಸ್ ಡೆರಾ ಸಚಾ ಸೌದಾ? (ಫ್ಯಾಕ್ಟ್ಸ್ ವರ್ಸಸ್ ಫಿಕ್ಷನ್)’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗಿದ್ದ ಈ ಜಾಹೀರಾತಿನಲ್ಲಿ, ರಾಮ್ ರಹೀಮ್ ವಿರುದ್ಧದ ಅತ್ಯಾಚಾರ ಪ್ರಕರಣಗಳು “ಸಂಚಿನ ಭಾಗ” ಹಾಗೂ ಸಾಕ್ಷಿಗಳಿಗೆ “ಹಣದ ಆಮಿಷ ಒಡ್ಡಿ ಸುಳ್ಳು ಸಾಕ್ಷಿ ಹೇಳಿಸಲಾಗಿದೆ” ಎಂದು ಪ್ರತಿಪಾದಿಸಲಾಗಿತ್ತು. ಜಾಹೀರಾತು ಪ್ರಕಟವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮ ವಲಯದಲ್ಲಿ ಪತ್ರಿಕೆಯ ವೃತ್ತಿಪರತೆ ಮತ್ತು ನೈತಿಕತೆಯ ಬಗ್ಗೆ ತೀವ್ರ ಪ್ರಶ್ನೆಗಳು ಉದ್ಭವಿಸಿದ ಹಿನ್ನೆಲೆಯಲ್ಲಿ, “ತೀವ್ರ ಆಕ್ಷೇಪಾರ್ಹ ಜಾಹೀರಾತು ಪ್ರಕಟಿಸಿದ್ದಕ್ಕಾಗಿ ಓದುಗರಲ್ಲಿ ಬೇಷರತ್ ಕ್ಷಮಾಪಣೆ ಕೋರುತ್ತೇವೆ” ಎಂದು ಪತ್ರಿಕೆಯು ಬಹಿರಂಗ ಹೇಳಿಕೆ ಬಿಡುಗಡೆ ಮಾಡಿದೆ.

2017ರಲ್ಲಿ ಇಬ್ಬರು ಸಾಧ್ವಿಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಮ್‌ಗೆ ಜೈಲು ಶಿಕ್ಷೆಯಾಗಿದ್ದು, ಪ್ರಸ್ತುತ ಆತನಿಗೆ ಮತ್ತೆ 21 ದಿನಗಳ ಫರ್ಲೋ (ರಜೆ) ನೀಡಲಾಗಿದೆ. ಶಿಕ್ಷೆ ಅವಧಿ ಪ್ರಾರಂಭವಾದಂದಿನಿಂದ ಇದುವರೆಗೆ ರಾಮ್ ರಹೀಮ್ ಒಟ್ಟಾರೆಯಾಗಿ 435 ದಿನಗಳಿಗೂ ಹೆಚ್ಚು ಕಾಲ ಅಂದರೆ ತನಗೆ ವಿಧಿಸಲಾದ ಒಟ್ಟು ಶಿಕ್ಷೆಯ ಅವಧಿಯ ಶೇಕಡಾ 13.5ಕ್ಕಿಂತಲೂ ಹೆಚ್ಚು ಸಮಯವನ್ನು ಜೈಲಿನಿಂದ ಹೊರಗೆ ಕಳೆದಿದ್ದಾನೆ ಎಂದು ಸ್ವತಃ ‘ದಿ ಹಿಂದೂ’ ಪತ್ರಿಕೆಯೇ ಕೆಲ ತಿಂಗಳ ಹಿಂದಿನ ತನ್ನ ವರದಿಯೊಂದರಲ್ಲಿ ಉಲ್ಲೇಖಿಸಿತ್ತು. ಹೀಗಿದ್ದರೂ, ಅದೇ ಪತ್ರಿಕೆಯ ಮುಖಪುಟದಲ್ಲೇ ರಾಮ್ ರಹೀಮ್ ಪರವಾಗಿ ಪ್ರಕಟವಾದ ಜಾಹೀರಾತಿನಲ್ಲಿ, “ರಾಮ್ ರಹೀಮ್ ಅವರಿಗೆ ಜೈಲಿನಿಂದ ಸಿಗುತ್ತಿರುವ ಪರೋಲ್ ಹಾಗೂ ಫರ್ಲೋಗಳು ಯಾವುದೇ ವಿಐಪಿ ಸೌಲಭ್ಯವಲ್ಲ, ಬದಲಿಗೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಕಾನೂನುಬದ್ಧ ಅನುಮತಿಯಂತೆ ಸಿಕ್ಕಿರುವ ಹಕ್ಕು” ಎಂದು ಸಮರ್ಥಿಸಿಕೊಳ್ಳಲಾಗಿತ್ತು.

Front Page ad on ‘The Hindu’

ಈ ಜಾಹೀರಾತಿನಲ್ಲಿ ಡೆರಾ ಸಂಸ್ಥೆಯು ತನ್ನ ನಾಯಕನನ್ನು ಓರ್ವ ಸಮಾಜ ಸುಧಾರಕನಂತೆ ಬಿಂಬಿಸಿದ್ದು, 7.5 ಕೋಟಿ ಜನರನ್ನು ವ್ಯಸನಮುಕ್ತಗೊಳಿಸಲಾಗಿದೆ, 35 ಕೋಟಿಗೂ ಹೆಚ್ಚು ಗಿಡಗಳನ್ನು ನೆಡಲಾಗಿದೆ ಹಾಗೂ 33 ಲಕ್ಷ ಯೂನಿಟ್‌ಗಿಂತಲೂ ಹೆಚ್ಚು ರಕ್ತದಾನ ಮಾಡಲಾಗಿದೆ ಎಂಬ ಅಂಕಿಅಂಶಗಳನ್ನು ಯಾವುದೇ ಅಧಿಕೃತ ಪರಿಶೀಲನೆ ಇಲ್ಲದೆ ಪ್ರಕಟಿಸಲಾಗಿತ್ತು. ಜೊತೆಗೆ ಹಿರಿಯ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣ ಹಾಗೂ ಅನುಯಾಯಿಗಳ ಬಲವಂತದ ನಪುಂಸಕೀಕರಣ ಪ್ರಕರಣ ಸೇರಿದಂತೆ ಹಲವು ಗಂಭೀರ ಕ್ರಿಮಿನಲ್ ಪ್ರಕರಣಗಳ ಇತಿಹಾಸವಿದ್ದರೂ, ಈ ವಿಚಾರಗಳನ್ನು ಮರೆಮಾಚಿ ಅಪರಾಧಿಯ ಪರ ಪ್ರಚಾರಕ್ಕೆ ಜಾಗ ನೀಡಿದ್ದು ಮಾಧ್ಯಮ ನೈತಿಕತೆ, ಪತ್ರಿಕೋದ್ಯಮ ಸಂಸ್ಥೆಗಳ ಬದ್ಧತೆ ಹಾಗೂ ಆದಾಯ ಗಳಿಕೆಯ ಉದ್ದೇಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪ್ರಮುಖ ಪತ್ರಕರ್ತರಿಂದ ವ್ಯಾಪಕ ಆಕ್ಷೇಪಕ್ಕೆ ಕಾರಣವಾಗಿತ್ತು.

Unconditional Apology published by ‘The Hindu’

ಈ ಆಕ್ರೋಶದ ಬೆನ್ನಲ್ಲೇ ‘ದಿ ಹಿಂದೂ’ ಪ್ರಕಟಿಸಿರುವ ಸ್ಪಷ್ಟನೆ-ಕ್ಷಮಾಪಣೆಯಲ್ಲಿ, “ದೆಹಲಿ, ಮೊಹಾಲಿ ಮತ್ತು ಉತ್ತರ ಭಾರತದ ಆವೃತ್ತಿಗಳಲ್ಲಿ ಪ್ರಕಟವಾದ ಈ ಆಕ್ಷೇಪಾರ್ಹ ಜಾಹೀರಾತಿನಲ್ಲಿ, ಅತ್ಯಾಚಾರ ಶಿಕ್ಷೆಗೆ ಗುರಿಯಾದ ರಾಮ್ ರಹೀಮ್ ವಿರುದ್ಧ ಡ್ರಗ್ ಮಾಫಿಯಾ ಮತ್ತು ಡೆರಾ ವಿರೋಧಿ ಶಕ್ತಿಗಳಿಂದ ಸಂಚು ನಡೆದಿದೆ ಎಂಬ ಪ್ರತಿಪಾದನೆ ಸೇರಿದಂತೆ ಹಲವು ವಿವಾದಾತ್ಮಕ ಅಂಶಗಳಿದ್ದವು. ಇಂತಹ ಆಕ್ಷೇಪಾರ್ಹ ಜಾಹೀರಾತು ಪ್ರಕಟಿಸಿದ್ದಕ್ಕಾಗಿ ‘ದಿ ಹಿಂದೂ’ ತನ್ನ ಓದುಗರಲ್ಲಿ ಬೇಷರತ್ ಕ್ಷಮಾಪಣೆ ಯಾಚಿಸುತ್ತದೆ ಮತ್ತು ಈ ಲೋಪಕ್ಕಾಗಿ ತೀವ್ರ ವಿಷಾದ ವ್ಯಕ್ತಪಡಿಸುತ್ತದೆ” ಎಂದು ಅಧಿಕೃತವಾಗಿ ಸ್ಪಷ್ಟಪಡಿಸಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ರಾಷ್ಟ್ರೀಯ ಸುದ್ದಿ

“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

From Across Varadigara

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ರಾಷ್ಟ್ರೀಯ ಸುದ್ದಿ

ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಜ್ಯ ಸುದ್ದಿ

ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಸುತ್ತ - ಮುತ್ತ

Coastal Friends Mangaloreಗೆ ನೂತನ ಸಾರಥ್ಯ: ಅಧ್ಯಕ್ಷರಾಗಿ ಶಮೀರ್ ಲಕ್ಕಿಸ್ಟಾರ್ ಆಯ್ಕೆ

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ಅಂತಾರಾಷ್ಟ್ರೀಯ

ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌