ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

Reading…
Follow Us

ಸಾರಾಂಶ

ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆ ಸ್ಥಾನಮಾನ ನೀಡುವ ಕುರಿತು ಸಚಿವ ಶಿವರಾಜ್ ತಂಗಡಗಿ ಅವರು ಎಕ್ಸ್ (X) ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಆಂಧ್ರಪ್ರದೇಶ ಮಾದರಿ ಅಧ್ಯಯನ ನಡೆಸಿದ್ದ ತಜ್ಞರ ತಂಡವು ಮಾರ್ಚ್ 2026ರಲ್ಲೇ ವರದಿ ಸಲ್ಲಿಸಿದೆ ಎಂದು ತಿಳಿಸಿದ್ದಾರೆ. 2023ರ ಮೋಹನ್ ಆಳ್ವ ಸಮಿತಿ ವರದಿಯ ಮುಂದುವರಿದ ಭಾಗವಾಗಿ ಈ ಪ್ರಕ್ರಿಯೆ ನಡೆದಿದ್ದು, ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ದಶಕಗಳ ಬೇಡಿಕೆಗೆ ಆಡಳಿತಾತ್ಮಕವಾಗಿ ಹೊಸ ವೇಗ ದೊರೆತಿದ್ದು, ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಗಂಭೀರವಾಗಿ ಶ್ರಮಿಸುತ್ತಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಈ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಆಂಧ್ರಪ್ರದೇಶ ಸೇರಿದಂತೆ ನೆರೆರಾಜ್ಯಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ನೀಡಿರುವ ಅಧಿಕೃತ ಭಾಷಾ ಮಾದರಿಯನ್ನು ಪರಿಶೀಲಿಸಲು ರಚಿಸಲಾಗಿದ್ದ ತಜ್ಞರ ಅಧ್ಯಯನ ತಂಡವು ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಮಾರ್ಚ್ 2026ರಲ್ಲಿ ಯಶಸ್ವಿಯಾಗಿ ಸಲ್ಲಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಭಾಷೆಯ ಇತಿಹಾಸ, ಸಮೃದ್ಧ ಸಾಹಿತ್ಯ, ಶಾಸನಗಳು ಹಾಗೂ ಲಿಪಿಯ ಪ್ರಾಚೀನತೆಯನ್ನು ಸಮಗ್ರವಾಗಿ ವಿಶ್ಲೇಷಿಸಿ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯ ತಜ್ಞರ ಸಮಿತಿಯು 2023ರ ಫೆಬ್ರವರಿ 14ರಂದು ಸಲ್ಲಿಸಿದ್ದ ವರದಿಯನ್ನು ಸರ್ಕಾರ ಈ ಪ್ರಕ್ರಿಯೆಗೆ ಮೂಲ ಆಧಾರವಾಗಿಸಿಕೊಂಡಿದೆ. ಇದರ ಮುಂದುವರಿದ ಭಾಗವಾಗಿ 2025ರ ಜುಲೈ 30ರಂದು ರಚನೆಯಾಗಿದ್ದ ವಿಶೇಷ ಅಧ್ಯಯನ ತಂಡವು 2026ರ ಜನವರಿ 19 ಮತ್ತು 20ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಕಾನೂನು ಹಾಗೂ ಆಡಳಿತಾತ್ಮಕ ಅನುಷ್ಠಾನದ ಮಾದರಿಗಳನ್ನು ಪ್ರತ್ಯಕ್ಷವಾಗಿ ಅಧ್ಯಯನ ನಡೆಸಿತ್ತು. ಈ ವರದಿಗಳ ಆಧಾರದ ಮೇಲೆ ತುಳು ಭಾಷೆಗೆ ಸೂಕ್ತ ಶಾಸನಾತ್ಮಕ ಗೌರವ ಕಲ್ಪಿಸಲು ಸರಕಾರವು ಸ್ಪಷ್ಟ ಹಾದಿ ಕಂಡುಕೊಂಡಿದೆ.

ಭಾರತೀಯ ಸಂವಿಧಾನದ 345ನೇ ವಿಚ್ಛೇದನದಡಿ ರಾಜ್ಯಗಳಿಗೆ ಪ್ರಾದೇಶಿಕ ಭಾಷೆಯೊಂದನ್ನು ಅಧಿಕೃತ ಭಾಷೆಯನ್ನಾಗಿ ಗುರುತಿಸಲು ಅವಕಾಶವಿದ್ದು, ‘ಕರ್ನಾಟಕ ಅಧಿಕೃತ ಭಾಷೆಗಳ ಕಾಯ್ದೆ-1963’ಕ್ಕೆ ಅಗತ್ಯ ತಿದ್ದುಪಡಿ ತರುವ ಮೂಲಕ ತುಳುವಿಗೆ ಈ ಸ್ಥಾನಮಾನ ಒದಗಿಸಲು ಕಾನೂನಾತ್ಮಕ ಹಾದಿ ಸುಗಮವಾಗಿದೆ. ಕರಾವಳಿಯ ಶ್ರೀಮಂತ ಸಾಂಸ್ಕೃತಿಕ ಹಾಗೂ ಭಾಷಿಕ ಪರಂಪರೆಯ ರಕ್ಷಣೆಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಪುನರುಚ್ಚರಿಸಿರುವ ಸಚಿವರು, ಕರಾವಳಿ ಭಾಗದ ಜನಪ್ರತಿನಿಧಿಗಳು ಹಾಗೂ ತಜ್ಞರೊಂದಿಗೆ ಮುಂದಿನ ಹಂತದ ನಿರ್ಧಾರಗಳನ್ನು ಕೈಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ ಪೋಸ್ಟ್‌ನ ಕೊನೆಯಲ್ಲಿ “ಯಾನ್ ಏಪಲಾ ಜನಕ್ಲೆನ ಭಾವನೆಲೆನ ಒಟ್ಟುಗು ಇಪ್ಪು” (ನಾನು ಯಾವಾಗಲೂ ಜನರ ಭಾವನೆಗಳೊಂದಿಗೆ ಇರುತ್ತೇನೆ) ಎಂದು ತುಳು ಭಾಷೆಯಲ್ಲೇ ಬರೆಯುವ ಮೂಲಕ ಸಚಿವರು ಕರಾವಳಿ ಜನರ ಭಾವನೆಗಳಿಗೆ ಸ್ಪಂದಿಸಿದ್ದು, ಇದು ತುಳು ಅಭಿಮಾನಿಗಳಲ್ಲಿ ಹೊಸ ಆಶಾವಾದ ಮೂಡಿಸಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

From Across Varadigara

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

ರಾಷ್ಟ್ರೀಯ ಸುದ್ದಿ

ಹಿಜಾಬ್ ಇಸ್ಲಾಂನ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ: ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸುತ್ತ - ಮುತ್ತ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು: 2026-27ರ ಸಾಲಿಗೆ ನೂತನ ನಾಯಕರ ಆಯ್ಕೆ

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ರಾಜ್ಯ ಸುದ್ದಿ

‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ರಾಷ್ಟ್ರೀಯ ಸುದ್ದಿ

ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ

ರಾಷ್ಟ್ರೀಯ ಸುದ್ದಿ

“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್‌ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಜ್ಯ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!

ರಾಜ್ಯ ಸುದ್ದಿ

ಬ್ಯಾಂಕಿಂಗ್‌ನಲ್ಲಿ ಕನ್ನಡ ಸೇವೆಗೆ ಸಚಿವ ಶಿವರಾಜ್ ತಂಗಡಗಿ ಕರೆ

ರಾಜ್ಯ ಸುದ್ದಿ

ಮಂಗಳೂರು ರೈಲ್ವೆ ವ್ಯಾಪ್ತಿ ವರ್ಗಾವಣೆ: ತೀರ್ಮಾನ ತಡೆಹಿಡಿಯಲು ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಕೇರಳ ಸಿಎಂ ವಿ. ಡಿ. ಸತೀಶನ್

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು