ಉತ್ತರ ಪ್ರದೇಶದ ಶಹಜಹಾನ್ಪುರ ಮಹಾನಗರ ಪಾಲಿಕೆಯ ಸದಸ್ಯರು ಭ್ರಷ್ಟಾಚಾರದ ವಿಚಾರದಲ್ಲಿ ವಿಚಿತ್ರ ಪ್ರಮಾಣ ವಚನ ಸ್ವೀಕರಿಸಿದ್ದಾರೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರತಿಯೊಬ್ಬರೂ ತಮ್ಮ ತಮ್ಮ ಕೈಗಳಲ್ಲಿ ಪವಿತ್ರ ಗಂಗಾಜಲವನ್ನು ಹಿಡಿದುಕೊಂಡು, “ಪಾಲಿಕೆಯಿಂದ ಬರುವ ಲಂಚದ ಹಣವನ್ನು 60 ಮಂದಿ ಕಾರ್ಪೊರೇಟರ್ಗಳು ಸಮಾನವಾಗಿ ಹಂಚಿಕೊಳ್ಳಬೇಕು” ಎಂದು ಪ್ರಮಾಣ ಮಾಡುತ್ತಿರುವ ದೃಶ್ಯಗಳು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಗುಂಪಿನಲ್ಲಿದ್ದ ಪ್ರತಿಯೊಬ್ಬರೂ ತಮ್ಮ ಅಂಗೈಯಲ್ಲಿ ಗಂಗಾಜಲವನ್ನು ಹಿಡಿದುಕೊಂಡು ಶಪಥ ಮಾಡುವುದನ್ನು ಕಾಣಬಹುದು. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಲಂಚದ ಆದಾಯವನ್ನು ಪ್ರತಿಯೊಬ್ಬ ಕಾರ್ಪೊರೇಟರ್ಗೆ ಪ್ರಾಮಾಣಿಕವಾಗಿ ಹಾಗೂ ಸಮಾನವಾಗಿ ಹಂಚಿಕೆ ಮಾಡಬೇಕು ಮತ್ತು ಈ ವಿಚಾರದಲ್ಲಿ ಯಾರಾದರೂ ಸಂಕಷ್ಟಕ್ಕೆ ಸಿಲುಕಿದರೆ ಇಡೀ ಗುಂಪು ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಅಲ್ಲಿದ್ದವರು ಶಪಥ ಮಾಡುತ್ತಿರುವುದು ವಿಡಿಯೋದಲ್ಲಿದೆ. ಅಷ್ಟೇ ಅಲ್ಲದೆ, ಈ ಒಪ್ಪಂದವನ್ನು ಮುರಿದು ವಂಚಿಸುವವರನ್ನು ‘ದ್ರೋಹಿ’ ಎಂದು ಕರೆಯುವ ಮಾತುಗಳೂ ವಿಡಿಯೋದಲ್ಲಿ ದಾಖಲಾಗಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಾವಳಿಗಳು ಹರಿದಾಡುತ್ತಿದ್ದಂತೆ, ಪಾಲಿಕೆಯ ಕಾರ್ಪೊರೇಟರ್ಗಳ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ಕೆಲವು ಬಳಕೆದಾರರು ಕೆಲ ನಿರ್ದಿಷ್ಟ ಜನಪ್ರತಿನಿಧಿಗಳ ಆಸ್ತಿ ಗಳಿಕೆಯ ಬಗ್ಗೆಯೂ ಪ್ರಶ್ನೆ ಎತ್ತಿದ್ದು, ಮೂರು ವರ್ಷಗಳ ಹಿಂದೆ ಕೇವಲ ಒಂದು ಮನೆ ಹೊಂದಿದ್ದ ಜನಪ್ರತಿನಿಧಿಯೊಬ್ಬರು ಈಗ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಐಷಾರಾಮಿ ವಾಹನಗಳನ್ನು ಹೇಗೆ ಸಂಪಾದಿಸಿದರು ಎಂದು ಸಾರ್ವಜನಿಕವಾಗಿ ಪ್ರಶ್ನಿಸುತ್ತಿದ್ದಾರೆ.
ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ
ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ
CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ
ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ, 2029ರಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿ: ಡಿಕೆಶಿ ಭವಿಷ್ಯ!
ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್ನಲ್ಲಿ ವಿನೂತನ ಪ್ರತಿಭಟನೆ
ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ
ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್ ಸಂಗ್ರಹ!
ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್
ಈ ವಿಡಿಯೋ ಸೃಷ್ಟಿಸಿರುವ ವಿವಾದದ ಬೆನ್ನಲ್ಲೇ ಆಡಳಿತ ಯಂತ್ರ ಎಚ್ಚೆತ್ತುಕೊಂಡಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಹಜಹಾನ್ಪುರ ಮಹಾನಗರ ಪಾಲಿಕೆ ಆಯುಕ್ತೆ ಸೌಮ್ಯಾ ಗುರುರಾಣಿ, ಈ ವಿಡಿಯೋ 2025ರ ನವೆಂಬರ್ ಅವಧಿಯದ್ದು ಎನ್ನಲಾಗಿದ್ದು, ಆ ಸಮಯದಲ್ಲಿ ಬೇರೊಬ್ಬರು ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿಸಿದ್ದಾರೆ. ಘಟನೆ ಹಳೆಯದಾಗಿದ್ದರೂ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿಡಿಯೋದ ಸತ್ಯಾಸತ್ಯತೆ ಮತ್ತು ಅದರಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಗುರುತನ್ನು ಪಾಲಿಕೆ ಆಡಳಿತ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ತನಿಖಾ ವರದಿ ಬಂದ ನಂತರವಷ್ಟೇ ವಿಡಿಯೋದಲ್ಲಿರುವವರು ನಿಜಕ್ಕೂ ಪಾಲಿಕೆಯ ಕಾರ್ಪೊರೇಟರ್ಗಳೇ ಅಥವಾ ಬೇರೆಯವರೇ ಎಂಬುದು ಹಾಗೂ ಅವರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕುರಿತು ನಿರ್ಧಾರವಾಗಲಿದೆ.
