ಉತ್ತರ ಪ್ರದೇಶದಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಯುವಜನರ ಸಮಸ್ಯೆಗಳನ್ನು ಮುನ್ನೆಲೆಗೆ ತರಲು ಹಲವು ಯುವ ಸಂಘಟನೆಗಳು ಒಂದಾಗಿ ‘ಜಸ್ಟಿಸ್ ಮೋರ್ಚಾ’ ವೇದಿಕೆಯನ್ನು ರಚಿಸಿವೆ. ಲಕ್ನೋ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೋರ್ಚಾ ನಾಯಕರು ರಾಜ್ಯದಾದ್ಯಂತ 50 ದಿನಗಳ ಬೃಹತ್ ಜಾಗೃತಿ ಅಭಿಯಾನವನ್ನು ಪ್ರಕಟಿಸಿದ್ದಾರೆ. ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಜಿನ್ ಝಿ ಪ್ರತಿಭಟನೆಗಳಿಂದ ಪ್ರೇರಣೆ ಪಡೆದು ಈ ನಿರ್ಧಾರ ತಳೆಯಲಾಗಿದೆ.
ಈ ಅಭಿಯಾನವು ಆಗಸ್ಟ್ 12ರಿಂದ ಚಾಲನೆ ಪಡೆಯಲಿದ್ದು, ರಾಜ್ಯದ 75 ಜಿಲ್ಲೆಗಳ 800ಕ್ಕೂ ಹೆಚ್ಚು ಕಾಲೇಜು ಹಾಗೂ ತರಬೇತಿ ಕೇಂದ್ರಗಳಲ್ಲಿ ಸಂವಾದ ಮತ್ತು ಸಾರ್ವಜನಿಕ ಚರ್ಚೆಗಳು ನಡೆಯಲಿವೆ. ಜೊತೆಗೆ ಆಗಸ್ಟ್ 20ರಂದು ಚೌರಿ ಚೌರಾದಿಂದ ಆರಂಭವಾಗುವ ಬೃಹತ್ ಸೈಕಲ್ ಜಾಥಾ, ಅಕ್ಟೋಬರ್ 2ರಂದು ಲಕ್ನೋದ ಕಾಕೋರಿಯಲ್ಲಿ ಮುಕ್ತಾಯಗೊಳ್ಳಲಿದೆ.
ಮೋರ್ಚಾ ಪ್ರಮುಖವಾಗಿ 10 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ವಾರ್ಷಿಕ ಪರೀಕ್ಷಾ ಕ್ಯಾಲೆಂಡರ್ ಪ್ರಕಟಿಸುವುದು, ಸರ್ಕಾರಿ ಖಾಲಿ ಹುದ್ದೆಗಳ ತಕ್ಷಣ ಭರ್ತಿ, ರಾಷ್ಟ್ರೀಯ ಶಿಕ್ಷಣ ನೀತಿ 2020 ಮತ್ತು ಎನ್ಟಿಎ ರದ್ದು, ಗುತ್ತಿಗೆ ಪದ್ಧತಿ ಕೊನೆಗೊಳಿಸಿ ಸಮಾನ ವೇತನ ನೀಡುವುದು, ಪರೀಕ್ಷಾ ಸೋರಿಕೆ ವಿರುದ್ಧ ಪ್ರತಿಭಟಿಸಿದವರ ಮೇಲಿನ ಪ್ರಕರಣ ಹಿಂಪಡೆಯುವುದು ಹಾಗೂ ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣ ಇವುಗಳಲ್ಲಿ ಮುಖ್ಯವಾಗಿವೆ.
ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?
ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!
‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ
ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ
