ಅಂತಾರಾಷ್ಟ್ರೀಯ

ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!

Reading…
Follow Us

ಸಾರಾಂಶ

ಭಾರತದ ಸರಕುಗಳ ಮೇಲೆ ಶೇ. 12.5 ರಷ್ಟು ಹೆಚ್ಚುವರಿ ಸುಂಕ ವಿಧಿಸಲು ಅಮೆರಿಕ ಪ್ರಸ್ತಾಪಿಸಿದೆ. ಬಲವಂತದ ದುಡಿಮೆ ತಡೆಯದ ಹಿನ್ನೆಲೆಯಲ್ಲಿ ಯುಎಸ್‌ಟಿಆರ್ ಈ ಕ್ರಮಕ್ಕೆ ಮುಂದಾಗಿದ್ದು, ಔಷಧ ಮತ್ತು ಬಟ್ಟೆ ಉದ್ಯಮಕ್ಕೆ ಹೊಡೆತ ಬೀಳಲಿದೆ. ಆದರೆ ಗೋಮಾಂಸ, ಕಾಫಿ ಹಾಗೂ ಹಣ್ಣುಗಳಿಗೆ ಈ ಸುಂಕದಿಂದ ವಿನಾಯಿತಿ ನೀಡಲಾಗಿದೆ. ಇದು ಸದ್ಯಕ್ಕೆ ಪ್ರಸ್ತಾಪ ಮಾತ್ರವಾಗಿದ್ದು, ಅಂತಿಮ ತೀರ್ಮಾನವಾಗಿಲ್ಲ. ಈ ಕುರಿತು ಸಾರ್ವಜನಿಕರು ಮತ್ತು ಉದ್ಯಮಿಗಳು ಜುಲೈ 6ರ ಒಳಗಾಗಿ ಅಭಿಪ್ರಾಯ ಸಲ್ಲಿಸಲು ಅಮೆರಿಕ ಅವಕಾಶ ನೀಡಿದೆ.

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ವಸ್ತುಗಳ ಮೇಲೆ ಶೇ. 12.5 ರಷ್ಟು ಹೆಚ್ಚುವರಿ ಸುಂಕ (ತೆರಿಗೆ) ವಿಧಿಸಲು ಅಮೆರಿಕ ಸರ್ಕಾರ ಹೊಸ ಪ್ರಸ್ತಾಪ ಮಾಡಿದೆ. ಕಡ್ಡಾಯ ಕಾರ್ಮಿಕ ಪದ್ಧತಿ ಅಥವಾ ಬಲವಂತದ ದುಡಿಮೆಯ ಮೂಲಕ ತಯಾರಾಗುವ ವಸ್ತುಗಳನ್ನು ತಡೆಯಲು ಭಾರತ ಸೇರಿದಂತೆ 60 ದೇಶಗಳು ಕಠಿಣ ನಿಯಮ ರೂಪಿಸಿಲ್ಲ ಎಂಬುದು ಅಮೆರಿಕದ ವಾದ. ಅಮೆರಿಕದ ವ್ಯಾಪಾರ ಪ್ರತಿನಿಧಿ (ಯುಎಸ್‌ಟಿಆರ್) ಈ ಹೊಸ ನೀತಿಯನ್ನು ಪ್ರಕಟಿಸಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.  

ಈ ಹೊಸ ನಿಯಮ ಜಾರಿಗೆ ಬಂದರೆ ಅಮೆರಿಕಕ್ಕೆ ರಫ್ತಾಗುವ ಭಾರತದ ಔಷಧಗಳು, ಸಿದ್ಧ ಉಡುಪುಗಳು, ಜವಳಿ, ರತ್ನ-ಆಭರಣ ಹಾಗೂ ವಾಹನ ಬಿಡಿಭಾಗಗಳ ಬೆಲೆ ದುಬಾರಿಯಾಗಲಿದೆ. ಇದರಿಂದ ಭಾರತದ ರಫ್ತುದಾರರಿಗೆ ಮತ್ತು ಇಲ್ಲಿನ ಉದ್ಯೋಗಾವಕಾಶಗಳಿಗೆ ದೊಡ್ಡ ಹೊಡೆತ ಬೀಳುವ ಆತಂಕ ಎದುರಾಗಿದೆ. ಈಗಾಗಲೇ ಕೆಲವು ನಿಯಮಗಳನ್ನು ಜಾರಿ ಮಾಡಿರುವ ಕೆನಡಾ ಮತ್ತು ಮೆಕ್ಸಿಕೋದಂತಹ ದೇಶಗಳಿಗೆ ಶೇ. 10 ರಷ್ಟು ಮಾತ್ರ ತೆರಿಗೆ ವಿಧಿಸಲು ನಿರ್ಧರಿಸಲಾಗಿದ್ದು, ಭಾರತ ಸೇರಿದಂತೆ 54 ದೇಶಗಳಿಗೆ ಶೇ. 12.5 ರಷ್ಟು ಭಾರಿ ಸುಂಕ ನಿಗದಿಪಡಿಸಲಾಗಿದೆ.  

ಗೋಮಾಂಸ, ಕಾಫಿ ಮತ್ತು ಹಣ್ಣುಗಳಿಗೆ ವಿನಾಯಿತಿ

ಆದರೆ, ಈ ಪ್ರಸ್ತಾಪದಿಂದ ಕೆಲವು ಪ್ರಮುಖ ಆಹಾರ ಪದಾರ್ಥಗಳಿಗೆ ವಿನಾಯಿತಿ ನೀಡಲಾಗಿದೆ. ವಿಶೇಷವಾಗಿ ಗೋಮಾಂಸ (Beef), ಕಾಫಿ, ಹಾಗೂcಕೆಲವು ಹಣ್ಣು ಮತ್ತು ಒಣಹಣ್ಣುಗಳ (Nuts) ರಫ್ತಿನ ಮೇಲೆ ಈ ಹೆಚ್ಚುವರಿ ತೆರಿಗೆ ಅನ್ವಯಿಸುವುದಿಲ್ಲ ಎಂದು ಯುಎಸ್‌ಟಿಆರ್ ತಿಳಿಸಿದೆ. ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಕೃಷಿ ಮತ್ತು ಆಹಾರ ಉತ್ಪನ್ನಗಳ ದೃಷ್ಟಿಯಿಂದ ಈ ವಿನಾಯಿತಿ ಮಹತ್ವದ್ದಾಗಿದೆ.  

ಇದು ಸದ್ಯಕ್ಕೆ ಪ್ರಸ್ತಾಪ ಮಾತ್ರವಾಗಿದ್ದು, ಅಂತಿಮ ತೀರ್ಮಾನವಾಗಿಲ್ಲ. ಈ ಕುರಿತು ಸಾರ್ವಜನಿಕರು ಮತ್ತು ಉದ್ಯಮಿಗಳು ಜುಲೈ 6ರ ಒಳಗಾಗಿ ಅಭಿಪ್ರಾಯ ಸಲ್ಲಿಸಲು ಅಮೆರಿಕ ಅವಕಾಶ ನೀಡಿದೆ. ಈ ವರ್ಷದ ಆರಂಭದಲ್ಲಷ್ಟೇ ಭಾರತ ಮತ್ತು ಅಮೆರಿಕ ಕೆಲವು ವಾಣಿಜ್ಯ ಸುಂಕಗಳನ್ನು ಕಡಿತಗೊಳಿಸಲು ಒಪ್ಪಂದ ಮಾಡಿಕೊಂಡಿದ್ದವು. ಇದರ ಬೆನ್ನಲ್ಲೇ ಅಮೆರಿಕದ ಈ ದಿಢೀರ್ ನಡೆ ಉಭಯ ದೇಶಗಳ ಆರ್ಥಿಕ ಮಾತುಕತೆಗಳಿಗೆ ಸವಾಲಾಗಿದೆ. ಈ ವಿಷಯದ ಕುರಿತು ಭಾರತ ಸರ್ಕಾರ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಅಂತಾರಾಷ್ಟ್ರೀಯ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626ಕ್ಕೆ ಏರಿಕೆ; 2,478 ಮಂದಿ ನಾಪತ್ತೆ

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ಅಂತಾರಾಷ್ಟ್ರೀಯ

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

From Across Varadigara

ರಾಷ್ಟ್ರೀಯ ಸುದ್ದಿ

ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಘೋಷಿಸಿದ ಸಿಜೆಪಿ

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ರಾಜ್ಯ ಸುದ್ದಿ

ರಿಕ್ಷಾ ಚಾಲಕ ಗುರುಪ್ರಸಾದ್‌ ಹೃದಯಾಘಾತದಿಂದ ನಿಧನ: ಮೃತರಿಗೆ ಗೌರವಾರ್ಥ ಮಿಲಾದ್ ಕಾರ್ಯಕ್ರಮ ಮುಂದೂಡಿದ ಮಸೀದಿ ಆಡಳಿತ

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ರಾಷ್ಟ್ರೀಯ ಸುದ್ದಿ

“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್‌ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ

ಸುತ್ತ - ಮುತ್ತ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು: 2026-27ರ ಸಾಲಿಗೆ ನೂತನ ನಾಯಕರ ಆಯ್ಕೆ

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ರಾಷ್ಟ್ರೀಯ ಸುದ್ದಿ

ಅತ್ಯಾಚಾರ ದೋಷಿ ರಾಮ್ ರಹೀಮ್‌ಗೆ ಮತ್ತೆ 21 ದಿನಗಳ ಪರೋಲ್: 5 ವರ್ಷಗಳಲ್ಲಿ 17ನೇ ಬಾರಿಗೆ ಜೈಲಿನಿಂದ ಬಿಡುಗಡೆ!

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ಸುದ್ದಿ

NRIಗಳಿಗೆ ಪ್ರತ್ಯೇಕ ಇಲಾಖೆ: ಕರ್ನಾಟಕ ಸಚಿವ ಸಂಪುಟದಿಂದ ಮಹತ್ವದ ಅನುಮೋದನೆ

ರಾಷ್ಟ್ರೀಯ ಸುದ್ದಿ

ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ

ರಾಜ್ಯ ಸುದ್ದಿ

SIR: 1 ಕೋಟಿಗೂ ಹೆಚ್ಚು ಹೆಸರುಗಳ ASDDO ವರ್ಗೀಕರಣ; ಪರಿಶೀಲನೆಗೆ ಹೆಚ್ಚಿನ ಕಾಲಾವಕಾಶ ಮತ್ತು ನಿಗದಿತ ಪ್ರಕ್ರಿಯೆ ಅನುಸರಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ಸಿಎಂ ಪತ್ರ