ಕಾಣಿಸದ್ದು - ಕೇಳಿಸದ್ದು

ಅಂತರ್ಜಾತಿ ಗೆಳೆತನದ ಹಿನ್ನೆಲೆ: ದಲಿತ ವಿದ್ಯಾರ್ಥಿಯ ಕ್ರೂರ ಕೊಲೆ, ಇಬ್ಬರ ಬಂಧನ

Reading…
Follow Us

ಸಾರಾಂಶ

ಉತ್ತರಾಖಂಡದ ತೆಹ್ರಿ ಗರ್ವಾಲ್‌ನಲ್ಲಿ ಬೇರೆ ಜಾತಿಯ ಅಪ್ರಾಪ್ತ ಹುಡುಗಿಯೊಂದಿಗೆ ಸ್ನೇಹ ಹೊಂದಿದ್ದ ಕಾರಣಕ್ಕೆ ಕೇತನ್ ಲಾಲ್ (18) ಎಂಬ ದಲಿತ ವಿದ್ಯಾರ್ಥಿಯನ್ನು ಹುಡುಗಿಯ ಕುಟುಂಬಸ್ಥರು ರಾತ್ರಿಯಿಡೀ ಕೂಡಿಹಾಕಿ, ಕಾಲುಗಳಿಗೆ ಮೊಳೆ ಹೊಡೆದು ಕ್ರೂರವಾಗಿ ಕೊಲೆ ಮಾಡಿದ್ದಾರೆ. ದಾಳಿಯಲ್ಲಿ ಯುವಕನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಹುಡುಗಿಯ ತಂದೆ ಮತ್ತು ಅಜ್ಜನನ್ನು ಪೊಲೀಸರು ಬಂಧಿಸಿದ್ದು, ಕೊಲೆ ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಡೆಹ್ರಾಡೂನ್: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯ ಪ್ರತಾಪನಗರ ಬ್ಲಾಕ್‌ನಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ಬೇರೆ ಜಾತಿಯ ಅಪ್ರಾಪ್ತ ಹುಡುಗಿಯೊಂದಿಗೆ ಸ್ನೇಹ ಹೊಂದಿದ್ದ ಕಾರಣಕ್ಕೆ ೧೮ ವರ್ಷದ ದಲಿತ ವಿದ್ಯಾರ್ಥಿಯೊಬ್ಬನನ್ನು ಹುಡುಗಿಯ ಕುಟುಂಬಸ್ಥರು ರಾತ್ರಿಯಿಡೀ ಕೂಡಿ ಹಾಕಿ, ಅತ್ಯಂತ ಕ್ರೂರವಾಗಿ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹುಡುಗಿಯ ತಂದೆ ಮತ್ತು ಅಜ್ಜನನ್ನು ಪೊಲೀಸರು ಬಂಧಿಸಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಕೊಲೆ ಪ್ರಕರಣದ ಅಡಿಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

ಮೃತರನ್ನು ದೇವಲ್ ಗ್ರಾಮದ ನಿವಾಸಿ, ದ್ವಿತೀಯ ಪಿಯುಸಿ (ಕ್ಲಾಸ್ 12) ವಿದ್ಯಾರ್ಥಿ ಕೇತನ್ ಲಾಲ್ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಕೇತನ್ ಅವರ ಸ್ನೇಹಿತ ದಿವಾಕರ್ ದಿಮ್ರಿ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇತನ್ ಅವರ ತಂದೆ ಧನಪಾಲ್ ಲಾಲ್ ನೀಡಿರುವ ದೂರಿನ ಪ್ರಕಾರ, ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಪ್ರಾಪ್ತ ಹುಡುಗಿಯ ಫೋನ್‌ನಿಂದ ಬಂದ ಕರೆಯ ಆಧಾರದ ಮೇಲೆ ಕೇತನ್ ಮತ್ತು ದಿವಾಕರ್ ಲಂಬಗಾಂವ್ ಪ್ರದೇಶದಲ್ಲಿದ್ದ ಹುಡುಗಿಯ ಮನೆಗೆ ಹೋಗಿದ್ದರು. ಈ ವೇಳೆ ಹುಡುಗಿಯ ಕುಟುಂಬದವರು ಅವರಿಬ್ಬರನ್ನು ಹಿಡಿದು ಕೋಣೆಯೊಂದರಲ್ಲಿ ಕೂಡಿಹಾಕಿದ್ದಾರೆ. ನಂತರ ರಾತ್ರಿಯಿಡೀ ದೊಣ್ಣೆಗಳು, ಕಬ್ಬಿಣದ ರಾಡ್‌ಗಳು ಮತ್ತು ಬೆಲ್ಟ್‌ಗಳಿಂದ ಇಬ್ಬರ ಮೇಲೂ ಭೀಕರವಾಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ಹಲ್ಲೆಯ ಸಂದರ್ಭದಲ್ಲಿ ಜಾತಿ ನಿಂದನೆ ಮಾಡಿದ್ದಲ್ಲದೆ, ಕೇತನ್ ಅವರ ಕಾಲುಗಳಿಗೆ ಮೊಳೆಗಳನ್ನು ಹೊಡೆದು ವಿಕೃತವಾಗಿ ಹಿಂಸಿಸಿದ್ದಾರೆ ಎಂದು ತಂದೆ ಧನಪಾಲ್ ಲಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಕೇತನ್ ಅತ್ಯಂತ ಕಷ್ಟದಿಂದ ಮಾತನಾಡಿದ್ದು, ತನಗೆ ಆದ ಹಿಂಸೆಯನ್ನು ವಿವರಿಸಿದ್ದಾಗಿ ಅವರು ಕಣ್ಣೀರು ಹಾಕಿದ್ದಾರೆ. ಮೃತದೇಹದ ಮೇಲೂ ತೀವ್ರವಾದ ಗಾಯದ ಗುರುತುಗಳು ಮತ್ತು ಮೊಳೆ ಹೊಡೆದಂತಹ ರಂಧ್ರಗಳು ಕಂಡುಬಂದಿವೆ ಎಂದು ವರದಿಯಾಗಿದೆ.

ಸೋಮವಾರ ಮುಂಜಾನೆ ಹುಡುಗಿಯ ತಂದೆ ಯಶ್‌ಬೀರ್ ಸಿಂಗ್ ಪನ್ವಾರ್, ಧನಪಾಲ್ ಲಾಲ್ ಅವರಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದು, “ನಿಮ್ಮ ಹುಡುಗರಿಗೆ ಸರಿಯಾಗಿ ಧರ್ಮದೇಟು ನೀಡಲಾಗಿದೆ, ಹೋಗಿ ಹಳ್ಳದ ಬಳಿ ಬಿದ್ದಿರುವ ಅವರ ಹೆಣಗಳನ್ನು ಎತ್ತಿಕೊಂಡು ಹೋಗಿ” ಎಂದು ಹೇಳಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ತಕ್ಷಣವೇ ಎಚ್ಚೆತ್ತ ಧನಪಾಲ್ ಅವರು ದಿವಾಕರ್ ಕುಟುಂಬಕ್ಕೆ ವಿಷಯ ಮುಟ್ಟಿಸಿ ಸ್ಥಳಕ್ಕೆ ಧಾವಿಸಿದಾಗ ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಕೇತನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೇತನ್ ಮತ್ತು ಆ ಅಪ್ರಾಪ್ತ ಹುಡುಗಿ ಕಳೆದ ಆರು ತಿಂಗಳಿನಿಂದ ಸ್ನೇಹಿತರಾಗಿದ್ದರು. ಆದರೆ ಹುಡುಗಿಯ ಕುಟುಂಬಸ್ಥರು ಈ ಸ್ನೇಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಎಂದು ಪೊಲೀಸರು ಖಚಿತಪಡಿಸಿದ್ದಾರೆ. ತೆಹ್ರಿ ಗರ್ವಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶ್ವೇತಾ ಚೌಬೆ ಮಾತನಾಡಿ, “ಹುಡುಗಿಯ ತಂದೆ ಈ ಹಿಂದೆ ಕೇತನ್ ತಂದೆಯನ್ನು ಭೇಟಿಯಾಗಿ, ತನ್ನ ಮಗಳ ಸಂಪರ್ಕಕ್ಕೆ ಬಾರದಂತೆ ಮಗನಿಗೆ ತಿಳಿಹೇಳಲು ಎಚ್ಚರಿಸಿದ್ದರು. ಭಾನುವಾರ ರಾತ್ರಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆ ಯಶ್‌ಬೀರ್ ಸಿಂಗ್ ಪನ್ವಾರ್ ಮತ್ತು ಅಜ್ಜ ವಿದ್ಯಾದತ್ ಪನ್ವಾರ್ ಹಾಗೂ ಇತರ ಕೆಲವು ಅಪರಿಚಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 103(1) (ಕೊಲೆ), 3(5) (ಸಮಾನ ಉದ್ದೇಶ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಹೆಸರಿಸಲಾದ ಇಬ್ಬರು ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಂಡವು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ಈ ಘಟನೆಯು ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಗ್ರಾಮ ಪ್ರಧಾನ ದಿನೇಶ್ ಶಾ ಮಾತನಾಡಿ, “ಒಂದು ವೇಳೆ ಹುಡುಗರು ತಪ್ಪು ಮಾಡಿದ್ದರೆ, ಹುಡುಗಿಯ ಕುಟುಂಬಸ್ಥರು ಅವರ ಪೋಷಕರಿಗೆ ಅಥವಾ ಪೊಲೀಸರಿಗೆ ದೂರು ನೀಡಬೇಕಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆಟುಕಿಕೊಂಡು ಯುವಕನನ್ನು ಹಿಂಸಿಸಿ ಕೊಲ್ಲುವ ಹಕ್ಕು ಅವರಿಗೆ ಕೊಟ್ಟವರು ಯಾರು?” ಎಂದು ಪ್ರಶ್ನಿಸಿದ್ದಾರೆ. ಭೀತಿಯಲ್ಲಿರುವ ಸಂತ್ರಸ್ತ ಕುಟುಂಬವು ತಮಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದೆ. ಗ್ರಾಮೀಣ ಉತ್ತರಾಖಂಡದಲ್ಲಿ ಅಂತರ್ಜಾತಿ ಸಂಬಂಧಗಳ ಸುತ್ತಲಿನ ಸಾಮಾಜಿಕ ಸೂಕ್ಷ್ಮತೆಗಳು ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ಈ ಘಟನೆ ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಕಾಣಿಸದ್ದು - ಕೇಳಿಸದ್ದು

ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ

ರಾಷ್ಟ್ರೀಯ ಸುದ್ದಿ

ಕೋಮು ಸೌಹಾರ್ದತೆಯ ಬೆಲೆ: ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ‘ಮೊಹಮ್ಮದ್ ದೀಪಕ್’ ಜಿಮ್ ಮುಚ್ಚುವ ಭೀತಿಯಲ್ಲಿ!

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

From Across Varadigara

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ